AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ರೀತಿ ‘ತಗ್ಗೆದೆಲೇ’ ಎನ್ನುತ್ತಿರುವ ‘ಪುಷ್ಪ’ ಗಣಪ: ಕೆಲವರಿಂದ ಕೇಳಿಬಂತು ಟೀಕೆ

Ganesh Chaturthi 2022: ‘ತಗ್ಗೆದೆಲೇ..’ ರೀತಿಯ ಗಣಪನ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಹಲವು ಬಗೆಯ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ಇದನ್ನು ವಿರೋಧಿಸಿದ್ದಾರೆ.

ಅಲ್ಲು ಅರ್ಜುನ್​ ರೀತಿ ‘ತಗ್ಗೆದೆಲೇ’ ಎನ್ನುತ್ತಿರುವ ‘ಪುಷ್ಪ’ ಗಣಪ: ಕೆಲವರಿಂದ ಕೇಳಿಬಂತು ಟೀಕೆ
‘ತಗ್ಗೆದೆಲೇ..’ ಗಣಪ, ಅಲ್ಲು ಅರ್ಜುನ್
TV9 Web
| Updated By: ಮದನ್​ ಕುಮಾರ್​|

Updated on:Aug 31, 2022 | 9:58 AM

Share

ವಿಘ್ನ ವಿನಾಶಕ ಗಣೇಶನಿಗೆ ಅಸಂಖ್ಯಾತ ರೂಪ. ಎಲ್ಲ ರೀತಿಯಲ್ಲೂ ಗಣಪನ (Lord Ganesha) ಮೂರ್ತಿ ಸಿದ್ಧಗೊಳ್ಳುತ್ತದೆ. ಪ್ರತಿ ವರ್ಷ ಗಣೇಶ ಚತುರ್ಥಿ ಸಂದರ್ಭದಲ್ಲಿ ವಿಧವಿಧವಾದ ಗಣಪನ ವಿಗ್ರಹಗಳ ರಾರಾಜಿಸುತ್ತವೆ. ಸಿನಿಮಾಗಳ ಶೈಲಿಯಲ್ಲೂ ಗಣೇಶನ ಮೂರ್ತಿಯನ್ನು ತಯಾರಿಸಲಾಗುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಪುನೀತ್​ ರಾಜ್​ಕುಮಾರ್​ ಅವರ ರೀತಿಯಲ್ಲಿ ವಿನಾಯಕನ ಮೂರ್ತಿ ಸಿದ್ಧವಾದ ಬೆನ್ನಲ್ಲೇ ‘ಪುಷ್ಪ’ (Pushpa Movie) ಸಿನಿಮಾದ ಸ್ಟೈಲ್​ನಲ್ಲೂ ಗಣಪನನ್ನು ತಯಾರಿಸಲಾಗಿದೆ. ಅಲ್ಲು ಅರ್ಜುನ್​ (Allu Arjun) ಅವರು ‘ತಗ್ಗೆದೆಲೇ..’ ಎಂದು ಡೈಲಾಗ್​ ಹೊಡೆದ ರೀತಿಯಲ್ಲೇ ಈ ಗಣೇಶ ಮೂಡಿಬಂದಿದ್ದಾನೆ. ಆ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಲ್ಲು ಅರ್ಜುನ್​ ಅಭಿಮಾನಿಗಳು ಇದನ್ನು ನೋಡಿ ಖುಷಿ ಪಟ್ಟಿದ್ದಾರೆ. ಆದರೆ ಒಂದು ವರ್ಗದ ಜನರಿಂದ ಟೀಕೆ ವ್ಯಕ್ತವಾಗಿದೆ.

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿದ ಈ ಚಿತ್ರವನ್ನು ಹಿಂದಿ ಪ್ರೇಕ್ಷಕರು ಕೂಡ ಮೆಚ್ಚಿಕೊಂಡರು. ಅದರ ಕ್ರೇಜ್​ ಇನ್ನೂ ನಿಂತಿಲ್ಲ. ಗಣಪತಿ ಹಬ್ಬದ ಸಂದರ್ಭದಲ್ಲೂ ‘ಪುಷ್ಪ’ ಚಿತ್ರದ ಛಾಯೆ ಪಸರಿಸಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಮಾಡಿದ ಪುಷ್ಪ ರಾಜ್​ ಎಂಬ ಪಾತ್ರದ ರೀತಿಯಲ್ಲಿ ಗಣೇಶನ ಮೂರ್ತಿ ತಯಾರಿಸಿ, ಪೂಜೆ ಮಾಡಲಾಗುತ್ತಿದೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರು ‘ತಗ್ಗೆದೆಲೇ..’ ಎಂದು ಡೈಲಾಗ್​ ಹೊಡಿದಿದ್ದು ಸಖತ್​ ಫೇಮಸ್​ ಆಗಿತ್ತು. ತೆಲುಗು ಮಂದಿ ಮಾತ್ರವಲ್ಲದೇ ವಿದೇಶದ ಕೆಲವು ಸೆಲೆಬ್ರಿಟಿಗಳು ಕೂಡ ಅದೇ ರೀತಿ ರೀಲ್ಸ್​ ಮಾಡಿ ಗಮನ ಸೆಳೆದಿದ್ದರು. ಅನೇಕ ಸಂದರ್ಭದಲ್ಲಿ ಆ ಶೈಲಿಯಲ್ಲಿ ಸೆಲೆಬ್ರಿಟಿಗಳು ಪೋಸ್​ ನೀಡಿದ್ದುಂಟು. ಈಗ ಗಣಪನ ಮೂರ್ತಿಯನ್ನು ಕೂಡ ‘ತಗ್ಗೆದಲೇ..’ ಶೈಲಿಯಲ್ಲಿ ತಯಾರಿಸಲಾಗಿದೆ.

ಇದನ್ನೂ ಓದಿ
Image
Ganesh Chaturthi: ಮುಖ ಮುಚ್ಕೊಂಡು ಗಣೇಶನ ಹಬ್ಬ ಮಾಡುತ್ತಿರುವ ರಾಜ್​ ಕುಂದ್ರಾ; ಕುಂಟುತ್ತಿರುವ ಶಿಲ್ಪಾ ಶೆಟ್ಟಿ
Image
Puneeth Rajkumar: ಪುನೀತ್ ರಾಜ್​ಕುಮಾರ್ ಹೆಗಲಮೇಲೆ ಕೈ ಹಾಕಿ ನಿಂತ ಗಣಪ; ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ
Image
Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​

ಈ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಹಲವು ಬಗೆಯ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ಇದನ್ನು ವಿರೋಧಿಸಿದ್ದಾರೆ. ‘ಓರ್ವ ನಟನ ಮೇಲೆ ಅಭಿಮಾನ ಇರುವುದು ಸಹಜ. ಆದರೆ ಗಣೇಶನಿಗೆ ಈ ರೂಪ ನೀಡಿರುವುದು ಸರಿಯಲ್ಲ. ನೀವು ಗಣಪನನ್ನು ಪೂಜಿಸುತ್ತಿದ್ದೀರೋ ಅಥವಾ ಅಣಕಿಸುತ್ತಿದ್ದೀರೋ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

2021ರ ಡಿಸೆಂಬರ್​ 17ರಂದು ‘ಪುಷ್ಪ’ ಸಿನಿಮಾ ತೆರೆಕಂಡಿತು. ಸುಕುಮಾರ್​ ನಿರ್ದೇಶನ ಮಾಡಿದ ಆ ಚಿತ್ರಕ್ಕೆ ಈಗ ಎರಡನೇ ಪಾರ್ಟ್​ ಸಿದ್ಧವಾಗುತ್ತಿದೆ. ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಇತ್ತೀಚೆಗೆಷ್ಟೇ ಆರಂಭ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:58 am, Wed, 31 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!