AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ

Rashmika Mandanna Instagram: ಇನ್​ಸ್ಟಾಗ್ರಾಮ್​ನಲ್ಲಿ 2.5 ಕೋಟಿ ಹಿಂಬಾಲಕರನ್ನು ಪಡೆದಿರುವುದಕ್ಕೆ ರಶ್ಮಿಕಾ ಮಂದಣ್ಣ ಅವರಿಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಗೆಲುವಿನ ಬೆನ್ನಲ್ಲೇ ಅವರಿಗೆ ಸಂಭ್ರಮಿಸಲು ಈ ಕಾರಣ ಕೂಡ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Dec 22, 2021 | 2:56 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ’ ಸಿನಿಮಾದ (Pushpa Movie) ಗೆಲುವಿನಲ್ಲಿ ತೇಲುತ್ತಿದ್ದಾರೆ. ಸದ್ಯಕ್ಕಂತೂ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ದಿನದಿಂದ ದಿನಕ್ಕೆ ಅವರ ಜನಪ್ರಿಯತೆ ಹೆಚ್ಚುತ್ತಿದೆ. ಒಂದು ವರ್ಗದ ನೆಟ್ಟಿಗರು ಈ ಕೊಡಗಿನ ಕುವರಿಯನ್ನು ಯಾವಾಗಲೂ ಟ್ರೋಲ್​ ಮಾಡುತ್ತಾರೆ. ಯಾರು ಎಷ್ಟೇ ಟ್ರೋಲ್​ ಮಾಡಿದರೂ ಅವರ ಖ್ಯಾತಿ ಕಮ್ಮಿ ಆಗಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಇನ್​ಸ್ಟಾಗ್ರಾಮ್​ನಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಬರೋಬ್ಬರಿ 25 ಮಿಲಿಯನ್​ಗಿಂತಲೂ (2.5 ಕೋಟಿ) ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ. ಇದು ಅವರ ಸಂತಸಕ್ಕೆ ಕಾರಣ ಆಗಿದೆ. ಅದಕ್ಕಾಗಿ ಅವರು ಕುಣಿದು ಕುಪ್ಪಳಿಸಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ಅಪ್​ಡೇಟ್​ ನೀಡುತ್ತಾ ಇರುತ್ತಾರೆ. ಆಗಾಗ ಫ್ಯಾನ್ಸ್​ ಕೇಳುವ ಪ್ರಶ್ನೆಗಳಿಗೆ ಅವರು ಉತ್ತರ ನೀಡುತ್ತಾರೆ. ಈ ಎಲ್ಲ ಕಾರಣದಿಂದ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. 2.5 ಕೋಟಿ ಜನರು ರಶ್ಮಿಕಾ ಮಂದಣ್ಣ ಅವರನ್ನು ಈಗ ಫಾಲೋ ಮಾಡುತ್ತಿದ್ದಾರೆ. ಈ ಮೈಲಿಗಲ್ಲು ಮುಟ್ಟಿರುವುದಕ್ಕೆ ಅವರು ಸಿಕ್ಕಾಪಟ್ಟೆ ಖುಷಿ ಆಗಿದ್ದಾರೆ. ಕೇಕ್​ ಕತ್ತರಿಸಿ ಸಂಭ್ರಮಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 2.5 ಕೋಟಿ ಹಿಂಬಾಲಕರನ್ನು ಪಡೆದಿರುವುದಕ್ಕೆ ರಶ್ಮಿಕಾ ಮಂದಣ್ಣ ಅವರಿಗೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಭರ್ಜರಿ ಗೆಲುವಿನ ಬೆನ್ನಲ್ಲೇ ಅವರಿಗೆ ಸಂಭ್ರಮಿಸಲು ಈ ಕಾರಣ ಕೂಡ ಸಿಕ್ಕಿದೆ. ರಶ್ಮಿಕಾ ಎಷ್ಟೇ ಸಾಧನೆ ಮಾಡಿದರೂ, ಅವರನ್ನು ಟ್ರೋಲ್​ ಮಾಡುವ ಒಂದು ವರ್ಗ ಇದ್ದೇ ಇದೆ. ಅವರು ಓವರ್​ ಆ್ಯಕ್ಟಿಂಗ್​ ಮಾಡುತ್ತಾರೆ ಎಂದು ಇತ್ತೀಚೆಗೆ ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿತ್ತು.

ಟ್ರೋಲ್​ ಆಗಿದ್ದ ರಶ್ಮಿಕಾ:

ಕೆಲವೇ ದಿನಗಳ ಹಿಂದೆ ‘ಪುಷ್ಪ’ ಸಿನಿಮಾದ ಪ್ರಚಾರದಲ್ಲಿ ಪಾಲ್ಗೊಂಡಿದ್ದ ವೇಳೆ ರಶ್ಮಿಕಾ ಅವರು ಹಿಂದಿಯಲ್ಲಿ ಮಾತನಾಡಿ ಜನರನ್ನು ಸೆಳೆಯುವ ಪ್ರಯತ್ನ ಮಾಡಿದ್ದರು. ಆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಅದನ್ನು ಕಂಡವರು ನೆಗೆಟಿವ್ ಕಮೆಂಟ್​ ಮಾಡಿದ್ದಾರೆ. ‘ಇವರ ಅದೃಷ್ಟ ಚೆನ್ನಾಗಿತ್ತು. ಅದೇ ಕಾರಣಕ್ಕೆ ಗೀತಾ ಗೋವಿಂದಂ, ಡಿಯರ್​ ಕಾಮ್ರೇಡ್​ ರೀತಿಯ ಸಿನಿಮಾಗಳಲ್ಲಿ ಕೆಲಸ ಮಾಡುವ ಅವಕಾಶ ಸಿಕ್ತು. ಇವರು ಹೇಗೆ ನ್ಯಾಷನಲ್​ ಕ್ರಶ್​ ಆಗಲು ಸಾಧ್ಯ? ಇವರಿಗಿಂತ ಚೆನ್ನಾಗಿ ಬೇರೆ ನಟಿಯರು ಇದ್ದಾರೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ರಶ್ಮಿಕಾ ಅವರದ್ದು ಬರೀ ಓವರ್​ ಆ್ಯಕ್ಟಿಂಗ್​’ ಎಂದು ಅನೇಕರು ಕಮೆಂಟ್​ಗಳ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಇವರು ಓವರ್​ ಆ್ಯಕ್ಟಿಂಗ್​ನ ನ್ಯಾಷನಲ್​ ಕ್ರಶ್​’ ಎಂದು ಒಬ್ಬರು ಹೇಳಿದ್ದರೆ, ‘ರಶ್ಮಿಕಾ ವರ್ತನೆ ಕಿರಿಕಿರಿ ಎನಿಸುತ್ತದೆ’ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

ಮುಂಬೈನಲ್ಲಿ ಒಟ್ಟಾಗಿ ಡಿನ್ನರ್​ ಮಾಡಿದ ವಿಜಯ್​ ದೇವರಕೊಂಡ-ರಶ್ಮಿಕಾ; ಮತ್ತೆ ಹುಟ್ಟಿತು ಅನುಮಾನ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ