AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರಕ್ಕೆ ಮತ್ತೆ ಅಡ್ಡಿ, ಚಿತ್ರತಂಡದಲ್ಲಿ ಕೆಲವರಿಗೆ ಕೊರೊನಾ ಸೋಂಕು?

ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಲಾಕ್‌ಡೌನ್ ನಂತ್ರ ಪುಷ್ಪಾ ಸಿನಿಮಾಗಾಗಿ ಮೇಕಪ್ ಹಾಕಿ ಮತ್ತೆ ಆ್ಯಕ್ಟ್ ಮಾಡ್ತಿದ್ದಾರೆ. ಕೆಲವು ತಿಂಗಳು ಎಲ್ಲದಕ್ಕೂ ಬ್ರೇಕ್ ಹಾಕಿದ್ದ ಚಿತ್ರತಂಡ ಈಗ ಭರದಿಂದ ಶೂಟಿಂಗ್ ಶುರು ಮಾಡಿತ್ತು. ಆದ್ರೆ ಸದ್ಯ ಪುಷ್ಪ ಚಿತ್ರತಂಡದ ಶೂಟಿಂಗ್‌ಗೆ ಮಹಾಮಾರಿ ಬ್ರೇಕ್ ಹಾಕಿದೆಯಂತೆ.

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರಕ್ಕೆ ಮತ್ತೆ ಅಡ್ಡಿ, ಚಿತ್ರತಂಡದಲ್ಲಿ ಕೆಲವರಿಗೆ ಕೊರೊನಾ ಸೋಂಕು?
ಅಲ್ಲು ಅರ್ಜುನ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 04, 2020 | 7:08 AM

Share

ಲಾಕ್‌ಡೌನ್‌ ನಂತ್ರ ಸ್ಟಾರ್‌ಗಳು ಮೈ ಕೊಡವಿ ಮೇಕಪ್ ಹಾಕಿ ಅರ್ಧಕ್ಕೆ ನಿಂತಿದ್ದ ಸಿನಿಮಾಗಳಿಗೆ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ನವೆಂಬರ್‌ ಮೊದಲ ವಾರದಿಂದ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌ ಕೂಡ ಮೇಕಪ್ ಹಾಕಿ ಪುಷ್ಪ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಚಿತ್ರತಂಡ ಕೂಡ ರಾಜಮಂಡ್ರಿ ಪ್ರದೇಶದಲ್ಲಿ ಶೂಟಿಂಗ್‌ ಮಾಡ್ತಿತ್ತು.

ಅಂದಹಾಗೆ ಸುಕುಮಾರ್‌ ಆ್ಯಕ್ಷನ್‌ ಕಟ್ ಹೇಳ್ತಿರೋ ಪುಷ್ಪ ಚಿತ್ರಕ್ಕೆ ಒಂದೊಂದೇ ಘಟನೆ ತಲೆ ಬಿಸಿ ಮಾಡ್ತಿದೆ. ಈಗಾಗಲೇ ಅಲ್ಲು ಅರ್ಜುನ್‌ ಶೂಟಿಂಗ್‌ನಲ್ಲಿ ಭಾಗಿಯಾಗಿರೋ ವೇಳೆ ಅಲ್ಲು ಅರ್ಜುನ್‌ ರಗಡ್‌ ಲುಕ್‌ ಫೋಟೋವೊಂದು ರಿಲೀಸ್ ಆಗಿದ್ದಕ್ಕೆ ಚಿತ್ರತಂಡ ಬೇಸರ ವ್ಯಕ್ತಪಡಿಸಿತ್ತು. ಈ ಘಟನೆ ನಂತ್ರ ಕೆಲವು ಬಂದೋಬಸ್ತ್‌ ಕ್ರಮಕೈಗೊಂಡು ಶೂಟಿಂಗ್‌ ಮುಂದುವರೆಸಿದ್ದ ಚಿತ್ರತಂಡ, ಈಗ ಬ್ರೇಕ್‌ ತೆಗೆದುಕೊಂಡು ಹೈದರಾಬಾದ್‌ಗೆ ವಾಪಸ್ಸಾಗಿದ್ಯಂತೆ.

ಚಿತ್ರೀಕರಣದ ಯೂನಿಟ್‌ನಲ್ಲಿನ ಕೆಲವರಿಗೆ ಕೊರೊನಾ: ಸದ್ಯ ಚಿತ್ರತಂಡ ರಾಜಮಂಡ್ರಿಯಲ್ಲಿ ಶೂಟಿಂಗ್‌ ಪ್ಯಾಕಪ್‌ ಮಾಡಿ ವಾಪಸ್ಸಾಗೋಕೆ ಕಾರಣ, ಚಿತ್ರೀಕರಣದ ಯೂನಿಟ್‌ನಲ್ಲಿನ ಕೆಲವರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ ಅನ್ನೋ ಮಾಹಿತಿ ಹರಿದಾಡ್ತಿದೆ. ಹೀಗಾಗಿ ಶೂಟಿಂಗ್‌ನಲ್ಲಿದ್ದ ಅದ್ಯಾರಿಗೆ ಕೊರೊನಾ ಬಂದಿದೆ. ಇದ್ದಕ್ಕಿದ್ದಂತೆ ಶೂಟಿಂಗ್‌ಗೆ ಬ್ರೇಕ್‌ ಹಾಕೋಕೆ ಕಾರಣ ಆಗಿರೋದು ಕೊರೊನಾ ಅನ್ನೋದು ನಿಜವಾ ಅನ್ನೋದನ್ನ ಚಿತ್ರತಂಡವೇ ಬಹಿರಂಗಪಡಿಸಬೇಕಿದೆ.

ಒಟ್ನಲ್ಲಿ ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್‌ ಹಾಗೂ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡು ವಿಭಿನ್ನ ಶೇಡ್‌ನಲ್ಲಿ ಕಮಾಲ್‌ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಪದೇಪದೆ ಒಂದಲ್ಲಾ ಒಂದು ಕಾರಣದಿಂದ ಶೂಟಿಂಗ್‌ಗೆ ಬ್ರೇಕ್‌ ಬಿದ್ರೆ ಅಂದುಕೊಂಡಿದ್ದಕ್ಕಿಂತ ಇನ್ನೂ ಕೆಲ ದಿನ ಅಲ್ಲು ಅಭಿಮಾನಿಗಳು ಕಾಯಲೇಬೇಕು. ಸದ್ಯ ಕೊರೊನಾ ಲಕ್ಷಣ ಕೇವಲ ಪುಷ್ಪ ಚಿತ್ರತಂಡದ ಬೇರೆ ಬೇರೆ ಕಾರ್ಮಿಕರಿಗೆ ಕಾಣಿಸಿದ್ಯಾ, ಅಥವಾ ಕಲಾವಿದರಿಗೇನಾದ್ರೂ ವೈರಸ್ ಹಬ್ಬಿದ್ಯಾ ಅನ್ನೋದನ್ನ ಕಾದುನೋಡ್ಬೇಕಿದೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ