AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?
ಅಲ್ಲು ಅರ್ಜುನ್​-ಯಶ್​
TV9 Web
| Edited By: |

Updated on:Dec 29, 2021 | 6:17 PM

Share

ಸದ್ಯ, ಎಲ್ಲಾ ಸ್ಟಾರ್​ ನಟರ ಗಮನ ಪ್ಯಾನ್​ ಇಂಡಿಯಾ ಸಿನಿಮಾಗಳತ್ತ ಇದೆ. ತಮ್ಮ ಭಾಷೆಯಲ್ಲಿ ಸಿನಿಮಾ ಮಾಡುವುದರ ಜತೆಗೆ ಅದನ್ನು ಬೇರೆ ಭಾಷೆಗೂ ಡಬ್​ ಮಾಡಿ ರಿಲೀಸ್​ ಮಾಡುವ ಮೂಲಕ ಬಾಕ್ಸ್ ಆಫೀಸ್​ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿವೆ. ‘ರಾಕಿಂಗ್​ ಸ್ಟಾರ್​’ ಯಶ್​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ 2018ರಲ್ಲಿ ದೇಶಾದ್ಯಂತ ಬಿಡುಗಡೆಯಾಗಿ ಧೂಳೆಬ್ಬಿಸಿತ್ತು. ಕನ್ನಡ, ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಆ ಚಿತ್ರ ತೆರೆಕಂಡಿತ್ತು. ಈ ಸಿನಿಮಾಗೆ ಹಿಂದಿಯಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ ಕೂಡ ಒಳ್ಳೆಯ ಕಮಾಯಿ ಮಾಡುತ್ತಿದೆ. ಯಾವ ಸಿನಿಮಾ ಹೆಚ್ಚು ಗಳಿಕೆ ಮಾಡಲಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಮೊದಲ ದಿನ ಹಿಂದಿ ಅವತರಣಿಕೆಯಿಂದ ಈ ಚಿತ್ರಕ್ಕೆ 2.10 ಕೋಟಿ ರೂ. ಗಳಿಕೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ. ಪುಷ್ಪ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬಂದಿದೆ. ಈವರೆಗೆ ಸಿನಿಮಾ 39.95 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಮೂಲಕ ‘ಕೆಜಿಎಫ್​’ ಸಿನಿಮಾ ಗಳಿಕೆಯನ್ನು ಸಮೀಪಿಸಿದೆ.

‘ಪುಷ್ಪ’ ಸಿನಿಮಾದ ಬಿಸ್ನೆಸ್​ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಕೆಲ ವಾರ ಈ ಸಿನಿಮಾ ಪ್ರದರ್ಶನ ಕಾಣಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ, ಚಿತ್ರ ಇನ್ನೊಂದಷ್ಟು ಗಳಿಕೆ ಮಾಡಬಹುದು. ಏಪ್ರಿಲ್​ ತಿಂಗಳಲ್ಲಿ ತೆರೆಗೆ ಬರಲಿರುವ ‘ಕೆಜಿಎಫ್​ 2’ ಚಿತ್ರ ‘ಪುಷ್ಪ’ ದಾಖಲೆಯನ್ನು ಅನಾಯಾಸವಾಗಿ ಮುರಿದು ಹಾಕಲಿದೆ ಎನ್ನುವ ಅಭಿಪ್ರಾಯವನ್ನು ಬಾಕ್ಸ್​ ಆಫೀಸ್​ ಪಂಡಿತರು ಹೊರ ಹಾಕಿದ್ದಾರೆ. ಇದಕ್ಕಾಗಿ ಇನ್ನೂ ಕೆಲವು ತಿಂಗಳು ಕಾಯಲೇಬೇಕಿದೆ.

ಇದನ್ನೂ ಓದಿ: ‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ? 

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

Published On - 1:40 pm, Wed, 29 December 21

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ