AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ ರೀತಿ ‘ತಗ್ಗೆದೆಲೇ’ ಎನ್ನುತ್ತಿರುವ ‘ಪುಷ್ಪ’ ಗಣಪ: ಕೆಲವರಿಂದ ಕೇಳಿಬಂತು ಟೀಕೆ

Ganesh Chaturthi 2022: ‘ತಗ್ಗೆದೆಲೇ..’ ರೀತಿಯ ಗಣಪನ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಹಲವು ಬಗೆಯ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ಇದನ್ನು ವಿರೋಧಿಸಿದ್ದಾರೆ.

ಅಲ್ಲು ಅರ್ಜುನ್​ ರೀತಿ ‘ತಗ್ಗೆದೆಲೇ’ ಎನ್ನುತ್ತಿರುವ ‘ಪುಷ್ಪ’ ಗಣಪ: ಕೆಲವರಿಂದ ಕೇಳಿಬಂತು ಟೀಕೆ
‘ತಗ್ಗೆದೆಲೇ..’ ಗಣಪ, ಅಲ್ಲು ಅರ್ಜುನ್
TV9 Web
| Edited By: |

Updated on:Aug 31, 2022 | 9:58 AM

Share

ವಿಘ್ನ ವಿನಾಶಕ ಗಣೇಶನಿಗೆ ಅಸಂಖ್ಯಾತ ರೂಪ. ಎಲ್ಲ ರೀತಿಯಲ್ಲೂ ಗಣಪನ (Lord Ganesha) ಮೂರ್ತಿ ಸಿದ್ಧಗೊಳ್ಳುತ್ತದೆ. ಪ್ರತಿ ವರ್ಷ ಗಣೇಶ ಚತುರ್ಥಿ ಸಂದರ್ಭದಲ್ಲಿ ವಿಧವಿಧವಾದ ಗಣಪನ ವಿಗ್ರಹಗಳ ರಾರಾಜಿಸುತ್ತವೆ. ಸಿನಿಮಾಗಳ ಶೈಲಿಯಲ್ಲೂ ಗಣೇಶನ ಮೂರ್ತಿಯನ್ನು ತಯಾರಿಸಲಾಗುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಪುನೀತ್​ ರಾಜ್​ಕುಮಾರ್​ ಅವರ ರೀತಿಯಲ್ಲಿ ವಿನಾಯಕನ ಮೂರ್ತಿ ಸಿದ್ಧವಾದ ಬೆನ್ನಲ್ಲೇ ‘ಪುಷ್ಪ’ (Pushpa Movie) ಸಿನಿಮಾದ ಸ್ಟೈಲ್​ನಲ್ಲೂ ಗಣಪನನ್ನು ತಯಾರಿಸಲಾಗಿದೆ. ಅಲ್ಲು ಅರ್ಜುನ್​ (Allu Arjun) ಅವರು ‘ತಗ್ಗೆದೆಲೇ..’ ಎಂದು ಡೈಲಾಗ್​ ಹೊಡೆದ ರೀತಿಯಲ್ಲೇ ಈ ಗಣೇಶ ಮೂಡಿಬಂದಿದ್ದಾನೆ. ಆ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಅಲ್ಲು ಅರ್ಜುನ್​ ಅಭಿಮಾನಿಗಳು ಇದನ್ನು ನೋಡಿ ಖುಷಿ ಪಟ್ಟಿದ್ದಾರೆ. ಆದರೆ ಒಂದು ವರ್ಗದ ಜನರಿಂದ ಟೀಕೆ ವ್ಯಕ್ತವಾಗಿದೆ.

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ಮಾಡಿದ ಮೋಡಿ ಅಷ್ಟಿಷ್ಟಲ್ಲ. ಬಾಕ್ಸ್​ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಕಮಾಯಿ ಮಾಡಿದ ಈ ಚಿತ್ರವನ್ನು ಹಿಂದಿ ಪ್ರೇಕ್ಷಕರು ಕೂಡ ಮೆಚ್ಚಿಕೊಂಡರು. ಅದರ ಕ್ರೇಜ್​ ಇನ್ನೂ ನಿಂತಿಲ್ಲ. ಗಣಪತಿ ಹಬ್ಬದ ಸಂದರ್ಭದಲ್ಲೂ ‘ಪುಷ್ಪ’ ಚಿತ್ರದ ಛಾಯೆ ಪಸರಿಸಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಮಾಡಿದ ಪುಷ್ಪ ರಾಜ್​ ಎಂಬ ಪಾತ್ರದ ರೀತಿಯಲ್ಲಿ ಗಣೇಶನ ಮೂರ್ತಿ ತಯಾರಿಸಿ, ಪೂಜೆ ಮಾಡಲಾಗುತ್ತಿದೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಅವರು ‘ತಗ್ಗೆದೆಲೇ..’ ಎಂದು ಡೈಲಾಗ್​ ಹೊಡಿದಿದ್ದು ಸಖತ್​ ಫೇಮಸ್​ ಆಗಿತ್ತು. ತೆಲುಗು ಮಂದಿ ಮಾತ್ರವಲ್ಲದೇ ವಿದೇಶದ ಕೆಲವು ಸೆಲೆಬ್ರಿಟಿಗಳು ಕೂಡ ಅದೇ ರೀತಿ ರೀಲ್ಸ್​ ಮಾಡಿ ಗಮನ ಸೆಳೆದಿದ್ದರು. ಅನೇಕ ಸಂದರ್ಭದಲ್ಲಿ ಆ ಶೈಲಿಯಲ್ಲಿ ಸೆಲೆಬ್ರಿಟಿಗಳು ಪೋಸ್​ ನೀಡಿದ್ದುಂಟು. ಈಗ ಗಣಪನ ಮೂರ್ತಿಯನ್ನು ಕೂಡ ‘ತಗ್ಗೆದಲೇ..’ ಶೈಲಿಯಲ್ಲಿ ತಯಾರಿಸಲಾಗಿದೆ.

ಇದನ್ನೂ ಓದಿ
Image
Ganesh Chaturthi: ಮುಖ ಮುಚ್ಕೊಂಡು ಗಣೇಶನ ಹಬ್ಬ ಮಾಡುತ್ತಿರುವ ರಾಜ್​ ಕುಂದ್ರಾ; ಕುಂಟುತ್ತಿರುವ ಶಿಲ್ಪಾ ಶೆಟ್ಟಿ
Image
Puneeth Rajkumar: ಪುನೀತ್ ರಾಜ್​ಕುಮಾರ್ ಹೆಗಲಮೇಲೆ ಕೈ ಹಾಕಿ ನಿಂತ ಗಣಪ; ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ
Image
Puneeth Rajkumar: ಕಲಾವಿದನ ಕಲ್ಪನೆಯಲ್ಲಿ ಪುನೀತ್​-ಗಣಪ; ‘ನಮ್ಮ ಪಾಲಿಗೆ ದೇವರು ಇಲ್ಲ’ ಎಂದ ಫ್ಯಾನ್ಸ್​

ಈ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಹಲವು ಬಗೆಯ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ಇದನ್ನು ವಿರೋಧಿಸಿದ್ದಾರೆ. ‘ಓರ್ವ ನಟನ ಮೇಲೆ ಅಭಿಮಾನ ಇರುವುದು ಸಹಜ. ಆದರೆ ಗಣೇಶನಿಗೆ ಈ ರೂಪ ನೀಡಿರುವುದು ಸರಿಯಲ್ಲ. ನೀವು ಗಣಪನನ್ನು ಪೂಜಿಸುತ್ತಿದ್ದೀರೋ ಅಥವಾ ಅಣಕಿಸುತ್ತಿದ್ದೀರೋ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

2021ರ ಡಿಸೆಂಬರ್​ 17ರಂದು ‘ಪುಷ್ಪ’ ಸಿನಿಮಾ ತೆರೆಕಂಡಿತು. ಸುಕುಮಾರ್​ ನಿರ್ದೇಶನ ಮಾಡಿದ ಆ ಚಿತ್ರಕ್ಕೆ ಈಗ ಎರಡನೇ ಪಾರ್ಟ್​ ಸಿದ್ಧವಾಗುತ್ತಿದೆ. ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಇತ್ತೀಚೆಗೆಷ್ಟೇ ಆರಂಭ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:58 am, Wed, 31 August 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ