AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್​ ಚಾನ್ಸ್​; ಮತ್ತೋರ್ವ ಸ್ಟಾರ್​ ನಟನಿಗೆ ಕೊಡಗಿನ ಕುವರಿ ಜೋಡಿ?

ಈ ಸಿನಿಮಾ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕಕ್ಕೆ ನಿರ್ಮಾಣ ಆಗಲಿದೆ. ಹಾಗಾಗಿ ಎರಡೂ ಭಾಷೆಯ ಚಿತ್ರರಂಗಕ್ಕೆ ಸೂಕ್ತ ಆಗುವಂತಹ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಪ್ಲ್ಯಾನ್​ ಮಾಡಲಾಗಿದೆ.

‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್​ ಚಾನ್ಸ್​; ಮತ್ತೋರ್ವ ಸ್ಟಾರ್​ ನಟನಿಗೆ ಕೊಡಗಿನ ಕುವರಿ ಜೋಡಿ?
ರಶ್ಮಿಕಾ ಮಂದಣ್ಣ, ದಳಪತಿ ವಿಜಯ್
TV9 Web
| Edited By: |

Updated on: Dec 25, 2021 | 12:16 PM

Share

ನಟಿ ರಶ್ಮಿಕಾ ಮಂದಣ್ಣ ಅವರು ಈಗ ಯಶಸ್ಸಿನ ಉತ್ತುಂಗದಲ್ಲಿ ಇದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು ಕೆಲವೇ ವರ್ಷಗಳ ಕಳೆಯುವುದರೊಳಗೆ ಅವರು ಮಾಡಿದ ಸಾಧನೆ ಸಣ್ಣದೇನಲ್ಲ. ಕನ್ನಡದ ‘ಕಿರಿಕ್​ ಪಾರ್ಟಿ’ ಚಿತ್ರದಿಂದ ವೃತ್ತಿಜೀವನ ಆರಂಭಿಸಿದ ಅವರು ಈಗ ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುವ ಮಟ್ಟಕ್ಕೆ ಬೆಳೆದಿದ್ದಾರೆ. ದಕ್ಷಿಣ ಭಾರತದಲ್ಲಂತೂ ಅವರ ಕ್ರೇಜ್​ ಜೋರಾಗಿದೆ. ಇತ್ತೀಚೆಗೆ ತೆರೆಕಂಡ ‘ಪುಷ್ಪ’ ಸಿನಿಮಾ ಮೂಲಕ ಅವರಿಗೆ ಭರ್ಜರಿ ಗೆಲುವು ಸಿಕ್ಕಿದೆ. ಆ ಚಿತ್ರದಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ತೆರೆ ಹಂಚಿಕೊಂಡರು. ಈಗ ಅವರು ಕಾಲಿವುಡ್​ ಹೀರೋ ‘ದಳಪತಿ’ ವಿಜಯ್​ ನಟನೆಯ ಹೊಸ ಚಿತ್ರಕ್ಕೆ ನಾಯಕಿ​ ಆಗಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಒಂದಕ್ಕಿಂತ ಒಂದು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿರುವ ದಳಪತಿ ವಿಜಯ್​ ಜತೆ ತೆರೆ ಹಂಚಿಕೊಳ್ಳಬೇಕು ಎಂಬುದು ಬಹುತೇಕ ನಟಿಯರ ಆಸೆ. ರಶ್ಮಿಕಾ ಕೂಡ ಅಂಥ ಆಸೆಯನ್ನು ಈ ಮೊದಲು ವ್ಯಕ್ತಪಡಿಸಿದ್ದುಂಟು. ಆನಂತರ ವಿಜಯ್​ ಅವರ ಯಾವುದೇ ಹೊಸ ಸಿನಿಮಾ ಅನೌನ್ಸ್​ ಆದರೂ ರಶ್ಮಿಕಾ ಹೆಸರು ಕೇಳಿಬರುವುದು ಸಹಜ ಆಗಿ ಬಿಟ್ಟಿದೆ. ಈಗ ಮತ್ತೆ ಅದು ಮರುಕಳಿಸಿದೆ.

ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಜೊತೆ ವಿಜಯ್​ ಸಿನಿಮಾ ಮಾಡಲಿದ್ದಾರೆ. ಆ ಚಿತ್ರಕ್ಕೆ ತಾತ್ಕಾಲಿಕವಾಗಿ ‘ದಳಪತಿ 66’ ಎಂದು ಕರೆಯಲಾಗುತ್ತಿದೆ. ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುವ ಸಾಧ್ಯತೆ ಇದು ಎಂಬ ಸುದ್ದಿ ಹರಿದಾಡುತ್ತಿದೆ.

ಈ ಸಿನಿಮಾ ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕಕ್ಕೆ ನಿರ್ಮಾಣ ಆಗಲಿದೆ. ಹಾಗಾಗಿ ಎರಡೂ ಭಾಷೆಯ ಚಿತ್ರರಂಗಕ್ಕೆ ಸೂಕ್ತ ಆಗುವಂತಹ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲು ಪ್ಲ್ಯಾನ್​ ಮಾಡಲಾಗಿದೆ. ದಕ್ಷಿಣ ಭಾರತದಲ್ಲಿ ರಶ್ಮಿಕಾ ಮಂದಣ್ಣ ಮನೆಮಾತಾಗಿದ್ದಾರೆ. ಇತ್ತೀಚೆಗೆ ಬಾಲಿವುಡ್​ಗೂ ಕಾಲಿಟ್ಟಿದ್ದಾರೆ. ಅವರು ಈ ಚಿತ್ರಕ್ಕೆ ಹೀರೋಯಿನ್​ ಆದರೆ ಒಳಿತು ಎಂಬ ಅಭಿಪ್ರಾಯ ಚಿತ್ರತಂಡದಲ್ಲಿ ಮೂಡಿದೆ ಎನ್ನಲಾಗಿದೆ.

ಈ ವಿಚಾರದ ಬಗ್ಗೆ ಅಧಿಕೃತವಾಗಿ ಯಾವುದೇ ಘೋಷಣೆ ಆಗಿಲ್ಲ. ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಲ್ಲೂ ರಶ್ಮಿಕಾ ಮಿಂಚುತ್ತಿದ್ದಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ಅದರಿಂದಲೂ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತದ್ದಾರೆ.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ

‘ನ್ಯಾಷನಲ್​ ಕ್ರಶ್​ ಅಂದಿದ್ದು ಯಾರು? ಬರೀ ಓವರ್​ ಆ್ಯಕ್ಟಿಂಗ್​’; ರಶ್ಮಿಕಾ ವಿಡಿಯೋಗೆ ನೆಗೆಟಿವ್​ ಕಮೆಂಟ್​ಗಳ ಸುರಿಮಳೆ

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ