AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಒಂದೇ ಒಂದು ಮಾತಿನಿಂದ ಟ್ರೋಲಿಗನ ಕಮೆಂಟ್​ ಡಿಲೀಟ್​ ಮಾಡಿಸಿದ ರಶ್ಮಿಕಾ; ಅದರಲ್ಲಿ ಅಂಥದ್ದೇನಿತ್ತು?

ದಸರಾ ಹಬ್ಬದ ಪ್ರಯುಕ್ತ ರಶ್ಮಿಕಾ ಮಂದಣ್ಣ ಅವರ ಹೊಸ ಚಿತ್ರದ ಪೋಸ್ಟರ್​ ಬಿಡುಗಡೆ ಆಯಿತು. ಅದಕ್ಕೆ ವ್ಯಕ್ತಿಯೊಬ್ಬ ವ್ಯಂಗ್ಯವಾಗಿ ಕಮೆಂಟ್​ ಮಾಡಿದ್ದ. ಆತನಿಗೆ ರಶ್ಮಿಕಾ ಸೂಕ್ತ ತಿರುಗೇಟು ನೀಡಿದ್ದಾರೆ.

Rashmika Mandanna: ಒಂದೇ ಒಂದು ಮಾತಿನಿಂದ ಟ್ರೋಲಿಗನ ಕಮೆಂಟ್​ ಡಿಲೀಟ್​ ಮಾಡಿಸಿದ ರಶ್ಮಿಕಾ; ಅದರಲ್ಲಿ ಅಂಥದ್ದೇನಿತ್ತು?
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Oct 18, 2021 | 10:00 AM

Share

ನಟಿ ರಶ್ಮಿಕಾ ಮಂದಣ್ಣ ಅವರು ಈಗ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಬಹುಭಾಷೆಯಲ್ಲಿ ಅವರಿಗೆ ಬೇಡಿಕೆ ಸೃಷ್ಟಿಯಾಗಿದೆ. ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್​ಗೂ ಅವರು ಕಾಲಿಟ್ಟಿದ್ದಾರೆ. ಅವರ ಕೆಲಸಕ್ಕೆ ಅಭಿಮಾನಿಗಳು ಪ್ರೋತ್ಸಾಹ ನೀಡುತ್ತಾರೆ. ಆದರೆ ಟ್ರೋಲಿಗರ ಮಾತ್ರ ಬರೀ ಕಾಲೆಳೆಯುವ ಕೆಲಸ ಮಾಡಿಕೊಂಡಿದ್ದಾರೆ. ಅಂಥ ಒಬ್ಬ ಟ್ರೋಲಿಗನಿಗೆ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಖಡಕ್​ ಉತ್ತರ ನೀಡಿದ್ದಾರೆ. ಅವರ ಉತ್ತರ ಕಂಡು ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಪದೇ ಪದೇ ರಶ್ಮಿಕಾ ಮಂದಣ್ಣ ಅವರನ್ನೇ ಟಾಲಿವುಡ್​ ಮಂದಿ ಯಾಕೆ ಹೀರೋಯಿನ್​ ಆಗಿ ಸೆಲೆಕ್ಟ್​ ಮಾಡಿಕೊಳ್ಳುತ್ತಿದ್ದಾರೆ ಎಂಬ ಟ್ರೋಲಿಗನ ಪ್ರಶ್ನೆಗೆ ಕೊಡಗಿನ ಕುವರಿ ಸ್ಮಾರ್ಟ್​ ಆಗಿ ಉತ್ತರಿಸಿದ್ದಾರೆ.

ದಸರಾ ಹಬ್ಬದ ಪ್ರಯುಕ್ತ ರಶ್ಮಿಕಾ ಮಂದಣ್ಣ ಅವರ ಹೊಸ ಚಿತ್ರದ ಪೋಸ್ಟರ್​ ಬಿಡುಗಡೆ ಆಯಿತು. ಅದಕ್ಕೆ ವ್ಯಕ್ತಿಯೊಬ್ಬ ವ್ಯಂಗ್ಯವಾಗಿ ಕಮೆಂಟ್​ ಮಾಡಿದ್ದ. ‘ಪದೇ ಪದೇ ರಶ್ಮಿಕಾ ಅವರನ್ನೇ ಟಾಲಿವುಡ್​ನವರು ಆಯ್ಕೆ ಮಾಡಿಕೊಳ್ಳುತ್ತಿರುವುದು ಯಾಕೆ’ ಎಂಬುದು ಆತನ ವ್ಯಂಗ್ಯದ ಪ್ರಶ್ನೆಯಾಗಿತ್ತು. ಅದಕ್ಕೆ ಪ್ರತಿಕ್ರಿಯಿಸಿದ ರಶ್ಮಿಕಾ, ‘ನನ್ನ ನಟನೆಗೋಸ್ಕರ’ ಎಂದು ಕಮೆಂಟ್​ ಮಾಡಿದರು. ಈ ಕಮೆಂಟ್​ ಸಖತ್​ ವೈರಲ್​ ಆಗಿದೆ.

ರಶ್ಮಿಕಾ ಮಾಡಿದ ಈ ಕಮೆಂಟ್​ ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಆ ಕಮೆಂಟ್​ ಇಟ್ಟುಕೊಂಡು ರಶ್ಮಿಕಾ ಫ್ಯಾನ್ಸ್​ ಬಗೆಬಗೆಯಲ್ಲಿ ಮೀಮ್ಸ್​ ಮಾಡುವ ಮೂಲಕ ಆ ಟ್ರೋಲಿಗನಿಗೆ ತಕ್ಕ ಪಾಠ ಕಲಿಸಿದರು. ಕಡೆಗೆ ವಿಧಿ ಇಲ್ಲದೇ ಆತ ತನ್ನ ಕಮೆಂಟ್​ ಡಿಲೀಟ್​ ಮಾಡಿದ್ದಾನೆ. ಒಟ್ಟಿನಲ್ಲಿ ಟ್ರೋಲ್​ ಮಂದಿಯನ್ನು ಹೇಗೆ ನಿಭಾಯಿಸಬೇಕು ಎಂದು ರಶ್ಮಿಕಾ ಚೆನ್ನಾಗಿ ಅರಿತುಕೊಂಡಂತಿದೆ.

ಸದ್ಯ ರಶ್ಮಿಕಾ ಕೈಯಲ್ಲಿ ಹಲವು ಸಿನಿಮಾಗಳಿವೆ. ಅಲ್ಲು ಅರ್ಜುನ್​ ಜೊತೆ ನಟಿಸಿರುವ ‘ಪುಷ್ಪ’ ಚಿತ್ರ ಡಿಸೆಂಬರ್​ 17ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಶ್ರೀವಲ್ಲಿ ಪಾತ್ರದ ಪೋಸ್ಟರ್​ ಮತ್ತು ಸಾಂಗ್​ ಬಿಡುಗಡೆ ಆಗಿತ್ತು. ‘ಪುಷ್ಪ’ ಚಿತ್ರದಿಂದ ರಶ್ಮಿಕಾ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗುವ ನಿರೀಕ್ಷೆ ಇದೆ. ಅತ್ತ ಬಾಲಿವುಡ್​ನಲ್ಲಿ ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ಬೈ’ ಹಾಗೂ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ‘ಮಿಷನ್​ ಮಜ್ನು’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ‘ಪೊಗರು’ ನಂತರ ಅವರು ಯಾವುದೇ ಕನ್ನಡ ಸಿನಿಮಾವನ್ನು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ:

ಮಾರ್ಕೆಟ್​ನಿಂದ ಟಾಯ್ಲೆಟ್​ವರೆಗೆ ಎಲ್ಲೆಲ್ಲೂ ರಶ್ಮಿಕಾ; ‘ಪುಷ್ಪ’ ಚಿತ್ರದ ಶ್ರೀವಲ್ಲಿ ಗೆಟಪ್​ ಸಿಕ್ಕಾಪಟ್ಟೆ ಟ್ರೋಲ್​​

ಈ ಅವತಾರದಲ್ಲಿ ಬಂದು ಅಭಿಮಾನಿಗಳಿಗೆ ರಶ್ಮಿಕಾ ಹೇಳಿದ್ದೇನು; ಹೊಸ ಫೋಟೋ ವೈರಲ್​

Published On - 8:00 am, Mon, 18 October 21

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ