‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

Rashmika Mandanna: ಕನ್ನಡದ ಕಿರಿಕ್​ ಪಾರ್ಟಿ ಸಿನಿಮಾದಲ್ಲಿ ನಟಿಸಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ
ರಶ್ಮಿಕಾ ಮಂದಣ್ಣ
Follow us
| Updated By: Digi Tech Desk

Updated on:Dec 17, 2021 | 2:16 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಭಾಷೆಯ ಗಡಿ ಮೀರಿ ಅವರು ಬೆಳೆದಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರು ಬಾಲಿವುಡ್​ನಲ್ಲೂ ಸ್ಟಾರ್​ ಕಲಾವಿದರ ಜತೆ ತೆರೆಹಂಚಿಕೊಳ್ಳುವ ಚಾನ್ಸ್​ ಪಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರ ಹವಾ ಹೆಚ್ಚಿದೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಿಂದ ಕೂಡ ರಶ್ಮಿಕಾ ಮಂದಣ್ಣ ಅವರು ಕೋಟ್ಯಂತರ ರೂಪಾಯಿ ಹಣ ಗಳಿಸುತ್ತಾರೆ. ಹಾಗಾಗಿ ಫೋರ್ಬ್ಸ್​ ಪಟ್ಟಿಯಲ್ಲಿ (Forbes List) ಸ್ಥಾನ ಪಡೆದ ದಕ್ಷಿಣ ಭಾರತದ ಸೆಲೆಬ್ರಿಟಿಗಳು ಪೈಕಿ ರಶ್ಮಿಕಾ ಕೂಡ ಗಮನ ಸೆಳೆದಿದ್ದರು. ಈ ವರ್ಷ ದಕ್ಷಿಣ ಭಾರತದ ಅತಿ ಹೆಚ್ಚು ಪ್ರಭಾವಿ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ನಂ.1 ಆಗಿದ್ದರು. ಆ ಬಗ್ಗೆ ಅವರೀಗ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

‘ಜನರಿಂದ ಸಿಗುತ್ತಿರುವ ಪ್ರೀತಿಗೆ ಧನ್ಯವಾದಗಳು. ಇದಕ್ಕಾಗಿಯೇ ನಾನು ಕೆಲಸ ಮಾಡುತ್ತಿರುವುದು. ಈ ಲವ್​ ಅಪರಿಮಿತವಾದದ್ದು. ವಿನಮ್ರವಾಗಿ ಇರಲು ಪ್ರಯತ್ನಿಸುತ್ತಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಕನ್ನಡದ ‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರ ಜತೆ ರಶ್ಮಿಕಾ ಮಂದಣ್ಣ ನಟಿಸಿದ ‘ಮಿಷನ್​ ಮಜ್ನು’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​ ಜತೆ ಅವರು ‘ಗುಡ್​ಬೈ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ನಡುವೆ ಅಲ್ಲು ಅರ್ಜುನ್​ ಜತೆ ರಶ್ಮಿಕಾ ನಟಿಸಿದ ‘ಪುಷ್ಪ’ ಸಿನಿಮಾ ಹಿಂದಿ ಭಾಷೆಗೂ ಡಬ್​ ಆಗಿ ಧೂಳೆಬ್ಬಿಸುತ್ತಿದೆ.

ಕರ್ನಾಟಕದಲ್ಲೂ ‘ಪುಷ್ಪ’ ಚಿತ್ರ ಗ್ರ್ಯಾಂಡ್​ ಆಗಿ ರಿಲೀಸ್​ ಆಗಿದೆ. ಆದರೆ ಕನ್ನಡ ಅವತರಣಿಕೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ತೆಲುಗು ವರ್ಷನ್​ಗೆ 670ಕ್ಕೂ ಅಧಿಕ ಶೋ ಸಿಕ್ಕಿದೆ. ಕನ್ನಡದಲ್ಲಿ ಕೇವಲ ಮೂರು ಶೋ ನಿಗದಿ ಆಗಿತ್ತು. ಕೊನೇ ಗಳಿಗೆಯಲ್ಲೂ ಅದನ್ನೂ ಕ್ಯಾನ್ಸಲ್​ ಮಾಡಿ ತೆಲುಗು ವರ್ಷನ್​ ಪ್ರದರ್ಶನ ಮಾಡಲಾಗಿದೆ. ಕನ್ನಡ ಅವತರಣಿಕೆ ಪ್ರದರ್ಶನ ಮಾಡಿ ಎಂದು ಕೇಳಿದ ಪ್ರೇಕ್ಷಕರ ಮೇಲೆ ಚಿತ್ರಮಂದಿರದವರು ಅವಾಜ್​ ಹಾಕಿದ ಘಟನೆಯೂ ನಡೆದಿದೆ. ಈ ಕ್ರಮದ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು

Rashmika Mandanna: ‘ಪುಷ್ಪ’ ಚಿತ್ರಕ್ಕೆ ಕನ್ನಡದಲ್ಲಿ ಡಬ್​ ಮಾಡೋಕೆ ಟೈಮ್​ ಇರಲಿಲ್ಲ; ರಶ್ಮಿಕಾ ಮಂದಣ್ಣ

Published On - 2:10 pm, Fri, 17 December 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ