AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ

Rashmika Mandanna: ಕನ್ನಡದ ಕಿರಿಕ್​ ಪಾರ್ಟಿ ಸಿನಿಮಾದಲ್ಲಿ ನಟಿಸಿದ ಬಳಿಕ ರಶ್ಮಿಕಾ ಮಂದಣ್ಣ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

‘ಈ ಲವ್​ ಅಪರಿಮಿತ’; ಫೋರ್ಬ್ಸ್​ ಪಟ್ಟಿಯಲ್ಲಿ ನಂ.1 ಆಗಿದ್ದಕ್ಕೆ ರಶ್ಮಿಕಾ ಮಂದಣ್ಣ ಪ್ರತಿಕ್ರಿಯೆ
ರಶ್ಮಿಕಾ ಮಂದಣ್ಣ
TV9 Web
| Updated By: Digi Tech Desk|

Updated on:Dec 17, 2021 | 2:16 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಭಾಷೆಯ ಗಡಿ ಮೀರಿ ಅವರು ಬೆಳೆದಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರು ಬಾಲಿವುಡ್​ನಲ್ಲೂ ಸ್ಟಾರ್​ ಕಲಾವಿದರ ಜತೆ ತೆರೆಹಂಚಿಕೊಳ್ಳುವ ಚಾನ್ಸ್​ ಪಡೆದುಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರ ಹವಾ ಹೆಚ್ಚಿದೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತು ಕ್ಷೇತ್ರದಿಂದ ಕೂಡ ರಶ್ಮಿಕಾ ಮಂದಣ್ಣ ಅವರು ಕೋಟ್ಯಂತರ ರೂಪಾಯಿ ಹಣ ಗಳಿಸುತ್ತಾರೆ. ಹಾಗಾಗಿ ಫೋರ್ಬ್ಸ್​ ಪಟ್ಟಿಯಲ್ಲಿ (Forbes List) ಸ್ಥಾನ ಪಡೆದ ದಕ್ಷಿಣ ಭಾರತದ ಸೆಲೆಬ್ರಿಟಿಗಳು ಪೈಕಿ ರಶ್ಮಿಕಾ ಕೂಡ ಗಮನ ಸೆಳೆದಿದ್ದರು. ಈ ವರ್ಷ ದಕ್ಷಿಣ ಭಾರತದ ಅತಿ ಹೆಚ್ಚು ಪ್ರಭಾವಿ ಸೆಲೆಬ್ರಿಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ರಶ್ಮಿಕಾ ನಂ.1 ಆಗಿದ್ದರು. ಆ ಬಗ್ಗೆ ಅವರೀಗ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

‘ಜನರಿಂದ ಸಿಗುತ್ತಿರುವ ಪ್ರೀತಿಗೆ ಧನ್ಯವಾದಗಳು. ಇದಕ್ಕಾಗಿಯೇ ನಾನು ಕೆಲಸ ಮಾಡುತ್ತಿರುವುದು. ಈ ಲವ್​ ಅಪರಿಮಿತವಾದದ್ದು. ವಿನಮ್ರವಾಗಿ ಇರಲು ಪ್ರಯತ್ನಿಸುತ್ತಿದ್ದೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಕನ್ನಡದ ‘ಕಿರಿಕ್​ ಪಾರ್ಟಿ’ ಸಿನಿಮಾದಲ್ಲಿ ನಟಿಸಿದ ಬಳಿಕ ಅವರು ಹಿಂದಿರುಗಿ ನೋಡಿಲ್ಲ. ಪ್ರತಿ ಚಿತ್ರದಲ್ಲಿಯೂ ಅವರ ಚಾರ್ಮ್​ ಹೆಚ್ಚುತ್ತಿದೆ. ಈಗ ಅವರು ಬಾಲಿವುಡ್​ ಬಾಗಿಲು ತಟ್ಟಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರ ಜತೆ ರಶ್ಮಿಕಾ ಮಂದಣ್ಣ ನಟಿಸಿದ ‘ಮಿಷನ್​ ಮಜ್ನು’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​ ಜತೆ ಅವರು ‘ಗುಡ್​ಬೈ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ನಡುವೆ ಅಲ್ಲು ಅರ್ಜುನ್​ ಜತೆ ರಶ್ಮಿಕಾ ನಟಿಸಿದ ‘ಪುಷ್ಪ’ ಸಿನಿಮಾ ಹಿಂದಿ ಭಾಷೆಗೂ ಡಬ್​ ಆಗಿ ಧೂಳೆಬ್ಬಿಸುತ್ತಿದೆ.

ಕರ್ನಾಟಕದಲ್ಲೂ ‘ಪುಷ್ಪ’ ಚಿತ್ರ ಗ್ರ್ಯಾಂಡ್​ ಆಗಿ ರಿಲೀಸ್​ ಆಗಿದೆ. ಆದರೆ ಕನ್ನಡ ಅವತರಣಿಕೆಯನ್ನು ಕಡೆಗಣಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ದಿನ ತೆಲುಗು ವರ್ಷನ್​ಗೆ 670ಕ್ಕೂ ಅಧಿಕ ಶೋ ಸಿಕ್ಕಿದೆ. ಕನ್ನಡದಲ್ಲಿ ಕೇವಲ ಮೂರು ಶೋ ನಿಗದಿ ಆಗಿತ್ತು. ಕೊನೇ ಗಳಿಗೆಯಲ್ಲೂ ಅದನ್ನೂ ಕ್ಯಾನ್ಸಲ್​ ಮಾಡಿ ತೆಲುಗು ವರ್ಷನ್​ ಪ್ರದರ್ಶನ ಮಾಡಲಾಗಿದೆ. ಕನ್ನಡ ಅವತರಣಿಕೆ ಪ್ರದರ್ಶನ ಮಾಡಿ ಎಂದು ಕೇಳಿದ ಪ್ರೇಕ್ಷಕರ ಮೇಲೆ ಚಿತ್ರಮಂದಿರದವರು ಅವಾಜ್​ ಹಾಕಿದ ಘಟನೆಯೂ ನಡೆದಿದೆ. ಈ ಕ್ರಮದ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:

Pushpa Twitter Review: ಅಲ್ಲು ಅರ್ಜುನ್​, ರಶ್ಮಿಕಾ ಚಿತ್ರ ಹಲವರಿಗೆ ಇಷ್ಟವಾಯ್ತು, ಕೆಲವರಿಗೆ ಕಷ್ಟವಾಯ್ತು

Rashmika Mandanna: ‘ಪುಷ್ಪ’ ಚಿತ್ರಕ್ಕೆ ಕನ್ನಡದಲ್ಲಿ ಡಬ್​ ಮಾಡೋಕೆ ಟೈಮ್​ ಇರಲಿಲ್ಲ; ರಶ್ಮಿಕಾ ಮಂದಣ್ಣ

Published On - 2:10 pm, Fri, 17 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ