AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಪೂಜೆಯಲ್ಲೂ ‘ಪುಷ್ಪ’ ಚಿತ್ರದ ‘ಸಾಮಿ ಸಾಮಿ’ ಹಾಡು! ಇಲ್ಲಿದೆ ವೈರಲ್​ ವಿಡಿಯೋ

ಕೇರಳದ ಒಂದು ದೇವಸ್ಥಾನದಲ್ಲಿ ವಾರ್ಷಿಕ ಪೂಜೆಯ ಸಂದರ್ಭದಲ್ಲಿ ಅಲ್ಲಿನ ವಾದ್ಯದವರು ‘ಸಾಮಿ ಸಾಮಿ..’ ಹಾಡಿನ ಟ್ಯೂನ್​ ನುಡಿಸಿದ್ದಾರೆ. ಆ ವಿಡಿಯೋ ವೈರಲ್​ ಆಗಿದೆ.

ದೇವಸ್ಥಾನದ ಪೂಜೆಯಲ್ಲೂ ‘ಪುಷ್ಪ’ ಚಿತ್ರದ ‘ಸಾಮಿ ಸಾಮಿ’ ಹಾಡು! ಇಲ್ಲಿದೆ ವೈರಲ್​ ವಿಡಿಯೋ
ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Jan 10, 2022 | 11:46 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಚಾರ್ಮ್​ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ‘ಪುಷ್ಪ’  (Pushpa Movie) ಸಿನಿಮಾದಿಂದ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿದೆ. ಈ ಚಿತ್ರದಲ್ಲಿ ಅವರ ಶ್ರೀವಲ್ಲಿ ಎಂಬ ಪಾತ್ರ ಮಾಡಿದ್ದಾರೆ. ಹಾಡುಗಳಲ್ಲಿ (Pushpa Movie Songs) ಅವರು ಹೈಲೈಟ್​ ಆಗಿದ್ದಾರೆ. ಅಲ್ಲು ಅರ್ಜುನ್​ (Allu Arjun) ಜೊತೆ ಅವರು ಹೆಜ್ಜೆ ಹಾಕಿರುವ ‘ಸಾಮಿ ಸಾಮಿ..’ ಹಾಡು ಸಖತ್​ ಫೇಮಸ್​ ಆಗಿದೆ. ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿಯಲ್ಲಿ ಮೂಡಿಬಂದ ಈಗ ಹಾಡು ಸೂಪರ್​ ಹಿಟ್​ ಆಗಿದೆ. ಎಷ್ಟರಮಟ್ಟಿಗೆಂದರೆ, ದೇವಸ್ಥಾನದ ಪೂಜೆ ಸಮಯದಲ್ಲೂ ‘ಸಾಮಿ ಸಾಮಿ..’ ಗೀತೆ (Sami Sami Song) ಕೇಳಿಸುತ್ತಿದೆ! ಇದಕ್ಕೆ ಸಾಕ್ಷಿಯಾಗಿ ಒಂದು ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ​ ಹರಿದಾಡುತ್ತಿದೆ. ಅದನ್ನು ಕಂಡು ಎಲ್ಲರೂ ಅಚ್ಚರಿಪಡುತ್ತಿದ್ದಾರೆ.

ದೇವಸ್ಥಾನದ ಉತ್ಸವಗಳಲ್ಲಿ ಅನೇಕ ಬಗೆಯ ವಾದ್ಯಗಳನ್ನು ನುಡಿಸುವುದು ವಾಡಿಕೆ. ಕೇರಳದ ಒಂದು ದೇವಸ್ಥಾನದಲ್ಲಿ ವಾರ್ಷಿಕ ಪೂಜೆಯ ಸಂದರ್ಭದಲ್ಲಿ ಅಲ್ಲಿನ ವಾದ್ಯದವರು ‘ಸಾಮಿ ಸಾಮಿ..’ ಹಾಡಿನ ಟ್ಯೂನ್​ ನುಡಿಸಿದ್ದಾರೆ. ಆ ವಿಡಿಯೋವನ್ನು ಅನೇಕರು ಸೋಶಿಯಲ್​ ಮಿಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ. ‘ನಿರೀಕ್ಷೆಗೂ ಮೀರಿ ಸಾಮಿ ಸಾಮಿ ಹಾಡು ಹಿಟ್​ ಆಗಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ’ ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ.

‘ಪುಷ್ಪ’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿವೆ. ಈ ಹಿಂದೆ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ‘ಊ ಅಂಟಾವಾ ಮಾವ ಊಊ ಅಂಟಾವಾ ಮಾವ..’ ಹಾಡಿನ ಬಗ್ಗೆ ಮಾತನಾಡುವಾಗ ದೇವಿಶ್ರೀ ಪ್ರಸಾದ್​ ಒಂದು ಹೇಳಿಕೆ ನೀಡಿದ್ದರು. ‘ಕೇಳುವವರಿಗೆ ಇದು ಐಟಂ ಸಾಂಗ್​ ಆಗಿರಬಹುದು. ಆದರೆ ನನ್ನ ಪಾಲಿಗೆ ಈ ಹಾಡುಗಳೆಲ್ಲವೂ ಭಕ್ತಿಗೀತೆಗೆ ಸಮ’ ಎಂದು ಅವರು ಹೇಳಿದ್ದು ವಿವಾದಕ್ಕೆ ಕಾರಣ ಆಗಿತ್ತು. ಆದರೆ ಅವರ ಸಂಗೀತ ಸಂಯೋಜನೆಯಲ್ಲಿ ಬಂದ ‘ಸಾಮಿ ಸಾಮಿ..’ ಹಾಡು ಈಗ ದೇವಸ್ಥಾನದಲ್ಲಿ ಮೊಳಗುತ್ತಿರುವುದು ಕಂಡು ಎಲ್ಲರೂ ಅಚ್ಚರಿಪಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ನಟನೆಯ ಪುಷ್ಪ’ ಸಿನಿಮಾ ವಿಶ್ವಾದ್ಯಂತ ‘300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದೆ. ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದಾರೆ. ಈಗ ಅಮೇಜಾನ್​ ಪ್ರೈಮ್​ ಮೂಲಕ ಸಿನಿಮಾ ಲಭ್ಯವಾಗಿದೆ. ಮೊದಲ ಪಾರ್ಟ್​ ಸೂಪರ್​ ಹಿಟ್​ ಆಗಿರುವುದರಿಂದ ಎರಡನೇ ಪಾರ್ಟ್​ಗಾಗಿ ಅಭಿಮಾನಿಗಳು ಕಾಯುವಂತಾಗಿದೆ.

ಇದನ್ನೂ ಓದಿ:

‘ಪುಷ್ಪ’ ಗೆದ್ದ ಬಳಿಕ ಸಂಭಾವನೆ ಹೆಚ್ಚಿಸಿಕೊಂಡ ರಶ್ಮಿಕಾ; ಮುಂದಿನ ಚಿತ್ರಕ್ಕೆ ಈ ನಟಿ ಪಡೆಯುವ ಸಂಬಳ ಎಷ್ಟು?

‘ಹು ಅಂತೀಯಾ ಮಾವ’ ಹಾಡಿನ ಮೇಲೆ ಕಾಪಿ ಆರೋಪ; ವೈರಲ್​ ಆಗುತ್ತಿದೆ ಹೋಲಿಕೆಯ ವಿಡಿಯೋ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ