AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಐಟಂ ಸಾಂಗ್​ನಲ್ಲಿ ಹಾಟ್ ಆಗಿ ಮಿಂಚಿದ ಸಮಂತಾ; ಇಲ್ಲಿದೆ ವಿಶೇಷ ಹಾಡು

ಸಮಂತಾ ನೀಲಿ ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಹಾಡಿನಲ್ಲಿ ಸಮಂತಾ ಅವರ ಕೆಲ ಫೋಟೋಗಳನ್ನು ಹಾಕಲಾಗಿದೆ. ಅವರ ಲುಕ್ ಮಾದಕವಾಗಿದೆ. ಈ ವಿಶೇಷ ಹಾಡು ಇಂದು ರಿಲೀಸ್​ ಆಗಿದೆ.

‘ಪುಷ್ಪ’ ಐಟಂ ಸಾಂಗ್​ನಲ್ಲಿ ಹಾಟ್ ಆಗಿ ಮಿಂಚಿದ ಸಮಂತಾ; ಇಲ್ಲಿದೆ ವಿಶೇಷ ಹಾಡು
ಸಮಂತಾ
TV9 Web
| Edited By: |

Updated on: Dec 10, 2021 | 8:21 PM

Share

ಸಮಂತಾ ಟಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್​ 2’ ತೆರೆಗೆ ಬಂದ ನಂತರದಲ್ಲಿ ಬಾಲಿವುಡ್​ನಿಂದಲೂ ಸಾಕಷ್ಟು ಆಫರ್​ಗಳು ಅವರನ್ನು ಅರಸಿ ಬರುತ್ತಿವೆ. ಈಗ ‘ಪುಷ್ಪ’ ಸಿನಿಮಾದ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡು ಇಂದು (ಡಿಸೆಂಬರ್ 10) ರಿಲೀಸ್​ ಆಗಿದೆ. ಸಮಂತಾ ಲುಕ್​ ವೈರಲ್​ ಆಗಿದೆ. ಅವರ ಹಾಟ್​ ಅವತಾರ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.

ಸಮಂತಾ ಅವರು ವಿಚ್ಛೇದನ ಪಡೆದ ಬಳಿಕ ಮತ್ತೆ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿರುವ ಅವರು ಸಿನಿಮಾಗಳ ಆಯ್ಕೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಐಟಂ ಸಾಂಗ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಸಂಭಾವನೆ ವಿಚಾರದ ಬಗ್ಗೆ ಚಿತ್ರತಂಡದಿಂದಾಗಲೀ ಸಮಂತಾ ಕಡೆಯಿಂದಾಗಿ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಅವರು ಪಡೆಯುತ್ತಾರೆ ಎನ್ನಲಾದ ಸಂಭಾವನೆ ಮೊತ್ತ ಕೇಳಿ ಎಲ್ಲರಿಗೂ ಅಚ್ಚರಿ ಆಗಿದೆ. ಈ ಐಟಂ ಸಾಂಗ್​ನಲ್ಲಿ ನಟಿಸಲು ಸಮಂತಾ ಬರೋಬ್ಬರಿ 1.5 ಕೋಟಿ ರೂಪಾಯಿ ಪಡೆದಿದ್ದಾರೆ ಎಂಬ ಸುದ್ದಿ ಹರಡಿದೆ. ಹೀಗಿರುವಾಗಲೇ ಈ ಹಾಡಿನ ಪೋಸ್ಟರ್​ ಒಂದನ್ನು ರಿಲೀಸ್​ ಮಾಡಲಾಗಿದೆ.

‘ಓ ಅಂತಾವ..’ ಸಾಂಗ್​ ರಿಲೀಸ್​ ಆಗಿದೆ. ಸಮಂತಾ ನೀಲಿ ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಹಾಡಿನಲ್ಲಿ ಸಮಂತಾ ಅವರ ಕೆಲ ಫೋಟೋಗಳನ್ನು ಹಾಕಲಾಗಿದೆ. ಅವರ ಲುಕ್ ಮಾದಕವಾಗಿದೆ. ಈ ವಿಶೇಷ ಹಾಡು ಇಂದು ರಿಲೀಸ್​ ಆಗಿದೆ. ಈ ಸಾಂಗ್​ ನೋಡಿ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ. ಫೋಟೋದಲ್ಲಿ ಅವರು ಇಷ್ಟು ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಅವರು ಹೆಜ್ಜೆ ಹಾಕಿರುವ ಸಂಪೂರ್ಣ ಹಾಡು ಇನ್ನು ಹೇಗೆ ಇರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಿದೆ.

ಇದನ್ನೂ ಓದಿ: ಸಮಂತಾ ವಾಟ್ಸಾಪ್​ ಸಂದೇಶದ ಸ್ಕ್ರೀನ್​ಶಾಟ್​ ಬಹಿರಂಗ; ಅರೆಬರೆ ಮುಚ್ಚಿಟ್ಟು ನಟಿ ಹೇಳಿದ್ದೇನು?

Filmfare OTT Awards 2021: ಫಿಲ್ಮ್​ಫೇರ್​ ಓಟಿಟಿ ಅವಾರ್ಡ್ಸ್​: ಪ್ರತಿಷ್ಠಿತ ಪ್ರಶಸ್ತಿ ಬಾಚಿಕೊಂಡು ಮಿಂಚಿದ ಸಮಂತಾ, ಪ್ರತೀಕ್​ ಗಾಂಧಿ

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು