AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa Collection: ವಿಶ್ವ ಮಟ್ಟದಲ್ಲಿ ಎರಡು ದಿನಕ್ಕೆ 116 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಪುಷ್ಪ’

‘ಪುಷ್ಪ’ ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಏಕಕಾಲಕ್ಕೆ ರಿಲೀಸ್​ ಆಗಿದೆ. ಅಮೆರಿಕ ಸೇರಿ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ಹೆಚ್ಚು ಶೋ ಪ್ರದರ್ಶನ ಕಂಡಿದೆ. ಹೀಗಾಗಿ, ಮೊದಲ ದಿನ ಈ ಸಿನಿಮಾ 71 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿತ್ತು.

Pushpa Collection: ವಿಶ್ವ ಮಟ್ಟದಲ್ಲಿ ಎರಡು ದಿನಕ್ಕೆ 116 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ‘ಪುಷ್ಪ’
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 19, 2021 | 2:43 PM

Share

ಡಿಸೆಂಬರ್​ 17ರಂದು ತೆರೆಗೆ ಬಂದ ‘ಪುಷ್ಪ’ ಸಿನಿಮಾ (Pushpa Movie) ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಆದಾಗ್ಯೂ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರದ ಎದುರು ಭಾರತದ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್​ ಆಗದ ಕಾರಣ ಅಲ್ಲು ಅರ್ಜುನ್​ ಚಿತ್ರಕ್ಕೆ ಪ್ಲಸ್​ ಆಗಿದೆ. ಬಾಕ್ಸ್​ ಆಫೀಸ್​ ಕಲೆಕ್ಷನ್ (Pushpa Movie Box Office Collection) ವಿಚಾರದಲ್ಲಿ ‘ಪುಷ್ಪ’ ಗೆದ್ದಿದೆ . ಪೈರಸಿ ಕಾಟದ ನಡುವೆಯೂ ಪುಷ್ಪ ಒಳ್ಳೆಯ ಗಳಿಕೆ ಮಾಡುತ್ತಿದೆ. ಇದು ಅವರ ಅಭಿಮಾನಿಗಳಿಗೆ ಹಾಗೂ ‘ಪುಷ್ಪ’ ತಂಡಕ್ಕೆ ಖುಷಿ ನೀಡಿದೆ.

‘ಪುಷ್ಪ’ ಭಾರತ ಮಾತ್ರವಲ್ಲದೆ, ವಿದೇಶದಲ್ಲೂ ಏಕಕಾಲಕ್ಕೆ ರಿಲೀಸ್​ ಆಗಿದೆ. ಅಮೆರಿಕ ಸೇರಿ ಅನೇಕ ರಾಷ್ಟ್ರಗಳಲ್ಲಿ ಈ ಸಿನಿಮಾ ಹೆಚ್ಚು ಶೋ ಪ್ರದರ್ಶನ ಕಂಡಿದೆ. ಹೀಗಾಗಿ, ಮೊದಲ ದಿನ ಈ ಸಿನಿಮಾ 71 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿತ್ತು. ಎರಡನೇ ದಿನವೂ ‘ಪುಷ್ಪ’ ಉತ್ತಮ ಗಳಿಕೆ ಮಾಡಿದೆ. ಎರಡು ದಿನಕ್ಕೆ ಈ ಸಿನಿಮಾ 116 ಕೋಟಿ ರೂಪಾಯಿ ಕಮಾಯಿ ಮಾಡಿದೆ ಎಂದು ವರದಿ ಆಗಿದೆ.

‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಪಕ್ಕಾ ಹಳ್ಳಿ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ರಕ್ತ ಚಂದನದ ಕಳ್ಳ ಸಾಗಾಣಿಕೆಯ ಬಗ್ಗೆ ಹೇಳಲಾಗಿದೆ. ಅಲ್ಲು ಅರ್ಜುನ್ ಲುಕ್​ ಬಗ್ಗೆ, ಸಿನಿಮಾ ಮೇಕಿಂಗ್​ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಸಿನಿಮಾದ ಅವಧಿ ದೀರ್ಘ ಎನಿಸುತ್ತದೆ ಎಂದು ಚಿತ್ರದ ಬಗ್ಗೆ ನೆಗೆಟಿವ್​ ಮಾತನಾಡಿದವರೇ ಹೆಚ್ಚು. ಆದಾಗ್ಯೂ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದೆ.

ಈ ಮೊದಲು ‘ಪುಷ್ಪ’ ಬಗ್ಗೆ ಮಾತನಾಡಿದ್ದ ‘ಉಪ್ಪೇನಾ’ ನಿರ್ದೇಶಕ ಬುಚಿ ಬಾಬು, ‘ನಾನು ಸಿನಿಮಾದ ಮೊದಲ ಭಾಗವನ್ನು ವೀಕ್ಷಣೆ ಮಾಡಿದ್ದೇನೆ. ಈ ಚಿತ್ರ 10 ಕೆಜಿಎಫ್​ಗೆ ಸಮ. ಸಿನಿಮಾದಲ್ಲಿ ಬರುವ ಪಾತ್ರಗಳು ತುಂಬಾನೇ ಅದ್ಭುತವಾಗಿ ಮೂಡಿ ಬಂದಿವೆ. ನಾನು ಇದನ್ನು ಅತಿಶಯೋಕ್ತಿಯಾಗಿ ಹೇಳುತ್ತಿಲ್ಲ. ಸಿನಿಮಾ ನೋಡಿದ ಮೇಲೆ ನಿಮಗೇ ತಿಳಿಯಲಿದೆ’ ಎಂದಿದ್ದರು. ಈಗ ಚಿತ್ರ ರಿಲೀಸ್​ ಆಗಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಕನ್ನಡಿಗರು ಹೇಳುತ್ತಿದ್ದಾರೆ.

ಇದನ್ನೂ ಓದಿ: ‘ನಿಮ್ಮ ಬುದ್ಧಿ ಶುದ್ಧವಿಲ್ಲ’ ಎನಿಸಿಕೊಂಡ್ರೂ ಕೇಕೆ ಹಾಕಿ ಕುಣಿದ ಗಂಡಸರನ್ನು ನೋಡಿ ಸಮಂತಾ ಹೇಳಿದ್ದೇನು?

‘ಪುಷ್ಪ’ ಸಿನಿಮಾದ ಐಟಂ ಸಾಂಗ್​ ಹಾಡಿದ್ದು ‘ಮಂಗ್ಲಿ’ ಸಹೋದರಿ; ಹಿಟ್​ ಆಯ್ತು ಹಾಡು

Published On - 2:40 pm, Sun, 19 December 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ