AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ.

ಹಿಂದಿಯಲ್ಲಿ ‘ಕೆಜಿಎಫ್​’ ವರ್ಸಸ್​ ‘ಪುಷ್ಪ’; ಬಾಕ್ಸ್​ ಆಫೀಸ್​ ಗಳಿಕೆಯಲ್ಲಿ ಗೆದ್ದಿದ್ದು ಯಾರು?
ಅಲ್ಲು ಅರ್ಜುನ್​-ಯಶ್​
TV9 Web
| Edited By: |

Updated on:Dec 29, 2021 | 6:17 PM

Share

ಸದ್ಯ, ಎಲ್ಲಾ ಸ್ಟಾರ್​ ನಟರ ಗಮನ ಪ್ಯಾನ್​ ಇಂಡಿಯಾ ಸಿನಿಮಾಗಳತ್ತ ಇದೆ. ತಮ್ಮ ಭಾಷೆಯಲ್ಲಿ ಸಿನಿಮಾ ಮಾಡುವುದರ ಜತೆಗೆ ಅದನ್ನು ಬೇರೆ ಭಾಷೆಗೂ ಡಬ್​ ಮಾಡಿ ರಿಲೀಸ್​ ಮಾಡುವ ಮೂಲಕ ಬಾಕ್ಸ್ ಆಫೀಸ್​ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿವೆ. ‘ರಾಕಿಂಗ್​ ಸ್ಟಾರ್​’ ಯಶ್​ ಅಭಿನಯದ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ 2018ರಲ್ಲಿ ದೇಶಾದ್ಯಂತ ಬಿಡುಗಡೆಯಾಗಿ ಧೂಳೆಬ್ಬಿಸಿತ್ತು. ಕನ್ನಡ, ಹಿಂದಿ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಆ ಚಿತ್ರ ತೆರೆಕಂಡಿತ್ತು. ಈ ಸಿನಿಮಾಗೆ ಹಿಂದಿಯಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದೆ. ಗಲ್ಲಾ ಪೆಟ್ಟಿಗೆಯಲ್ಲಿ ಈ ಸಿನಿಮಾ ಕೂಡ ಒಳ್ಳೆಯ ಕಮಾಯಿ ಮಾಡುತ್ತಿದೆ. ಯಾವ ಸಿನಿಮಾ ಹೆಚ್ಚು ಗಳಿಕೆ ಮಾಡಲಿದೆ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದೆ.

2018ರ ಡಿ.21ರಂದು ‘ಕೆಜಿಎಫ್​: ಚಾಪ್ಟರ್​ 1’ ಚಿತ್ರ ಬಿಡುಗಡೆ ಆಗಿತ್ತು. ಮೊದಲ ದಿನ ಹಿಂದಿ ಅವತರಣಿಕೆಯಿಂದ ಈ ಚಿತ್ರಕ್ಕೆ 2.10 ಕೋಟಿ ರೂ. ಗಳಿಕೆ ಆಗಿತ್ತು. ಎರಡು ತಿಂಗಳಿಗೆ ಈ ಚಿತ್ರ ಒಟ್ಟಾರೆ ಗಳಿಸಿದ್ದು 44 ಕೋಟಿ ರೂಪಾಯಿ. ಈಗ ಪುಷ್ಪ ಕೂಡ ಇದೇ ಹಾದಿಯಲ್ಲಿ ಸಾಗಿ ಬರುತ್ತಿದೆ. ಪುಷ್ಪ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬಂದಿದೆ. ಈವರೆಗೆ ಸಿನಿಮಾ 39.95 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಮೂಲಕ ‘ಕೆಜಿಎಫ್​’ ಸಿನಿಮಾ ಗಳಿಕೆಯನ್ನು ಸಮೀಪಿಸಿದೆ.

‘ಪುಷ್ಪ’ ಸಿನಿಮಾದ ಬಿಸ್ನೆಸ್​ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಕೆಲ ವಾರ ಈ ಸಿನಿಮಾ ಪ್ರದರ್ಶನ ಕಾಣಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ, ಚಿತ್ರ ಇನ್ನೊಂದಷ್ಟು ಗಳಿಕೆ ಮಾಡಬಹುದು. ಏಪ್ರಿಲ್​ ತಿಂಗಳಲ್ಲಿ ತೆರೆಗೆ ಬರಲಿರುವ ‘ಕೆಜಿಎಫ್​ 2’ ಚಿತ್ರ ‘ಪುಷ್ಪ’ ದಾಖಲೆಯನ್ನು ಅನಾಯಾಸವಾಗಿ ಮುರಿದು ಹಾಕಲಿದೆ ಎನ್ನುವ ಅಭಿಪ್ರಾಯವನ್ನು ಬಾಕ್ಸ್​ ಆಫೀಸ್​ ಪಂಡಿತರು ಹೊರ ಹಾಕಿದ್ದಾರೆ. ಇದಕ್ಕಾಗಿ ಇನ್ನೂ ಕೆಲವು ತಿಂಗಳು ಕಾಯಲೇಬೇಕಿದೆ.

ಇದನ್ನೂ ಓದಿ: ‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ? 

‘ಪುಷ್ಪ’ ಚಿತ್ರಕ್ಕಾಗಿ ಶ್ರಮಿಸಿದವರಿಗೆ ನಿರ್ದೇಶಕ ಸುಕುಮಾರ್​ ಕಡೆಯಿಂದ ಬಂಪರ್​ ಗಿಫ್ಟ್​ 

Published On - 1:40 pm, Wed, 29 December 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ