AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್​ ಚಾನ್ಸ್​; ಮತ್ತೋರ್ವ ಸ್ಟಾರ್​ ನಟನಿಗೆ ಕೊಡಗಿನ ಕುವರಿ ಜೋಡಿ?

ಈ ಸಿನಿಮಾ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕಕ್ಕೆ ನಿರ್ಮಾಣ ಆಗಲಿದೆ. ಹಾಗಾಗಿ ಎರಡೂ ಭಾಷೆಯ ಚಿತ್ರರಂಗಕ್ಕೆ ಸೂಕ್ತ ಆಗುವಂತಹ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಪ್ಲ್ಯಾನ್​ ಮಾಡಲಾಗಿದೆ.

‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್​ ಚಾನ್ಸ್​; ಮತ್ತೋರ್ವ ಸ್ಟಾರ್​ ನಟನಿಗೆ ಕೊಡಗಿನ ಕುವರಿ ಜೋಡಿ?
ರಶ್ಮಿಕಾ ಮಂದಣ್ಣ, ದಳಪತಿ ವಿಜಯ್
Follow us
TV9 Web
| Updated By: ಮದನ್​ ಕುಮಾರ್​

Updated on: Dec 25, 2021 | 12:16 PM

ನಟಿ ರಶ್ಮಿಕಾ ಮಂದಣ್ಣ ಅವರು ಈಗ ಯಶಸ್ಸಿನ ಉತ್ತುಂಗದಲ್ಲಿ ಇದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು ಕೆಲವೇ ವರ್ಷಗಳ ಕಳೆಯುವುದರೊಳಗೆ ಅವರು ಮಾಡಿದ ಸಾಧನೆ ಸಣ್ಣದೇನಲ್ಲ. ಕನ್ನಡದ ‘ಕಿರಿಕ್​ ಪಾರ್ಟಿ’ ಚಿತ್ರದಿಂದ ವೃತ್ತಿಜೀವನ ಆರಂಭಿಸಿದ ಅವರು ಈಗ ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುವ ಮಟ್ಟಕ್ಕೆ ಬೆಳೆದಿದ್ದಾರೆ. ದಕ್ಷಿಣ ಭಾರತದಲ್ಲಂತೂ ಅವರ ಕ್ರೇಜ್​ ಜೋರಾಗಿದೆ. ಇತ್ತೀಚೆಗೆ ತೆರೆಕಂಡ ‘ಪುಷ್ಪ’ ಸಿನಿಮಾ ಮೂಲಕ ಅವರಿಗೆ ಭರ್ಜರಿ ಗೆಲುವು ಸಿಕ್ಕಿದೆ. ಆ ಚಿತ್ರದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ತೆರೆ ಹಂಚಿಕೊಂಡರು. ಈಗ ಅವರು ಕಾಲಿವುಡ್​ ಹೀರೋ ‘ದಳಪತಿ’ ವಿಜಯ್​ ನಟನೆಯ ಹೊಸ ಚಿತ್ರಕ್ಕೆ ನಾಯಕಿ​ ಆಗಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಒಂದಕ್ಕಿಂತ ಒಂದು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿರುವ ದಳಪತಿ ವಿಜಯ್​ ಜತೆ ತೆರೆ ಹಂಚಿಕೊಳ್ಳಬೇಕು ಎಂಬುದು ಬಹುತೇಕ ನಟಿಯರ ಆಸೆ. ರಶ್ಮಿಕಾ ಕೂಡ ಅಂಥ ಆಸೆಯನ್ನು ಈ ಮೊದಲು ವ್ಯಕ್ತಪಡಿಸಿದ್ದುಂಟು. ಆನಂತರ ವಿಜಯ್​ ಅವರ ಯಾವುದೇ ಹೊಸ ಸಿನಿಮಾ ಅನೌನ್ಸ್​ ಆದರೂ ರಶ್ಮಿಕಾ ಹೆಸರು ಕೇಳಿಬರುವುದು ಸಹಜ ಆಗಿ ಬಿಟ್ಟಿದೆ. ಈಗ ಮತ್ತೆ ಅದು ಮರುಕಳಿಸಿದೆ.

ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಜೊತೆ ವಿಜಯ್​ ಸಿನಿಮಾ ಮಾಡಲಿದ್ದಾರೆ. ಆ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 66’ ಎಂದು ಕರೆಯಲಾಗುತ್ತಿದೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುವ ಸಾಧ್ಯತೆ ಇದು ಎಂಬ ಸುದ್ದಿ ಹರಿದಾಡುತ್ತಿದೆ.

ಈ ಸಿನಿಮಾ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕಕ್ಕೆ ನಿರ್ಮಾಣ ಆಗಲಿದೆ. ಹಾಗಾಗಿ ಎರಡೂ ಭಾಷೆಯ ಚಿತ್ರರಂಗಕ್ಕೆ ಸೂಕ್ತ ಆಗುವಂತಹ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಪ್ಲ್ಯಾನ್​ ಮಾಡಲಾಗಿದೆ. ದಕ್ಷಿಣ ಭಾರತದಲ್ಲಿ ರಶ್ಮಿಕಾ ಮಂದಣ್ಣ ಮನೆಮಾತಾಗಿದ್ದಾರೆ. ಇತ್ತೀಚೆಗೆ ಬಾಲಿವುಡ್​ಗೂ ಕಾಲಿಟ್ಟಿದ್ದಾರೆ. ಅವರು ಈ ಚಿತ್ರಕ್ಕೆ ಹೀರೋಯಿನ್​ ಆದರೆ ಒಳಿತು ಎಂಬ ಅಭಿಪ್ರಾಯ ಚಿತ್ರತಂಡದಲ್ಲಿ ಮೂಡಿದೆ ಎನ್ನಲಾಗಿದೆ.

ಈ ವಿಚಾರದ ಬಗ್ಗೆ ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲೂ ರಶ್ಮಿಕಾ ಮಿಂಚುತ್ತಿದ್ದಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಅದರಿಂದಲೂ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತದ್ದಾರೆ.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ

‘ನ್ಯಾಷನಲ್​ ಕ್ರಶ್​ ಅಂದಿದ್ದು ಯಾರು? ಬರೀ ಓವರ್​ ಆ್ಯಕ್ಟಿಂಗ್​’; ರಶ್ಮಿಕಾ ವಿಡಿಯೋಗೆ ನೆಗೆಟಿವ್​ ಕಮೆಂಟ್​ಗಳ ಸುರಿಮಳೆ

ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ