AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?
ಅಲ್ಲು ಅರ್ಜುನ್​-ಯಶ್​
TV9 Web
| Edited By: |

Updated on:Dec 29, 2021 | 6:17 PM

Share

ಸದ್ಯ, ಎಲ್ಲಾ ಸ್ಟಾರ್​ ನಟರ ಗಮನ ಪ್ಯಾನ್​ ಇಂಡಿಯಾ ಸಿನಿಮಾಗಳತ್ತ ಇದೆ. ತಮ್ಮ ಭಾಷೆಯಲ್ಲಿ ಸಿನಿಮಾ ಮಾಡುವುದರ ಜತೆಗೆ ಅದನ್ನು ಬೇರೆ ಭಾಷೆಗೂ ಡಬ್​ ಮಾಡಿ ರಿಲೀಸ್​ ಮಾಡುವ ಮೂಲಕ ಬಾಕ್ಸ್ ಆಫೀಸ್​ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿವೆ. ‘ರಾಕಿಂಗ್​ ಸ್ಟಾರ್​’ ಯಶ್​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ 2018ರಲ್ಲಿ ದೇಶಾದ್ಯಂತ ಬಿಡುಗಡೆಯಾಗಿ ಧೂಳೆಬ್ಬಿಸಿತ್ತು. ಕನ್ನಡ, ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಆ ಚಿತ್ರ ತೆರೆಕಂಡಿತ್ತು. ಈ ಸಿನಿಮಾಗೆ ಹಿಂದಿಯಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ ಕೂಡ ಒಳ್ಳೆಯ ಕಮಾಯಿ ಮಾಡುತ್ತಿದೆ. ಯಾವ ಸಿನಿಮಾ ಹೆಚ್ಚು ಗಳಿಕೆ ಮಾಡಲಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಮೊದಲ ದಿನ ಹಿಂದಿ ಅವತರಣಿಕೆಯಿಂದ ಈ ಚಿತ್ರಕ್ಕೆ 2.10 ಕೋಟಿ ರೂ. ಗಳಿಕೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ. ಪುಷ್ಪ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬಂದಿದೆ. ಈವರೆಗೆ ಸಿನಿಮಾ 39.95 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಮೂಲಕ ‘ಕೆಜಿಎಫ್​’ ಸಿನಿಮಾ ಗಳಿಕೆಯನ್ನು ಸಮೀಪಿಸಿದೆ.

‘ಪುಷ್ಪ’ ಸಿನಿಮಾದ ಬಿಸ್ನೆಸ್​ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಕೆಲ ವಾರ ಈ ಸಿನಿಮಾ ಪ್ರದರ್ಶನ ಕಾಣಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ, ಚಿತ್ರ ಇನ್ನೊಂದಷ್ಟು ಗಳಿಕೆ ಮಾಡಬಹುದು. ಏಪ್ರಿಲ್​ ತಿಂಗಳಲ್ಲಿ ತೆರೆಗೆ ಬರಲಿರುವ ‘ಕೆಜಿಎಫ್​ 2’ ಚಿತ್ರ ‘ಪುಷ್ಪ’ ದಾಖಲೆಯನ್ನು ಅನಾಯಾಸವಾಗಿ ಮುರಿದು ಹಾಕಲಿದೆ ಎನ್ನುವ ಅಭಿಪ್ರಾಯವನ್ನು ಬಾಕ್ಸ್​ ಆಫೀಸ್​ ಪಂಡಿತರು ಹೊರ ಹಾಕಿದ್ದಾರೆ. ಇದಕ್ಕಾಗಿ ಇನ್ನೂ ಕೆಲವು ತಿಂಗಳು ಕಾಯಲೇಬೇಕಿದೆ.

ಇದನ್ನೂ ಓದಿ: ‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ? 

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

Published On - 1:40 pm, Wed, 29 December 21

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ