AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರಕ್ಕೆ ಮತ್ತೆ ಅಡ್ಡಿ, ಚಿತ್ರತಂಡದಲ್ಲಿ ಕೆಲವರಿಗೆ ಕೊರೊನಾ ಸೋಂಕು?

ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಲಾಕ್‌ಡೌನ್ ನಂತ್ರ ಪುಷ್ಪಾ ಸಿನಿಮಾಗಾಗಿ ಮೇಕಪ್ ಹಾಕಿ ಮತ್ತೆ ಆ್ಯಕ್ಟ್ ಮಾಡ್ತಿದ್ದಾರೆ. ಕೆಲವು ತಿಂಗಳು ಎಲ್ಲದಕ್ಕೂ ಬ್ರೇಕ್ ಹಾಕಿದ್ದ ಚಿತ್ರತಂಡ ಈಗ ಭರದಿಂದ ಶೂಟಿಂಗ್ ಶುರು ಮಾಡಿತ್ತು. ಆದ್ರೆ ಸದ್ಯ ಪುಷ್ಪ ಚಿತ್ರತಂಡದ ಶೂಟಿಂಗ್‌ಗೆ ಮಹಾಮಾರಿ ಬ್ರೇಕ್ ಹಾಕಿದೆಯಂತೆ.

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರಕ್ಕೆ ಮತ್ತೆ ಅಡ್ಡಿ, ಚಿತ್ರತಂಡದಲ್ಲಿ ಕೆಲವರಿಗೆ ಕೊರೊನಾ ಸೋಂಕು?
ಅಲ್ಲು ಅರ್ಜುನ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 04, 2020 | 7:08 AM

Share

ಲಾಕ್‌ಡೌನ್‌ ನಂತ್ರ ಸ್ಟಾರ್‌ಗಳು ಮೈ ಕೊಡವಿ ಮೇಕಪ್ ಹಾಕಿ ಅರ್ಧಕ್ಕೆ ನಿಂತಿದ್ದ ಸಿನಿಮಾಗಳಿಗೆ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ನವೆಂಬರ್‌ ಮೊದಲ ವಾರದಿಂದ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌ ಕೂಡ ಮೇಕಪ್ ಹಾಕಿ ಪುಷ್ಪ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಚಿತ್ರತಂಡ ಕೂಡ ರಾಜಮಂಡ್ರಿ ಪ್ರದೇಶದಲ್ಲಿ ಶೂಟಿಂಗ್‌ ಮಾಡ್ತಿತ್ತು.

ಅಂದಹಾಗೆ ಸುಕುಮಾರ್‌ ಆ್ಯಕ್ಷನ್‌ ಕಟ್ ಹೇಳ್ತಿರೋ ಪುಷ್ಪ ಚಿತ್ರಕ್ಕೆ ಒಂದೊಂದೇ ಘಟನೆ ತಲೆ ಬಿಸಿ ಮಾಡ್ತಿದೆ. ಈಗಾಗಲೇ ಅಲ್ಲು ಅರ್ಜುನ್‌ ಶೂಟಿಂಗ್‌ನಲ್ಲಿ ಭಾಗಿಯಾಗಿರೋ ವೇಳೆ ಅಲ್ಲು ಅರ್ಜುನ್‌ ರಗಡ್‌ ಲುಕ್‌ ಫೋಟೋವೊಂದು ರಿಲೀಸ್ ಆಗಿದ್ದಕ್ಕೆ ಚಿತ್ರತಂಡ ಬೇಸರ ವ್ಯಕ್ತಪಡಿಸಿತ್ತು. ಈ ಘಟನೆ ನಂತ್ರ ಕೆಲವು ಬಂದೋಬಸ್ತ್‌ ಕ್ರಮಕೈಗೊಂಡು ಶೂಟಿಂಗ್‌ ಮುಂದುವರೆಸಿದ್ದ ಚಿತ್ರತಂಡ, ಈಗ ಬ್ರೇಕ್‌ ತೆಗೆದುಕೊಂಡು ಹೈದರಾಬಾದ್‌ಗೆ ವಾಪಸ್ಸಾಗಿದ್ಯಂತೆ.

ಚಿತ್ರೀಕರಣದ ಯೂನಿಟ್‌ನಲ್ಲಿನ ಕೆಲವರಿಗೆ ಕೊರೊನಾ: ಸದ್ಯ ಚಿತ್ರತಂಡ ರಾಜಮಂಡ್ರಿಯಲ್ಲಿ ಶೂಟಿಂಗ್‌ ಪ್ಯಾಕಪ್‌ ಮಾಡಿ ವಾಪಸ್ಸಾಗೋಕೆ ಕಾರಣ, ಚಿತ್ರೀಕರಣದ ಯೂನಿಟ್‌ನಲ್ಲಿನ ಕೆಲವರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ ಅನ್ನೋ ಮಾಹಿತಿ ಹರಿದಾಡ್ತಿದೆ. ಹೀಗಾಗಿ ಶೂಟಿಂಗ್‌ನಲ್ಲಿದ್ದ ಅದ್ಯಾರಿಗೆ ಕೊರೊನಾ ಬಂದಿದೆ. ಇದ್ದಕ್ಕಿದ್ದಂತೆ ಶೂಟಿಂಗ್‌ಗೆ ಬ್ರೇಕ್‌ ಹಾಕೋಕೆ ಕಾರಣ ಆಗಿರೋದು ಕೊರೊನಾ ಅನ್ನೋದು ನಿಜವಾ ಅನ್ನೋದನ್ನ ಚಿತ್ರತಂಡವೇ ಬಹಿರಂಗಪಡಿಸಬೇಕಿದೆ.

ಒಟ್ನಲ್ಲಿ ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್‌ ಹಾಗೂ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡು ವಿಭಿನ್ನ ಶೇಡ್‌ನಲ್ಲಿ ಕಮಾಲ್‌ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಪದೇಪದೆ ಒಂದಲ್ಲಾ ಒಂದು ಕಾರಣದಿಂದ ಶೂಟಿಂಗ್‌ಗೆ ಬ್ರೇಕ್‌ ಬಿದ್ರೆ ಅಂದುಕೊಂಡಿದ್ದಕ್ಕಿಂತ ಇನ್ನೂ ಕೆಲ ದಿನ ಅಲ್ಲು ಅಭಿಮಾನಿಗಳು ಕಾಯಲೇಬೇಕು. ಸದ್ಯ ಕೊರೊನಾ ಲಕ್ಷಣ ಕೇವಲ ಪುಷ್ಪ ಚಿತ್ರತಂಡದ ಬೇರೆ ಬೇರೆ ಕಾರ್ಮಿಕರಿಗೆ ಕಾಣಿಸಿದ್ಯಾ, ಅಥವಾ ಕಲಾವಿದರಿಗೇನಾದ್ರೂ ವೈರಸ್ ಹಬ್ಬಿದ್ಯಾ ಅನ್ನೋದನ್ನ ಕಾದುನೋಡ್ಬೇಕಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ