AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಿದ್ದಕ್ಕೆ ಮಹಿಳೆ ಆತ್ಮಹತ್ಯೆ​; ‘ಪುಷ್ಪ’ ಚಿತ್ರದ ನಟ ಅರೆಸ್ಟ್​

ಕಿರುಕುಳಕ್ಕೆ ಒಳಗಾದ ಮಹಿಳೆ ನವೆಂಬರ್​ 29ರಂದು ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಆ ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ಜಗದೀಶ್ ಕೈವಾಡ ಇರುವುದು ತಿಳಿಯಿತು. ಪೊಲೀಸರ ಕೈಗೆ ಸಿಗದಂತೆ ತಲೆ ಮರೆಸಿಕೊಂಡು ಜಗದೀಶ್​ ಓಡಾಡುತ್ತಿದ್ದರು. ಆದರೆ ಬುಧವಾರ (ಡಿಸೆಂಬರ್ 6) ಅವರನ್ನು ಬಂಧಿಸಿ, ಕೋರ್ಟ್​ಗೆ ಹಾಜರುಪಡಿಸಲಾಗಿದೆ.

ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಿದ್ದಕ್ಕೆ ಮಹಿಳೆ ಆತ್ಮಹತ್ಯೆ​; ‘ಪುಷ್ಪ’ ಚಿತ್ರದ ನಟ ಅರೆಸ್ಟ್​
ಅಲ್ಲು ಅರ್ಜುನ್​, ಜಗದೀಶ್​
ಮದನ್​ ಕುಮಾರ್​
|

Updated on: Dec 07, 2023 | 7:13 AM

Share

‘ಪುಷ್ಪ’ ಸಿನಿಮಾ (Pushpa Movie) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಂಡಿದ್ದರಿಂದ ಆ ಚಿತ್ರದಲ್ಲಿ ನಟಿಸಿದ ಹಲವು ಕಲಾವಿದರಿಗೆ ಒಳ್ಳೆಯ ಹೆಸರು ಬಂತು. ಅದರಲ್ಲೂ ಕೆಲವು ಪಾತ್ರಧಾರಿಗಳು ಹೆಚ್ಚು ಫೇಮಸ್​ ಆದರು. ಅಲ್ಲು ಅರ್ಜುನ್​ (Allu Arjun) ಅವರ ಸ್ನೇಹಿತನ ಪಾತ್ರ ಮಾಡಿದ್ದ ನಟ ಜಗದೀಶ್​ ಕೂಡ ಖ್ಯಾತಿ ಗಳಿಸಿದರು. ಆದರೆ ಈಗ ಅವರು ಅರೆಸ್ಟ್​ ಆಗಿದ್ದಾರೆ. ಮಹಿಳೆಗೆ ಕಿರುಕುಳು ನೀಡಿದ ಆರೋಪ ಅವರ ಮೇಲೆ ಎದುರಾಗಿದೆ. ಈ ಘಟನೆಯಿಂದ ಟಾಲಿವುಡ್​ ಮಂದಿಗೆ ಶಾಕ್​ ಆಗಿದೆ. ಜಗದೀಶ್​ ನೀಡಿದ ಕಿರುಕುಳ ತಾಳಲಾಗದೇ ಆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳು ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ‘ಪುಷ್ಪ’ ಸಿನಿಮಾದ ನಟ ಜಗದೀಶ್ (Pushpa actor Jagadish) ಬಂಧನಕ್ಕೆ ಒಳಗಾಗಿದ್ದಾರೆ.

ಸಹ ನಟಿಯು ಬೇರೆ ಪುರುಷನ ಜೊತೆ ಖಾಸಗಿಯಾಗಿದ್ದ ಕ್ಷಣದ ಕೆಲವು ಫೋಟೋಗಳನ್ನು ಜಗದೀಶ್​ ಕ್ಲಿಕ್ಕಿಸಿಕೊಂಡಿದ್ದರು. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್​ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ಮಹಿಳೆಯು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರರಂಗದಲ್ಲಿ ಜಗದೀಶ್​ ಈಗತಾನೆ ಗುರುತಿಸಿಕೊಳ್ಳುತ್ತಿದ್ದಾರೆ. ಪೋಷಕ ಪಾತ್ರಗಳಿಂದ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಇಂಥ ಸಮಯದಲ್ಲಿ ಗಂಭೀರ ಆರೋಪ ಎದುರಾಗಿರುವುದು ಅವರ ವೃತ್ತಿಜೀವನಕ್ಕೆ ಖಂಡಿತ ಪೆಟ್ಟು ನೀಡಲಿದೆ.

ಇದನ್ನೂ ಓದಿ: ಡೆತ್​​ ನೋಟ್​ ಬರೆದಿಟ್ಟು ಕಿರುತೆರೆ ನಟಿ ಆತ್ಮಹತ್ಯೆ

ಜಗದೀಶ್​ ಅವರಿಂದ ಕಿರುಕುಳಕ್ಕೆ ಒಳಗಾದ ಮಹಿಳೆ ನವೆಂಬರ್​ 29ರಂದು ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಆ ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ಜಗದೀಶ್ ಕೈವಾಡ ಇರುವುದು ತಿಳಿಯಿತು. ಪೊಲೀಸರ ಕೈಗೆ ಸಿಗದಂತೆ ತಲೆ ಮರೆಸಿಕೊಂಡು ಜಗದೀಶ್​ ಓಡಾಡುತ್ತಿದ್ದರು. ಆದರೆ ಬುಧವಾರ (ಡಿಸೆಂಬರ್ 6) ಅವರನ್ನು ಬಂಧಿಸಿ, ಕೋರ್ಟ್​ಗೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ‘ಅವಳ ಜೊತೆ ನಾನೂ ಸತ್ತು ಹೋದೆ’; ಮಗಳ ಆತ್ಮಹತ್ಯೆ ಬಗ್ಗೆ ನಟ ವಿಜಯ್ ಪ್ರತಿಕ್ರಿಯೆ

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಸ್ನೇಹಿತನಾಗಿ ಕೇಶವ್​ ಎಂಬ ಪಾತ್ರವನ್ನು ಜಗದೀಶ್ ಮಾಡಿದ್ದಾರೆ. ‘ಪುಷ್ಪ 2’ ಸಿನಿಮಾದಲ್ಲೂ ಅವರ ಪಾತ್ರ ಇದೆ. ಸದ್ಯ ಈ ಸಿನಿಮಾಗೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈ ಸಂದರ್ಭದಲ್ಲೇ ಜಗದೀಶ್​ ಅರೆಸ್ಟ್​ ಆಗಿರುವುದರಿಂದ ಚಿತ್ರತಂಡಕ್ಕೆ ತೊಂದರೆ ಎದುರಾಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ