AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​

Jolly Reddy First Look: ‘ಪುಷ್ಪ’ ಸಿನಿಮಾದಲ್ಲಿನ ಧನಂಜಯ ಅವರ ಲುಕ್​ ಮತ್ತು ಪಾತ್ರದ ಹೆಸರು ಇದುವರೆಗೂ ಬಹಿರಂಗ ಆಗಿರಲಿಲ್ಲ. ಈಗ ಹೊಸ ಪೋಸ್ಟರ್​ ಮೂಲಕ ಅಭಿಮಾನಿಗಳಿಗೆ ಎಲ್ಲ ಮಾಹಿತಿಯನ್ನು ಬಿಟ್ಟುಕೊಂಡಿದೆ ‘ಪುಷ್ಪ’ ಚಿತ್ರತಂಡ.

​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​
​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​
TV9 Web
| Edited By: |

Updated on:Aug 23, 2021 | 6:57 PM

Share

ಕನ್ನಡದ ಕಲಾವಿದ ಧನಂಜಯ (Daali Dhananjay) ಅವರು ಈಗ ಬಹುಭಾಷಾ ನಟ. ಸ್ಯಾಂಡಲ್​ವುಡ್​ನಲ್ಲಿ ಡಾಲಿ ಆಗಿ ಮಿಂಚಿದ ಅವರು ಈಗ ಟಾಲಿವುಡ್​ನಲ್ಲಿ ಜಾಲಿ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ, ‘ಪುಷ್ಪ’ (Pushpa) ಸಿನಿಮಾದಲ್ಲಿ ಅವರ ಪಾತ್ರದ ಹೆಸರು ಜಾಲಿ ರೆಡ್ಡಿ (Jolly Reddy) ಎಂಬುದು ಈಗ ಬಹಿರಂಗ ಆಗಿದೆ. ಇಂದು (ಆ.23) ಧನಂಜಯ ಬರ್ತ್​ಡೇ. ಆ ಪ್ರಯುಕ್ತ ಅವರು ನಟಿಸುತ್ತಿರುವ ವಿವಿಧ ಸಿನಿಮಾ ತಂಡಗಳು ಹೊಸ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿವೆ. ಆ ಪೈಕಿ ಅಲ್ಲು ಅರ್ಜುನ್​ (Allu Arjun) ನಾಯಕತ್ವದ ‘ಪುಷ್ಪ’ ಸಿನಿಮಾದಲ್ಲಿನ ಧನಂಜಯ ಅವರ ಗೆಟಪ್​ ಗಮನ ಸೆಳೆಯುತ್ತಿದೆ.

ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ಅವರ ಬತ್ತಳಿಕೆಯಿಂದ ಬರುತ್ತಿರುವ ‘ಪುಷ್ಪ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಈ ನಿರೀಕ್ಷೆಗೆ ಪಾತ್ರವರ್ಗ ಕೂಡ ಕಾರಣ. ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಎಂಬ ಲಾರಿ ಡ್ರೈವರ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ವಿಲನ್ ಪಾತ್ರದಲ್ಲಿ ಧನಂಜಯ ಅವರು ಅಭಿನಯಿಸುತ್ತಿದ್ದಾರೆ. ಇದುವರೆಗೂ ಧನಂಜಯ ಅವರ ಲುಕ್​ ಬಹಿರಂಗ ಆಗಿರಲಿಲ್ಲ. ಪಾತ್ರದ ಹೆಸರನ್ನು ಕೂಡ ರಹಸ್ಯವಾಗಿ ಇಡಲಾಗಿತ್ತು. ಈಗ ಹೊಸ ಪೋಸ್ಟರ್​ ಮೂಲಕ ಅಭಿಮಾನಿಗಳಿಗೆ ಎಲ್ಲ ಮಾಹಿತಿಯನ್ನು ಬಿಟ್ಟುಕೊಟ್ಟಿದೆ ‘ಪುಷ್ಪ’ ಚಿತ್ರತಂಡ.

ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಮೈತ್ರೀ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಧನಂಜಯ ಅವರ ಫಸ್ಟ್​ಲುಕ್​ ಪೋಸ್ಟರ್​ ಅನ್ನು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಬಿಡುಗಡೆ ಮಾಡಿದೆ. ‘ನಮ್ಮ ಜಾಲಿ ರೆಡ್ಡಿ ಆಗಿರುವ ಧನಂಜಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಚಿತ್ರತಂಡದಿಂದ ವಿಶ್​ ಮಾಡಲಾಗಿದೆ.

ಕನ್ನಡದ ‘ಟಗರು’ ಸಿನಿಮಾದಲ್ಲಿ ‘ಡಾಲಿ’ ಎಂಬ ವಿಲನ್​ ಪಾತ್ರವನ್ನು ಮಾಡಿದ ಬಳಿಕ ಧನಂಜಯ ಅವರಿಗೆ ಅದೃಷ್ಟ ಖುಲಾಯಿಸಿತು. ಹೀರೋ-ವಿಲನ್​ ಎಂಬ ಬೇಧವನ್ನು ತೋರಿದೇ, ತಮ್ಮ ನಟನೆಗೆ ಸ್ಕೋಪ್​ ಇರುವಂತಹ ಎಲ್ಲ ಪಾತ್ರಗಳನ್ನೂ ಧನಂಜಯ ನಿಭಾಯಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಎಲ್ಲ ಭಾಷೆಗಳಿಂದಲೂ ಆಫರ್​ಗಳು ಬರುತ್ತಿವೆ. ಕನ್ನಡದಲ್ಲಿ ಮಾನ್ಸೂನ್​ ರಾಗ, ರತ್ನನ್​ ಪ್ರಪಂಚ, ಡಾಲಿ, ಬೈರಾಗಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಧನಂಜಯ ನಟಿಸುತ್ತಿದ್ದಾರೆ. ಬಹುನಿರೀಕ್ಷಿತ ‘ಪುಷ್ಪ’ ಚಿತ್ರ ಎರಡು ಪಾರ್ಟ್​ಗಳಲ್ಲಿ ತಯಾರಾಗುತ್ತಿದ್ದು, ಈ ವರ್ಷ ಡಿಸೆಂಬರ್​ಗೆ ಮೊದಲ ಪಾರ್ಟ್​ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ಧನಂಜಯ​ಗೆ ಜನ್ಮದಿನದ ಶುಭಾಶಯ ಕೋರಿದ ದುಲ್ಖರ್​ ಸಲ್ಮಾನ್​; ಎಂಪಿ ಜಯರಾಜ್​ ಲುಕ್​ ಅನಾವರಣ

Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Published On - 6:51 pm, Mon, 23 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್