AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಆಗಿ ‘ಪುಷ್ಪ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ನಟನೆ ಎಲ್ಲರಿಗೂ ಇಷ್ಟವಾಗಿದೆ. ಈ ಕಾರಣಕ್ಕೆ ಜನರು ಹೆಚ್ಚೆಚ್ಚು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ. ದೊಡ್ಡದೊಡ್ಡ ಸಿನಿಮಾಗಳಿಗೂ ಈ ಚಿತ್ರ ಟಫ್​ ಫೈಟ್​ ನೀಡಿದೆ.

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 
ಅಲ್ಲು ಅರ್ಜುನ್​-ರಶ್ಮಿಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 29, 2021 | 6:16 PM

‘ಪುಷ್ಪ’ ಸಿನಿಮಾ (Pushpa Movie) ಡಿಸೆಂಬರ್​ 17ಕ್ಕೆ ರಿಲೀಸ್​ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಸಿನಿಮಾ ನೋಡಿದ ಕೆಲವರು ಇದನ್ನು ತೆಗಳಿದರೆ, ಇನ್ನೂ ಕೆಲವರು ಹೊಗಳಿದ್ದರು. ಆದರೆ, ಬಾಕ್ಸ್​ ಆಫೀಸ್​ನಲ್ಲಿ ಸಿನಿಮಾ ಒಳ್ಳೆಯ ಗಳಿಕೆಯನ್ನೇ ಮಾಡುತ್ತಿದೆ. ಈ ಸಿನಿಮಾ ಕಲೆಕ್ಷನ್​ 250 ಕೋಟಿ ರೂಪಾಯಿ ಗಡಿ ದಾಟಿದೆ. ಈ ಗೆಲುವನ್ನು ನಿರ್ದೇಶಕ ಸುಕುಮಾರ್ ಸಂಭ್ರಮಿಸಿದ್ದಾರೆ. ಅಲ್ಲದೆ, ತಮ್ಮ ತಾಂತ್ರಿಕ ತಂಡದಿಂದ ಈ ಸಿನಿಮಾ ಸಾಧ್ಯವಾಯಿತು ಎನ್ನುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ. ಈ ಚಿತ್ರಕ್ಕಾಗಿ ಶ್ರಮ ವಹಿಸಿದ ಎಲ್ಲರಿಗೂ ದೊಡ್ಡ ಗಿಫ್ಟ್​ ನೀಡೋಕೆ ಸುಕುಮಾರ್​ ಮುಂದಾಗಿದ್ದಾರೆ.

ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಆಗಿ ‘ಪುಷ್ಪ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ನಟನೆ ಎಲ್ಲರಿಗೂ ಇಷ್ಟವಾಗಿದೆ. ಈ ಕಾರಣಕ್ಕೆ ಜನರು ಹೆಚ್ಚೆಚ್ಚು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ. ದೊಡ್ಡದೊಡ್ಡ ಸಿನಿಮಾಗಳಿಗೂ ಈ ಚಿತ್ರ ಟಫ್​ ಫೈಟ್​ ನೀಡಿದೆ. ಈ ಕಾರಣಕ್ಕೆ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 250 ಕೋಟಿ ಗಳಿಸಿದೆ. ಇದೇ ಖುಷಿಗೆ ಚಿತ್ರದ ನಿರ್ದೇಶಕ ಸುಕುಮಾರ್​ ಅವರು ತಂಡದ ಸಿಬ್ಬಂದಿಗೆ 1 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.

ಎಲ್ಲರಿಗೂ ಧನ್ಯವಾದ ಹೇಳೋಕೆ ಸುಕುಮಾರ್​ ಅವರು ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಇಡೀ ಚಿತ್ರತಂಡ ಹಾಜರಿತ್ತು. ‘ಪುಷ್ಪ ಚಿತ್ರ ಮಾಡುವುದು ನಿಜಕ್ಕೂ ಕಷ್ಟಕರವಾಗಿತ್ತು. ನನ್ನ ತಾಂತ್ರಿಕ ತಂಡವಿಲ್ಲದೆ ಅದು ಸಾಧ್ಯವಿರಲಿಲ್ಲ. ಹೀಗಾಗಿ, ತಾಂತ್ರಿಕ ವರ್ಗದಲ್ಲಿ ಕೆಲಸ ಮಾಡಿದ ಎಲ್ಲರಿಗೂ ನಾನು 1 ಲಕ್ಷ ರೂಪಾಯಿ ನೀಡುತ್ತಿದ್ದೇನೆ’ ಎಂದು ಸುಕುಮಾರ್ ಹೇಳಿದರು. ಸುಕುಮಾರ್ ಅವರ ಈ ಘೋಷಣೆಯು ನಟ ಅಲ್ಲು ಅರ್ಜುನ್ ಮತ್ತು ಅಭಿಮಾನಿಗಳ ಮನ ಗೆದ್ದಿದೆ.

2021ರಲ್ಲಿ ಹೆಚ್ಚು ಸದ್ದು ಮಾಡಿದ ಟಾಪ್​ 100 ಹಾಡುಗಳ ಪಟ್ಟಿಯಲ್ಲಿ ‘ಪುಷ್ಪ’ ಸಿನಿಮಾದ ‘ಊ ಅಂಟಾವಾ ಮಾವ ಊಊ ಅಂಟಾವಾ ಮಾವ’ ನಂ.1 ಪಟ್ಟ ಪಡೆದುಕೊಂಡಿದೆ. ಕೆಲವೇ ದಿನಗಳ ಹಿಂದೆ ಬಿಡುಗಡೆಯಾದ ಈ ಗೀತೆಯನ್ನು ಜನರು ಮುಗಿಬಿದ್ದು ನೋಡಿದ್ದಾರೆ. ಅತಿವೇಗವಾಗಿ ಹೆಚ್ಚು ವೀವ್ಸ್​ ಪಡೆಯುವಲ್ಲಿಯೂ ಈ ಹಾಡು ದಾಖಲೆ ಬರೆಯಿತು. ಈವರೆಗೂ ಈ ಗೀತೆಯ ತೆಲುಗು ವರ್ಷನ್​ 9.3 ಕೋಟಿಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಯೂಟ್ಯೂಬ್​ ಟ್ರೆಂಡ್​ ಮತ್ತು ಜನರ ಆಯ್ಕೆಯನ್ನು ಆಧರಿಸಿ ಈ ಹಾಡು ನಂ.1 ಸ್ಥಾನಕ್ಕೇರಿದೆ.

ಇದನ್ನೂ ಓದಿ: ‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್​ ಚಾನ್ಸ್​; ಮತ್ತೋರ್ವ ಸ್ಟಾರ್​ ನಟನಿಗೆ ಕೊಡಗಿನ ಕುವರಿ ಜೋಡಿ?

‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

Published On - 8:17 pm, Tue, 28 December 21

ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
Daily horoscope: ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ