AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​

ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ಅವರ ಬತ್ತಳಿಕೆಯಿಂದ ಬರುತ್ತಿರುವ ‘ಪುಷ್ಪ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಈ ನಿರೀಕ್ಷೆಗೆ ಪಾತ್ರವರ್ಗ ಕೂಡ ಕಾರಣ. ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಎಂಬ ಲಾರಿ ಡ್ರೈವರ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ.

​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​
​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​
TV9 Web
| Edited By: |

Updated on:Apr 02, 2026 | 10:22 AM

Share

ಕನ್ನಡದ ಕಲಾವಿದ ಧನಂಜಯ (Daali Dhananjay) ಅವರು ಈಗ ಬಹುಭಾಷಾ ನಟ. ಸ್ಯಾಂಡಲ್​ವುಡ್​ನಲ್ಲಿ ಡಾಲಿ ಆಗಿ ಮಿಂಚಿದ ಅವರು ಈಗ ಟಾಲಿವುಡ್​ನಲ್ಲಿ ಜಾಲಿ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ, ‘ಪುಷ್ಪ’ (Pushpa) ಸಿನಿಮಾದಲ್ಲಿ ಅವರ ಪಾತ್ರದ ಹೆಸರು ಜಾಲಿ ರೆಡ್ಡಿ (Jolly Reddy) ಎಂಬುದು ಈಗ ಬಹಿರಂಗ ಆಗಿದೆ. ಇಂದು (ಆ.23) ಧನಂಜಯ ಬರ್ತ್​ಡೇ. ಆ ಪ್ರಯುಕ್ತ ಅವರು ನಟಿಸುತ್ತಿರುವ ವಿವಿಧ ಸಿನಿಮಾ ತಂಡಗಳು ಹೊಸ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿವೆ. ಆ ಪೈಕಿ ಅಲ್ಲು ಅರ್ಜುನ್​ (Allu Arjun) ನಾಯಕತ್ವದ ‘ಪುಷ್ಪ’ ಸಿನಿಮಾದಲ್ಲಿನ ಧನಂಜಯ ಅವರ ಗೆಟಪ್​ ಗಮನ ಸೆಳೆಯುತ್ತಿದೆ.

ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ಅವರ ಬತ್ತಳಿಕೆಯಿಂದ ಬರುತ್ತಿರುವ ‘ಪುಷ್ಪ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಈ ನಿರೀಕ್ಷೆಗೆ ಪಾತ್ರವರ್ಗ ಕೂಡ ಕಾರಣ. ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಎಂಬ ಲಾರಿ ಡ್ರೈವರ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ವಿಲನ್ ಪಾತ್ರದಲ್ಲಿ ಧನಂಜಯ ಅವರು ಅಭಿನಯಿಸುತ್ತಿದ್ದಾರೆ. ಇದುವರೆಗೂ ಧನಂಜಯ ಅವರ ಲುಕ್​ ಬಹಿರಂಗ ಆಗಿರಲಿಲ್ಲ. ಪಾತ್ರದ ಹೆಸರನ್ನು ಕೂಡ ರಹಸ್ಯವಾಗಿ ಇಡಲಾಗಿತ್ತು. ಈಗ ಹೊಸ ಪೋಸ್ಟರ್​ ಮೂಲಕ ಅಭಿಮಾನಿಗಳಿಗೆ ಎಲ್ಲ ಮಾಹಿತಿಯನ್ನು ಬಿಟ್ಟುಕೊಟ್ಟಿದೆ ‘ಪುಷ್ಪ’ ಚಿತ್ರತಂಡ.

ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಮೈತ್ರೀ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಧನಂಜಯ ಅವರ ಫಸ್ಟ್​ಲುಕ್​ ಪೋಸ್ಟರ್​ ಅನ್ನು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಬಿಡುಗಡೆ ಮಾಡಿದೆ. ‘ನಮ್ಮ ಜಾಲಿ ರೆಡ್ಡಿ ಆಗಿರುವ ಧನಂಜಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಚಿತ್ರತಂಡದಿಂದ ವಿಶ್​ ಮಾಡಲಾಗಿದೆ.

ಕನ್ನಡದ ‘ಟಗರು’ ಸಿನಿಮಾದಲ್ಲಿ ‘ಡಾಲಿ’ ಎಂಬ ವಿಲನ್​ ಪಾತ್ರವನ್ನು ಮಾಡಿದ ಬಳಿಕ ಧನಂಜಯ ಅವರಿಗೆ ಅದೃಷ್ಟ ಖುಲಾಯಿಸಿತು. ಹೀರೋ-ವಿಲನ್​ ಎಂಬ ಬೇಧವನ್ನು ತೋರಿದೇ, ತಮ್ಮ ನಟನೆಗೆ ಸ್ಕೋಪ್​ ಇರುವಂತಹ ಎಲ್ಲ ಪಾತ್ರಗಳನ್ನೂ ಧನಂಜಯ ನಿಭಾಯಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಎಲ್ಲ ಭಾಷೆಗಳಿಂದಲೂ ಆಫರ್​ಗಳು ಬರುತ್ತಿವೆ. ಕನ್ನಡದಲ್ಲಿ ಮಾನ್ಸೂನ್​ ರಾಗ, ರತ್ನನ್​ ಪ್ರಪಂಚ, ಡಾಲಿ, ಬೈರಾಗಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಧನಂಜಯ ನಟಿಸುತ್ತಿದ್ದಾರೆ. ಬಹುನಿರೀಕ್ಷಿತ ‘ಪುಷ್ಪ’ ಚಿತ್ರ ಎರಡು ಪಾರ್ಟ್​ಗಳಲ್ಲಿ ತಯಾರಾಗುತ್ತಿದ್ದು, ಈ ವರ್ಷ ಡಿಸೆಂಬರ್​ಗೆ ಮೊದಲ ಪಾರ್ಟ್​ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Published On - 6:51 pm, Mon, 23 August 21

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ