Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಹೊಸ ಅಪಾರ್ಟ್​ಮೆಂಟ್​ ಸೇರಿಕೊಂಡ ರಶ್ಮಿಕಾ; ಅಲ್ಲೇ ಸೆಟ್ಲ್​ ಆಗ್ತಾರಾ ಕೊಡಗಿನ ಕುವರಿ?

Rashmika Mandanna: ಅನ್​ಲಾಕ್​ ಪ್ರಕ್ರಿಯೆ ಶುರು ಆಗುತ್ತಿದ್ದಂತೆಯೇ ನಟಿ ರಶ್ಮಿಕಾ ಮಂದಣ್ಣ ಅವರು ಮುಂಬೈನಲ್ಲಿನ ತಮ್ಮ ಹೊಸ ಅಪಾರ್ಟ್​ಮೆಂಟ್​ಗೆ ಶಿಫ್ಟ್​ ಆಗಿದ್ದಾರೆ. ಈ ಬಗ್ಗೆ ಅವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ಮುಂಬೈನಲ್ಲಿ ಹೊಸ ಅಪಾರ್ಟ್​ಮೆಂಟ್​ ಸೇರಿಕೊಂಡ ರಶ್ಮಿಕಾ; ಅಲ್ಲೇ ಸೆಟ್ಲ್​ ಆಗ್ತಾರಾ ಕೊಡಗಿನ ಕುವರಿ?
ರಶ್ಮಿಕಾ ಮಂದಣ್ಣ
Follow us
TV9 Web
| Updated By: ಮದನ್​ ಕುಮಾರ್​

Updated on: Jun 26, 2021 | 2:24 PM

ನಟಿ ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ. ಬಹುಭಾಷೆಯಲ್ಲಿ ಅವರಿಗೆ ಭರ್ಜರಿ ಡಿಮ್ಯಾಂಡ್​ ಇದೆ. ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದ ಅವರು ಈಗ ಬಾಲಿವುಡ್​ವರೆಗೆ ತಮ್ಮ ವ್ಯಾಪ್ತಿ ವಿಸ್ತರಿಸಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆಯೇ ಅವರ ತಿರುಗಾಟ ಜೋರಾಗಿದೆ. ಟಾಲಿವುಡ್​ ಸಿನಿಮಾಗಳ ಸಲುವಾಗಿ ಹೈದರಾಬಾದ್​ನಲ್ಲಿ ಇರುತ್ತಿದ್ದ ರಶ್ಮಿಕಾ ಈಗ ಬಾಲಿವುಡ್​ ಚಿತ್ರಗಳಲ್ಲಿ ನಟಿಸುತ್ತಿರುವುದರಿಂದ ಮುಂಬೈನಲ್ಲಿ ಮನೆ ಮಾಡುವುದು ಅನಿವಾರ್ಯ. ಹಾಗಾಗಿ ಅವರು ಮುಂಬೈನಲ್ಲಿ ಹೊಸ ಅಪಾರ್ಟ್​ಮೆಂಟ್​ ಖರೀದಿಸಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನಕ್ಕೆ ಇಳಿಮುಖ ಆಗುತ್ತಿದೆ. ಹಾಗಾಗಿ ಸಿನಿಮಾ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಸಮಯಕ್ಕೆ ಸರಿಯಾಗಿ ರಶ್ಮಿಕಾ ಅವರು ಮುಂಬೈನಲ್ಲಿ ತಮ್ಮ ಹೊಸ ಅಪಾರ್ಟ್​ಮೆಂಟ್​ಗೆ ಶಿಫ್ಟ್​ ಆಗಿದ್ದಾರೆ. ಈ ಬಗ್ಗೆ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಮಾಹಿತಿ ನೀಡಿದ್ದಾರೆ.

‘ಇವತ್ತು ತುಂಬ ಕೆಲಸ ಆಯಿತು. ಕಡೆಗೂ ನಾನು ಅಪಾರ್ಟ್​ಮೆಂಟ್​ಗೆ ಶಿಫ್ಟ್​ ಆದೆ. ತುಂಬ ವಸ್ತುಗಳನ್ನು ಖರೀದಿಸಬೇಕಿತ್ತು. ಅದು ಇನ್ನೂ ಮುಗಿದಿಲ್ಲ. ಅದು ಎಂದಿಗೂ ಮುಗಿಯುವಂಥದ್ದು ಕೂಡ ಅಲ್ಲ. ಔರಾ (ಶ್ವಾನ) ಇಡೀ ದಿನ ಹೊರಗೆ ಇದ್ದಳು. ನನ್ನ ಇಬ್ಬರು ಸ್ನೇಹಿತರನ್ನು ಭೇಟಿಯಾಗಬೇಕಿತ್ತು. ಅಪಾರ್ಟ್​ಮೆಂಟ್​ ಸಜ್ಜುಗೊಳಿಸಬೇಕಿತ್ತು. ನನ್ನ ಅಸಿಸ್ಟೆಂಟ್​ ಸಾಯಿ ನನಗೆ ಸಹಾಯ ಮಾಡಿದ. ನನಗೆ ಮತ್ತು ಔರಾಗೆ ತುಂಬ ಸುಸ್ತಾಗಿತ್ತು’ ಎಂದು ರಶ್ಮಿಕಾ ತಮ್ಮ ದಿನಚರಿ ಬಗ್ಗೆ ಬರೆದುಕೊಂಡಿದ್ದರು.

ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ರಶ್ಮಿಕಾಗೆ ಬಾಲಿವುಡ್​ನಿಂದ ಒಳ್ಳೊಳ್ಳೆಯ ಆಫರ್​ಗಳು ಸಿಗುತ್ತಿವೆ. ಹಿಂದಿಯಲ್ಲಿ ಅವರು ನಟಿಸುತ್ತಿರುವ ಮೊದಲ ಸಿನಿಮಾದ ಹೆಸರು ‘ಮಿಷನ್​ ಮಜ್ನು’ ಆ ಚಿತ್ರದಲ್ಲಿ ಅವರು ಸ್ಟಾರ್​ ನಟ ಸಿದ್ಧಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿದ್ದಾರೆ. ಎರಡನೇ ಚಿತ್ರ ‘ಗುಡ್​ಬೈ’ನಲ್ಲಿ ಅಮಿತಾಭ್​ ಬಚ್ಚನ್​ ಜೊತೆ ನಟಿಸುವ ಅವಕಾಶ ಸಿಕ್ಕಿರುವುದು ವಿಶೇಷ. ಈ ಸಿನಿಮಾದಲ್ಲಿ ಅಮಿತಾಭ್​ ಹಾಗೂ ರಶ್ಮಿಕಾ ಅಪ್ಪ-ಮಗಳ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಲಿವುಡ್​ನಲ್ಲಿ ಅಲ್ಲು ಅರ್ಜುನ್​ ಜೊತೆ ರಶ್ಮಿಕಾ ನಟಿಸಿರುವ ‘ಪುಷ್ಪ’ ಚಿತ್ರ ಎರಡು ಪಾರ್ಟ್​ಗಳಲ್ಲಿ ಮೂಡಿಬರುವ ಬಗ್ಗೆ ಸುದ್ದಿ ಹರಡಿದೆ. ಎರಡನೇ ಪಾರ್ಟ್​ಗೆ ಬೇರೆ ಶೀರ್ಷಿಕೆ ಇಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಏನನ್ನೂ ಘೋಷಿಸಿಲ್ಲ. ಟೀಸರ್​ ಮತ್ತು ಪೋಸ್ಟರ್​ಗಳ ಮೂಲಕ ‘ಪುಷ್ಪ’ ದೊಡ್ಡಮಟ್ಟದ ನಿರೀಕ್ಷೆ ಸೃಷ್ಟಿ ಮಾಡಿದೆ.

ಇದನ್ನೂ ಓದಿ:

ವಿಜಯ್​ ದೇವರಕೊಂಡ ಜೊತೆ ಸೇರಿಕೊಂಡು ಸೈಲೆಂಟಾಗಿ ಮತ್ತೊಂದು ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಮುಖಕ್ಕೆ ಮುತ್ತಿಟ್ಟ ಔರಾ; ರಾತ್ರೋರಾತ್ರಿ ವೈರಲ್​ ಆಯ್ತು ಫೋಟೋ

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್