ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ

Rashmika Mandanna: ಸಿನಿಮಾಗಳಲ್ಲಿ ಗ್ಲಾಮರ್​ ಗೊಂಬೆಯಂತೆ ಕಾಣುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಡೆದಾಟಕ್ಕೂ ಸೈ ಎಂಬ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ.

ತುಂಬಾ ಕಿರಿಕಿರಿ ಮಾಡಿದ್ರೆ ರಶ್ಮಿಕಾ ಹೀಗೆ ಒದಿತಾರೆ; ವಿಡಿಯೋ ಸಮೇತ ವಿವರಿಸಿದ ನಟಿ
ರಶ್ಮಿಕಾ ಮಂದಣ್ಣ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 23, 2021 | 2:16 PM

ಬಹುಬೇಡಿಕೆಯ ನಟಿಯರ ಸಾಲಿನಲ್ಲಿ ರಶ್ಮಿಕಾ ಮಂದಣ್ಣ ಹೆಸರು ಮುಂಚೂಣಿಯಲ್ಲಿದೆ. ತಮಿಳು, ತೆಲುಗು, ಹಿಂದಿ ಭಾಷೆಯ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ತಾವು ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ತಮ್ಮ ಅಭಿಮಾನಿಗಳಿಗಾಗಿ ಸೋಶಿಯಲ್​ ಮೀಡಿಯಾ ಮೂಲಕ ಏನಾದರೂ ಅಪ್​ಡೇಟ್​ ನೀಡುವಲ್ಲಿ ರಶ್ಮಿಕಾ ಮಂದಣ್ಣ ಹಿಂದೆ ಬೀಳುವುದಿಲ್ಲ. ಈಗ ಅವರೊಂದು ಹೊಸ ವೀಡಿಯೋ ಹಂಚಿಕೊಂಡಿದ್ದಾರೆ. ಭರ್ಜರಿ ಆ್ಯಕ್ಷನ್​ ಸನ್ನಿವೇಶಕ್ಕಾಗಿ ತರಬೇತಿ ಪಡೆಯುತ್ತಿರುವ ದೃಶ್ಯ ಇದರಲ್ಲಿದೆ. ಆದರೆ ಅದಕ್ಕೆ ಈ ಕೊಡಗಿನ ಕುವರಿ ನೀಡಿರುವ ಕ್ಯಾಪ್ಷನ್​ ಎಲ್ಲರ ಗಮನ ಸೆಳೆಯುತ್ತಿದೆ.

ಈ ವಿಡಿಯೋದಲ್ಲಿ ಪಂಚಿಂಗ್​ ಬ್ಯಾಗ್​ಗೆ ರಶ್ಮಿಕಾ ಮಂದಣ್ಣ ಜಾಡಿಸಿ ಒದೆಯುತ್ತಿದ್ದಾರೆ. ಗಂಟೆಗಟ್ಟಲೆ ತರಬೇತಿ ಪಡೆಯುತ್ತ ಬೆವರು ಹರಿಸುತ್ತಿರುವುದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ‘ನನಗೆ ತುಂಬ ಕಿರಿಕಿರಿ ಆದಾದ ನಾನು ಹೀಗೆ ಮಾಡುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ. ಇದೇ ಪೋಸ್ಟ್​ ಅನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲೂ ಹಂಚಿಕೊಂಡು, ‘ಎಲ್ಲ ನೆಗೆಟಿವ್​ ವಿಚಾರಗಳಿಗೆ ಹೀಗೆ ಒದೆಯಬೇಕು’ ಎಂದು ಅವರು ಬರೆದುಕೊಂಡಿದ್ದಾರೆ.

ರಶ್ಮಿಕಾ ಪಡೆಯುತ್ತಿರುವ ಕಠಿಣ ಟ್ರೇನಿಂಗ್​ ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಗ್ಲಾಮರ್​ ಗೊಂಬೆಯಂತೆ ಕಾಣುವ ಅವರು ಹೊಡೆದಾಟಕ್ಕೂ ಸೈ ಎಂಬ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ‘ಈ ವಿಡಿಯೋ ನೋಡಿದ ಬಳಿಕ ಯಾವುದೇ ನಿರ್ದೇಶಕರು ನಿಮ್ಮಿಂದ ರೀ-ಟೇಕ್​ ಬೇಕು ಅಂತ ಕೇಳುವುದೇ ಇಲ್ಲ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಯಾವ ಚಿತ್ರಕ್ಕಾಗಿ ಈ ತಯಾರಿ ನಡೆಯುತ್ತಿದೆ ಎಂಬುದನ್ನು ರಶ್ಮಿಕಾ ಬಿಟ್ಟುಕೊಟ್ಟಿಲ್ಲ.

ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಡಿ.17ರಂದು ಈ ಸಿನಿಮಾ ಅದ್ದೂರಿಯಾಗಿ ತೆರೆಕಾಣಲಿದೆ. ಈ ಚಿತ್ರದಲ್ಲಿ ಶ್ರೀವಲ್ಲಿ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಹಾಡಿನ ಮೂಲಕ ಅವರ ಪಾತ್ರದ ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿದೆ. ಅಲ್ಲು ಅರ್ಜುನ್​ಗೆ ಜೋಡಿಯಾಗಿ ರಶ್ಮಿಕಾ ನಟಿಸಿದ್ದು, ಈ ಸಿನಿಮಾದಿಂದ ಅವರಿಗೆ ಭರ್ಜರಿ ಗೆಲುವು ಸಿಗುವ ಸಾಧ್ಯತೆ ಇದೆ. ಇದಲ್ಲದೇ, ಬಾಲಿವುಡ್​ನಲ್ಲಿಯೂ ರಶ್ಮಿಕಾ ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ‘ಮಿಷನ್​ ಮಜ್ನು’ ಮತ್ತು ‘ಗುಡ್​ಬೈ’ ಚಿತ್ರಗಳು ಅವರ ಕೈಯಲ್ಲಿವೆ.

ಇದನ್ನೂ ಓದಿ:

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Rashmika Mandanna: ಒಂದೇ ಒಂದು ಮಾತಿನಿಂದ ಟ್ರೋಲಿಗನ ಕಮೆಂಟ್​ ಡಿಲೀಟ್​ ಮಾಡಿಸಿದ ರಶ್ಮಿಕಾ; ಅದರಲ್ಲಿ ಅಂಥದ್ದೇನಿತ್ತು?

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್