AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಿದ್ದಕ್ಕೆ ಮಹಿಳೆ ಆತ್ಮಹತ್ಯೆ​; ‘ಪುಷ್ಪ’ ಚಿತ್ರದ ನಟ ಅರೆಸ್ಟ್​

ಕಿರುಕುಳಕ್ಕೆ ಒಳಗಾದ ಮಹಿಳೆ ನವೆಂಬರ್​ 29ರಂದು ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಆ ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ಜಗದೀಶ್ ಕೈವಾಡ ಇರುವುದು ತಿಳಿಯಿತು. ಪೊಲೀಸರ ಕೈಗೆ ಸಿಗದಂತೆ ತಲೆ ಮರೆಸಿಕೊಂಡು ಜಗದೀಶ್​ ಓಡಾಡುತ್ತಿದ್ದರು. ಆದರೆ ಬುಧವಾರ (ಡಿಸೆಂಬರ್ 6) ಅವರನ್ನು ಬಂಧಿಸಿ, ಕೋರ್ಟ್​ಗೆ ಹಾಜರುಪಡಿಸಲಾಗಿದೆ.

ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್​ಮೇಲ್ ಮಾಡಿದ್ದಕ್ಕೆ ಮಹಿಳೆ ಆತ್ಮಹತ್ಯೆ​; ‘ಪುಷ್ಪ’ ಚಿತ್ರದ ನಟ ಅರೆಸ್ಟ್​
ಅಲ್ಲು ಅರ್ಜುನ್​, ಜಗದೀಶ್​
ಮದನ್​ ಕುಮಾರ್​
|

Updated on: Dec 07, 2023 | 7:13 AM

Share

‘ಪುಷ್ಪ’ ಸಿನಿಮಾ (Pushpa Movie) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಂಡಿದ್ದರಿಂದ ಆ ಚಿತ್ರದಲ್ಲಿ ನಟಿಸಿದ ಹಲವು ಕಲಾವಿದರಿಗೆ ಒಳ್ಳೆಯ ಹೆಸರು ಬಂತು. ಅದರಲ್ಲೂ ಕೆಲವು ಪಾತ್ರಧಾರಿಗಳು ಹೆಚ್ಚು ಫೇಮಸ್​ ಆದರು. ಅಲ್ಲು ಅರ್ಜುನ್​ (Allu Arjun) ಅವರ ಸ್ನೇಹಿತನ ಪಾತ್ರ ಮಾಡಿದ್ದ ನಟ ಜಗದೀಶ್​ ಕೂಡ ಖ್ಯಾತಿ ಗಳಿಸಿದರು. ಆದರೆ ಈಗ ಅವರು ಅರೆಸ್ಟ್​ ಆಗಿದ್ದಾರೆ. ಮಹಿಳೆಗೆ ಕಿರುಕುಳು ನೀಡಿದ ಆರೋಪ ಅವರ ಮೇಲೆ ಎದುರಾಗಿದೆ. ಈ ಘಟನೆಯಿಂದ ಟಾಲಿವುಡ್​ ಮಂದಿಗೆ ಶಾಕ್​ ಆಗಿದೆ. ಜಗದೀಶ್​ ನೀಡಿದ ಕಿರುಕುಳ ತಾಳಲಾಗದೇ ಆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳು ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ‘ಪುಷ್ಪ’ ಸಿನಿಮಾದ ನಟ ಜಗದೀಶ್ (Pushpa actor Jagadish) ಬಂಧನಕ್ಕೆ ಒಳಗಾಗಿದ್ದಾರೆ.

ಸಹ ನಟಿಯು ಬೇರೆ ಪುರುಷನ ಜೊತೆ ಖಾಸಗಿಯಾಗಿದ್ದ ಕ್ಷಣದ ಕೆಲವು ಫೋಟೋಗಳನ್ನು ಜಗದೀಶ್​ ಕ್ಲಿಕ್ಕಿಸಿಕೊಂಡಿದ್ದರು. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್​ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ಮಹಿಳೆಯು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರರಂಗದಲ್ಲಿ ಜಗದೀಶ್​ ಈಗತಾನೆ ಗುರುತಿಸಿಕೊಳ್ಳುತ್ತಿದ್ದಾರೆ. ಪೋಷಕ ಪಾತ್ರಗಳಿಂದ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಇಂಥ ಸಮಯದಲ್ಲಿ ಗಂಭೀರ ಆರೋಪ ಎದುರಾಗಿರುವುದು ಅವರ ವೃತ್ತಿಜೀವನಕ್ಕೆ ಖಂಡಿತ ಪೆಟ್ಟು ನೀಡಲಿದೆ.

ಇದನ್ನೂ ಓದಿ: ಡೆತ್​​ ನೋಟ್​ ಬರೆದಿಟ್ಟು ಕಿರುತೆರೆ ನಟಿ ಆತ್ಮಹತ್ಯೆ

ಜಗದೀಶ್​ ಅವರಿಂದ ಕಿರುಕುಳಕ್ಕೆ ಒಳಗಾದ ಮಹಿಳೆ ನವೆಂಬರ್​ 29ರಂದು ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಆ ಬಳಿಕ ತನಿಖೆ ನಡೆಸಿದ ಪೊಲೀಸರಿಗೆ ಜಗದೀಶ್ ಕೈವಾಡ ಇರುವುದು ತಿಳಿಯಿತು. ಪೊಲೀಸರ ಕೈಗೆ ಸಿಗದಂತೆ ತಲೆ ಮರೆಸಿಕೊಂಡು ಜಗದೀಶ್​ ಓಡಾಡುತ್ತಿದ್ದರು. ಆದರೆ ಬುಧವಾರ (ಡಿಸೆಂಬರ್ 6) ಅವರನ್ನು ಬಂಧಿಸಿ, ಕೋರ್ಟ್​ಗೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ‘ಅವಳ ಜೊತೆ ನಾನೂ ಸತ್ತು ಹೋದೆ’; ಮಗಳ ಆತ್ಮಹತ್ಯೆ ಬಗ್ಗೆ ನಟ ವಿಜಯ್ ಪ್ರತಿಕ್ರಿಯೆ

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರ ಸ್ನೇಹಿತನಾಗಿ ಕೇಶವ್​ ಎಂಬ ಪಾತ್ರವನ್ನು ಜಗದೀಶ್ ಮಾಡಿದ್ದಾರೆ. ‘ಪುಷ್ಪ 2’ ಸಿನಿಮಾದಲ್ಲೂ ಅವರ ಪಾತ್ರ ಇದೆ. ಸದ್ಯ ಈ ಸಿನಿಮಾಗೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈ ಸಂದರ್ಭದಲ್ಲೇ ಜಗದೀಶ್​ ಅರೆಸ್ಟ್​ ಆಗಿರುವುದರಿಂದ ಚಿತ್ರತಂಡಕ್ಕೆ ತೊಂದರೆ ಎದುರಾಗುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್