AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​

ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ಅವರ ಬತ್ತಳಿಕೆಯಿಂದ ಬರುತ್ತಿರುವ ‘ಪುಷ್ಪ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಈ ನಿರೀಕ್ಷೆಗೆ ಪಾತ್ರವರ್ಗ ಕೂಡ ಕಾರಣ. ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಎಂಬ ಲಾರಿ ಡ್ರೈವರ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ.

​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​
​ಕನ್ನಡದ ಡಾಲಿ, ತೆಲುಗಿನಲ್ಲಿ ಜಾಲಿ; ಧನಂಜಯ ಹುಟ್ಟುಹಬ್ಬಕ್ಕೆ ‘ಪುಷ್ಪ’ ಚಿತ್ರತಂಡದಿಂದ ಫಸ್ಟ್​ಲುಕ್​ ರಿಲೀಸ್​
TV9 Web
| Edited By: |

Updated on:Apr 02, 2026 | 10:22 AM

Share

ಕನ್ನಡದ ಕಲಾವಿದ ಧನಂಜಯ (Daali Dhananjay) ಅವರು ಈಗ ಬಹುಭಾಷಾ ನಟ. ಸ್ಯಾಂಡಲ್​ವುಡ್​ನಲ್ಲಿ ಡಾಲಿ ಆಗಿ ಮಿಂಚಿದ ಅವರು ಈಗ ಟಾಲಿವುಡ್​ನಲ್ಲಿ ಜಾಲಿ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ, ‘ಪುಷ್ಪ’ (Pushpa) ಸಿನಿಮಾದಲ್ಲಿ ಅವರ ಪಾತ್ರದ ಹೆಸರು ಜಾಲಿ ರೆಡ್ಡಿ (Jolly Reddy) ಎಂಬುದು ಈಗ ಬಹಿರಂಗ ಆಗಿದೆ. ಇಂದು (ಆ.23) ಧನಂಜಯ ಬರ್ತ್​ಡೇ. ಆ ಪ್ರಯುಕ್ತ ಅವರು ನಟಿಸುತ್ತಿರುವ ವಿವಿಧ ಸಿನಿಮಾ ತಂಡಗಳು ಹೊಸ ಹೊಸ ಪೋಸ್ಟರ್​ಗಳನ್ನು ಬಿಡುಗಡೆ ಮಾಡಿವೆ. ಆ ಪೈಕಿ ಅಲ್ಲು ಅರ್ಜುನ್​ (Allu Arjun) ನಾಯಕತ್ವದ ‘ಪುಷ್ಪ’ ಸಿನಿಮಾದಲ್ಲಿನ ಧನಂಜಯ ಅವರ ಗೆಟಪ್​ ಗಮನ ಸೆಳೆಯುತ್ತಿದೆ.

ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ಅವರ ಬತ್ತಳಿಕೆಯಿಂದ ಬರುತ್ತಿರುವ ‘ಪುಷ್ಪ’ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಈ ನಿರೀಕ್ಷೆಗೆ ಪಾತ್ರವರ್ಗ ಕೂಡ ಕಾರಣ. ಅಲ್ಲು ಅರ್ಜುನ್​ ಅವರು ಪುಷ್ಪರಾಜ್​ ಎಂಬ ಲಾರಿ ಡ್ರೈವರ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ವಿಲನ್ ಪಾತ್ರದಲ್ಲಿ ಧನಂಜಯ ಅವರು ಅಭಿನಯಿಸುತ್ತಿದ್ದಾರೆ. ಇದುವರೆಗೂ ಧನಂಜಯ ಅವರ ಲುಕ್​ ಬಹಿರಂಗ ಆಗಿರಲಿಲ್ಲ. ಪಾತ್ರದ ಹೆಸರನ್ನು ಕೂಡ ರಹಸ್ಯವಾಗಿ ಇಡಲಾಗಿತ್ತು. ಈಗ ಹೊಸ ಪೋಸ್ಟರ್​ ಮೂಲಕ ಅಭಿಮಾನಿಗಳಿಗೆ ಎಲ್ಲ ಮಾಹಿತಿಯನ್ನು ಬಿಟ್ಟುಕೊಟ್ಟಿದೆ ‘ಪುಷ್ಪ’ ಚಿತ್ರತಂಡ.

ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಮೈತ್ರೀ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಧನಂಜಯ ಅವರ ಫಸ್ಟ್​ಲುಕ್​ ಪೋಸ್ಟರ್​ ಅನ್ನು ತನ್ನ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಬಿಡುಗಡೆ ಮಾಡಿದೆ. ‘ನಮ್ಮ ಜಾಲಿ ರೆಡ್ಡಿ ಆಗಿರುವ ಧನಂಜಯ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಚಿತ್ರತಂಡದಿಂದ ವಿಶ್​ ಮಾಡಲಾಗಿದೆ.

ಕನ್ನಡದ ‘ಟಗರು’ ಸಿನಿಮಾದಲ್ಲಿ ‘ಡಾಲಿ’ ಎಂಬ ವಿಲನ್​ ಪಾತ್ರವನ್ನು ಮಾಡಿದ ಬಳಿಕ ಧನಂಜಯ ಅವರಿಗೆ ಅದೃಷ್ಟ ಖುಲಾಯಿಸಿತು. ಹೀರೋ-ವಿಲನ್​ ಎಂಬ ಬೇಧವನ್ನು ತೋರಿದೇ, ತಮ್ಮ ನಟನೆಗೆ ಸ್ಕೋಪ್​ ಇರುವಂತಹ ಎಲ್ಲ ಪಾತ್ರಗಳನ್ನೂ ಧನಂಜಯ ನಿಭಾಯಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಎಲ್ಲ ಭಾಷೆಗಳಿಂದಲೂ ಆಫರ್​ಗಳು ಬರುತ್ತಿವೆ. ಕನ್ನಡದಲ್ಲಿ ಮಾನ್ಸೂನ್​ ರಾಗ, ರತ್ನನ್​ ಪ್ರಪಂಚ, ಡಾಲಿ, ಬೈರಾಗಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಧನಂಜಯ ನಟಿಸುತ್ತಿದ್ದಾರೆ. ಬಹುನಿರೀಕ್ಷಿತ ‘ಪುಷ್ಪ’ ಚಿತ್ರ ಎರಡು ಪಾರ್ಟ್​ಗಳಲ್ಲಿ ತಯಾರಾಗುತ್ತಿದ್ದು, ಈ ವರ್ಷ ಡಿಸೆಂಬರ್​ಗೆ ಮೊದಲ ಪಾರ್ಟ್​ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

Published On - 6:51 pm, Mon, 23 August 21

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ