Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

Rashmika Mandanna: ಕನ್ನಡದ ಕಿರಿಕ್​ ಪಾರ್ಟಿ ಸಿನಿಮಾದಲ್ಲಿ ನಟಿಸಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ
ರಶ್ಮಿಕಾ ಮಂದಣ್ಣ
Follow us
TV9 Web
| Updated By: Digi Tech Desk

Updated on:Dec 17, 2021 | 2:16 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಭಾಷೆಯ ಗಡಿ ಮೀರಿ ಅವರು ಬೆಳೆದಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರು ಬಾಲಿವುಡ್​ನಲ್ಲೂ ಸ್ಟಾರ್​ ಕಲಾವಿದರ ಜತೆ ತೆರೆಹಂಚಿಕೊಳ್ಳುವ ಚಾನ್ಸ್​ ಪಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರ ಹವಾ ಹೆಚ್ಚಿದೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಿಂದ ಕೂಡ ರಶ್ಮಿಕಾ ಮಂದಣ್ಣ ಅವರು ಕೋಟ್ಯಂತರ ರೂಪಾಯಿ ಹಣ ಗಳಿಸುತ್ತಾರೆ. ಹಾಗಾಗಿ ಫೋರ್ಬ್ಸ್​ ಪಟ್ಟಿಯಲ್ಲಿ (Forbes List) ಸ್ಥಾನ ಪಡೆದ ದಕ್ಷಿಣ ಭಾರತದ ಸೆಲೆಬ್ರಿಟಿಗಳು ಪೈಕಿ ರಶ್ಮಿಕಾ ಕೂಡ ಗಮನ ಸೆಳೆದಿದ್ದರು. ಈ ವರ್ಷ ದಕ್ಷಿಣ ಭಾರತದ ಅತಿ ಹೆಚ್ಚು ಪ್ರಭಾವಿ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ನಂ.1 ಆಗಿದ್ದರು. ಆ ಬಗ್ಗೆ ಅವರೀಗ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

‘ಜನರಿಂದ ಸಿಗುತ್ತಿರುವ ಪ್ರೀತಿಗೆ ಧನ್ಯವಾದಗಳು. ಇದಕ್ಕಾಗಿಯೇ ನಾನು ಕೆಲಸ ಮಾಡುತ್ತಿರುವುದು. ಈ ಲವ್​ ಅಪರಿಮಿತವಾದದ್ದು. ವಿನಮ್ರವಾಗಿ ಇರಲು ಪ್ರಯತ್ನಿಸುತ್ತಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಕನ್ನಡದ ‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರ ಜತೆ ರಶ್ಮಿಕಾ ಮಂದಣ್ಣ ನಟಿಸಿದ ‘ಮಿಷನ್​ ಮಜ್ನು’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​ ಜತೆ ಅವರು ‘ಗುಡ್​ಬೈ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ನಡುವೆ ಅಲ್ಲು ಅರ್ಜುನ್​ ಜತೆ ರಶ್ಮಿಕಾ ನಟಿಸಿದ ‘ಪುಷ್ಪ’ ಸಿನಿಮಾ ಹಿಂದಿ ಭಾಷೆಗೂ ಡಬ್​ ಆಗಿ ಧೂಳೆಬ್ಬಿಸುತ್ತಿದೆ.

ಕರ್ನಾಟಕದಲ್ಲೂ ‘ಪುಷ್ಪ’ ಚಿತ್ರ ಗ್ರ್ಯಾಂಡ್​ ಆಗಿ ರಿಲೀಸ್​ ಆಗಿದೆ. ಆದರೆ ಕನ್ನಡ ಅವತರಣಿಕೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ತೆಲುಗು ವರ್ಷನ್​ಗೆ 670ಕ್ಕೂ ಅಧಿಕ ಶೋ ಸಿಕ್ಕಿದೆ. ಕನ್ನಡದಲ್ಲಿ ಕೇವಲ ಮೂರು ಶೋ ನಿಗದಿ ಆಗಿತ್ತು. ಕೊನೇ ಗಳಿಗೆಯಲ್ಲೂ ಅದನ್ನೂ ಕ್ಯಾನ್ಸಲ್​ ಮಾಡಿ ತೆಲುಗು ವರ್ಷನ್​ ಪ್ರದರ್ಶನ ಮಾಡಲಾಗಿದೆ. ಕನ್ನಡ ಅವತರಣಿಕೆ ಪ್ರದರ್ಶನ ಮಾಡಿ ಎಂದು ಕೇಳಿದ ಪ್ರೇಕ್ಷಕರ ಮೇಲೆ ಚಿತ್ರಮಂದಿರದವರು ಅವಾಜ್​ ಹಾಕಿದ ಘಟನೆಯೂ ನಡೆದಿದೆ. ಈ ಕ್ರಮದ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು

Rashmika Mandanna: ‘ಪುಷ್ಪ’ ಚಿತ್ರಕ್ಕೆ ಕನ್ನಡದಲ್ಲಿ ಡಬ್​ ಮಾಡೋಕೆ ಟೈಮ್​ ಇರಲಿಲ್ಲ; ರಶ್ಮಿಕಾ ಮಂದಣ್ಣ

Published On - 2:10 pm, Fri, 17 December 21

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​