AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?
ಅಲ್ಲು ಅರ್ಜುನ್​-ಯಶ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 29, 2021 | 6:17 PM

ಸದ್ಯ, ಎಲ್ಲಾ ಸ್ಟಾರ್​ ನಟರ ಗಮನ ಪ್ಯಾನ್​ ಇಂಡಿಯಾ ಸಿನಿಮಾಗಳತ್ತ ಇದೆ. ತಮ್ಮ ಭಾಷೆಯಲ್ಲಿ ಸಿನಿಮಾ ಮಾಡುವುದರ ಜತೆಗೆ ಅದನ್ನು ಬೇರೆ ಭಾಷೆಗೂ ಡಬ್​ ಮಾಡಿ ರಿಲೀಸ್​ ಮಾಡುವ ಮೂಲಕ ಬಾಕ್ಸ್ ಆಫೀಸ್​ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿವೆ. ‘ರಾಕಿಂಗ್​ ಸ್ಟಾರ್​’ ಯಶ್​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ 2018ರಲ್ಲಿ ದೇಶಾದ್ಯಂತ ಬಿಡುಗಡೆಯಾಗಿ ಧೂಳೆಬ್ಬಿಸಿತ್ತು. ಕನ್ನಡ, ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಆ ಚಿತ್ರ ತೆರೆಕಂಡಿತ್ತು. ಈ ಸಿನಿಮಾಗೆ ಹಿಂದಿಯಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ ಕೂಡ ಒಳ್ಳೆಯ ಕಮಾಯಿ ಮಾಡುತ್ತಿದೆ. ಯಾವ ಸಿನಿಮಾ ಹೆಚ್ಚು ಗಳಿಕೆ ಮಾಡಲಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಮೊದಲ ದಿನ ಹಿಂದಿ ಅವತರಣಿಕೆಯಿಂದ ಈ ಚಿತ್ರಕ್ಕೆ 2.10 ಕೋಟಿ ರೂ. ಗಳಿಕೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ. ಪುಷ್ಪ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬಂದಿದೆ. ಈವರೆಗೆ ಸಿನಿಮಾ 39.95 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಮೂಲಕ ‘ಕೆಜಿಎಫ್​’ ಸಿನಿಮಾ ಗಳಿಕೆಯನ್ನು ಸಮೀಪಿಸಿದೆ.

‘ಪುಷ್ಪ’ ಸಿನಿಮಾದ ಬಿಸ್ನೆಸ್​ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಕೆಲ ವಾರ ಈ ಸಿನಿಮಾ ಪ್ರದರ್ಶನ ಕಾಣಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ, ಚಿತ್ರ ಇನ್ನೊಂದಷ್ಟು ಗಳಿಕೆ ಮಾಡಬಹುದು. ಏಪ್ರಿಲ್​ ತಿಂಗಳಲ್ಲಿ ತೆರೆಗೆ ಬರಲಿರುವ ‘ಕೆಜಿಎಫ್​ 2’ ಚಿತ್ರ ‘ಪುಷ್ಪ’ ದಾಖಲೆಯನ್ನು ಅನಾಯಾಸವಾಗಿ ಮುರಿದು ಹಾಕಲಿದೆ ಎನ್ನುವ ಅಭಿಪ್ರಾಯವನ್ನು ಬಾಕ್ಸ್​ ಆಫೀಸ್​ ಪಂಡಿತರು ಹೊರ ಹಾಕಿದ್ದಾರೆ. ಇದಕ್ಕಾಗಿ ಇನ್ನೂ ಕೆಲವು ತಿಂಗಳು ಕಾಯಲೇಬೇಕಿದೆ.

ಇದನ್ನೂ ಓದಿ: ‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ? 

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

Published On - 1:40 pm, Wed, 29 December 21

ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್