AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?

Rashmika Mandanna: ರಶ್ಮಿಕಾ ಮಂದಣ್ಣ ಅವರಿಗೆ ಈಗ 25 ವರ್ಷ ವಯಸ್ಸು. ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಇತ್ತೀಚೆಗೆ ಪ್ರಶ್ನೆ ಎದುರಾಯಿತು.

ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ರಶ್ಮಿಕಾ ಮಂದಣ್ಣ ಹೇಳೋದೇನು?
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Nov 12, 2021 | 9:20 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಸ್ಟಾರ್​ ನಟರ ಸಿನಿಮಾಗಳಿಗೆ ಅವರೇ ನಾಯಕಿ ಆಗಬೇಕು ಎಂದು ನಿರ್ಮಾಪಕರು ಬೇಡಿಕೆ ಇಡುತ್ತಿದ್ದಾರೆ. ತೆಲುಗು, ತಮಿಳು ಮಾತ್ರವಲ್ಲದೇ ಹಿಂದಿಯಲ್ಲೂ ಅವರ ಹವಾ ಹೆಚ್ಚಿದೆ. ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​ ಮಲ್ಹೋತ್ರಾ (Siddharth Malhotra ) ಅವರಂತಹ ಸ್ಟಾರ್​ ಕಲಾವಿದರ ಜೊತೆ ತೆರೆಹಂಚಿಕೊಳ್ಳುವ ಚಾನ್ಸ್​ ರಶ್ಮಿಕಾ ಮಂದಣ್ಣಗೆ ಸಿಕ್ಕಿದೆ. ಇವೆಲ್ಲ ಸಿನಿಮಾ ವಿಷಯವಾದರೆ, ವೈಯಕ್ತಿಕ ವಿಚಾರಕ್ಕೂ ಅವರು ಆಗಾಗ ಸುದ್ದಿ ಆಗುತ್ತಾರೆ. ಸದ್ಯ ರಶ್ಮಿಕಾ ಯಾರನ್ನಾದರೂ ಲವ್​ ಮಾಡುತ್ತಿದ್ದಾರಾ? ಈ ಪ್ರಶ್ನೆ ಅಭಿಮಾನಿಗಳ ತಲೆಯಲ್ಲಿ ಕೊರೆಯುತ್ತಿದೆ. ಹಾಗಾಗಿ ಕೆಲವು ಸಂದರ್ಶನಗಳಲ್ಲೂ ಅವರಿಗೆ ರಿಲೇಷನ್​ಶಿಪ್ (Relationship)​ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಇತ್ತೀಚೆಗೆ ಡೇಟಿಂಗ್​ ಕುರಿತ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ. 

ಸದ್ಯ ರಶ್ಮಿಕಾ ಮಂದಣ್ಣ ಅವರಿಗೆ 25 ವರ್ಷ ವಯಸ್ಸು. ತಮಗಿಂತ ಚಿಕ್ಕ ವಯಸ್ಸಿನ ಹುಡುಗನ ಜೊತೆ ಡೇಟಿಂಗ್​ ಮಾಡುವ ಬಗ್ಗೆ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಲಾಯಿತು. ಅದಕ್ಕೆ ತುಂಬ ಬುದ್ಧಿವಂತಿಕೆಯಿಂದ ಅವರು ಉತ್ತರ ನೀಡಿದ್ದಾರೆ. ‘ವಯಸ್ಸು ಮುಖ್ಯವಾಗುವುದಿಲ್ಲ. ವ್ಯಕ್ತಿ ಮುಖ್ಯವಾಗುತ್ತಾರೆ’ ಎಂದು ರಶ್ಮಿಕಾ ಹೇಳಿದ್ದಾರೆ. ಈ ಜಾಣತನದ ಉತ್ತರಕ್ಕೆ ಅವರ ಫ್ಯಾನ್ಸ್​ ಭೇಷ್​ ಎನ್ನುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ನಟಿಸಿರುವ ‘ಪುಷ್ಪ’ ಸಿನಿಮಾ ಈ ವರ್ಷ ಡಿಸೆಂಬರ್​ 17ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಆ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ತೆರೆಹಂಚಿಕೊಂಡಿರುವ ಅವರು ಶ್ರೀವಲ್ಲಿ ಎಂಬ ಪಾತ್ರ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಹಾಡುಗಳಲ್ಲಿ ಶ್ರೀವಲ್ಲಿ ಪಾತ್ರದ ಬಗ್ಗೆ ವಿವರಿಸಲಾಗಿದೆ. ದೊಡ್ಡ ಪರದೆ ಮೇಲೆ ಶ್ರೀವಲ್ಲಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

ಕೆಲವೇ ದಿನಗಳ ಹಿಂದೆ ‘ಪುಷ್ಪ’ ಸಿನಿಮಾದ ‘ಸಾಮಿ ಸಾಮಿ..’ ಹಾಡು ರಿಲೀಸ್​ ಆಯಿತು. ತೆಲುಗಿನ ಜೊತೆಗೆ ಕನ್ನಡ, ಮಲಯಾಳಂ, ತಮಿಳಿನಲ್ಲೂ ಈ ಹಾಡು ಬಿಡುಗಡೆ ಆಗಿದೆ. ಕನ್ನಡ ವರ್ಷನ್​ಗೆ ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ. ಈ ಗೀತೆಯನ್ನು ವರದರಾಜ್​ ಚಿಕ್ಕಬಳ್ಳಾಪುರ ಅವರು ಬರೆದಿದ್ದಾರೆ. ಸಾಹಿತ್ಯಕ್ಕೆ ಹೊಂದುವಂತೆ ಡಿಫರೆಂಟ್ ಸ್ಟೆಪ್​ಗಳನ್ನು ನೃತ್ಯ ನಿರ್ದೇಶಕ ಶೇಖರ್​ ವಿ.ಜೆ. ಹೇಳಿಕೊಟ್ಟಿದ್ದಾರೆ. ‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್​ ಗೆಟಪ್​ ಸಂಪೂರ್ಣ ಡಿಫರೆಂಟ್​ ಆಗಿದೆ. ರಶ್ಮಿಕಾ ಕೂಡ ಹಳ್ಳಿ ಹುಡುಗಿ ರೀತಿ ಕಾಣಿಸಿಕೊಂಡಿದ್ದಾರೆ. ಆದರೂ ಗ್ಲಾಮರ್​ ಏನೂ ಕಮ್ಮಿ ಇಲ್ಲ. ಈ ಸಿನಿಮಾದಿಂದ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್​ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಯಶ್​, ಪ್ರಭಾಸ್​, ಸಮಂತಾರನ್ನೂ ಹಿಂದಿಕ್ಕಿ ರಶ್ಮಿಕಾ ನಂ.1, ದೇವರಕೊಂಡ ನಂ.2: ಇಲ್ಲಿದೆ ಫೋರ್ಬ್ಸ್​ ಪಟ್ಟಿ

Rashmika Mandanna: ಒಂದೇ ಒಂದು ಮಾತಿನಿಂದ ಟ್ರೋಲಿಗನ ಕಮೆಂಟ್​ ಡಿಲೀಟ್​ ಮಾಡಿಸಿದ ರಶ್ಮಿಕಾ; ಅದರಲ್ಲಿ ಅಂಥದ್ದೇನಿತ್ತು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?