AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರಕ್ಕೆ ಮತ್ತೆ ಅಡ್ಡಿ, ಚಿತ್ರತಂಡದಲ್ಲಿ ಕೆಲವರಿಗೆ ಕೊರೊನಾ ಸೋಂಕು?

ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಲಾಕ್‌ಡೌನ್ ನಂತ್ರ ಪುಷ್ಪಾ ಸಿನಿಮಾಗಾಗಿ ಮೇಕಪ್ ಹಾಕಿ ಮತ್ತೆ ಆ್ಯಕ್ಟ್ ಮಾಡ್ತಿದ್ದಾರೆ. ಕೆಲವು ತಿಂಗಳು ಎಲ್ಲದಕ್ಕೂ ಬ್ರೇಕ್ ಹಾಕಿದ್ದ ಚಿತ್ರತಂಡ ಈಗ ಭರದಿಂದ ಶೂಟಿಂಗ್ ಶುರು ಮಾಡಿತ್ತು. ಆದ್ರೆ ಸದ್ಯ ಪುಷ್ಪ ಚಿತ್ರತಂಡದ ಶೂಟಿಂಗ್‌ಗೆ ಮಹಾಮಾರಿ ಬ್ರೇಕ್ ಹಾಕಿದೆಯಂತೆ.

ಅಲ್ಲು ಅರ್ಜುನ್ ‘ಪುಷ್ಪಾ’ ಚಿತ್ರಕ್ಕೆ ಮತ್ತೆ ಅಡ್ಡಿ, ಚಿತ್ರತಂಡದಲ್ಲಿ ಕೆಲವರಿಗೆ ಕೊರೊನಾ ಸೋಂಕು?
ಅಲ್ಲು ಅರ್ಜುನ್
ಆಯೇಷಾ ಬಾನು
ಆಯೇಷಾ ಬಾನು|

Updated on: Dec 04, 2020 | 7:08 AM

Share

ಲಾಕ್‌ಡೌನ್‌ ನಂತ್ರ ಸ್ಟಾರ್‌ಗಳು ಮೈ ಕೊಡವಿ ಮೇಕಪ್ ಹಾಕಿ ಅರ್ಧಕ್ಕೆ ನಿಂತಿದ್ದ ಸಿನಿಮಾಗಳಿಗೆ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ನವೆಂಬರ್‌ ಮೊದಲ ವಾರದಿಂದ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌ ಕೂಡ ಮೇಕಪ್ ಹಾಕಿ ಪುಷ್ಪ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಚಿತ್ರತಂಡ ಕೂಡ ರಾಜಮಂಡ್ರಿ ಪ್ರದೇಶದಲ್ಲಿ ಶೂಟಿಂಗ್‌ ಮಾಡ್ತಿತ್ತು.

ಅಂದಹಾಗೆ ಸುಕುಮಾರ್‌ ಆ್ಯಕ್ಷನ್‌ ಕಟ್ ಹೇಳ್ತಿರೋ ಪುಷ್ಪ ಚಿತ್ರಕ್ಕೆ ಒಂದೊಂದೇ ಘಟನೆ ತಲೆ ಬಿಸಿ ಮಾಡ್ತಿದೆ. ಈಗಾಗಲೇ ಅಲ್ಲು ಅರ್ಜುನ್‌ ಶೂಟಿಂಗ್‌ನಲ್ಲಿ ಭಾಗಿಯಾಗಿರೋ ವೇಳೆ ಅಲ್ಲು ಅರ್ಜುನ್‌ ರಗಡ್‌ ಲುಕ್‌ ಫೋಟೋವೊಂದು ರಿಲೀಸ್ ಆಗಿದ್ದಕ್ಕೆ ಚಿತ್ರತಂಡ ಬೇಸರ ವ್ಯಕ್ತಪಡಿಸಿತ್ತು. ಈ ಘಟನೆ ನಂತ್ರ ಕೆಲವು ಬಂದೋಬಸ್ತ್‌ ಕ್ರಮಕೈಗೊಂಡು ಶೂಟಿಂಗ್‌ ಮುಂದುವರೆಸಿದ್ದ ಚಿತ್ರತಂಡ, ಈಗ ಬ್ರೇಕ್‌ ತೆಗೆದುಕೊಂಡು ಹೈದರಾಬಾದ್‌ಗೆ ವಾಪಸ್ಸಾಗಿದ್ಯಂತೆ.

ಚಿತ್ರೀಕರಣದ ಯೂನಿಟ್‌ನಲ್ಲಿನ ಕೆಲವರಿಗೆ ಕೊರೊನಾ: ಸದ್ಯ ಚಿತ್ರತಂಡ ರಾಜಮಂಡ್ರಿಯಲ್ಲಿ ಶೂಟಿಂಗ್‌ ಪ್ಯಾಕಪ್‌ ಮಾಡಿ ವಾಪಸ್ಸಾಗೋಕೆ ಕಾರಣ, ಚಿತ್ರೀಕರಣದ ಯೂನಿಟ್‌ನಲ್ಲಿನ ಕೆಲವರಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿವೆ ಅನ್ನೋ ಮಾಹಿತಿ ಹರಿದಾಡ್ತಿದೆ. ಹೀಗಾಗಿ ಶೂಟಿಂಗ್‌ನಲ್ಲಿದ್ದ ಅದ್ಯಾರಿಗೆ ಕೊರೊನಾ ಬಂದಿದೆ. ಇದ್ದಕ್ಕಿದ್ದಂತೆ ಶೂಟಿಂಗ್‌ಗೆ ಬ್ರೇಕ್‌ ಹಾಕೋಕೆ ಕಾರಣ ಆಗಿರೋದು ಕೊರೊನಾ ಅನ್ನೋದು ನಿಜವಾ ಅನ್ನೋದನ್ನ ಚಿತ್ರತಂಡವೇ ಬಹಿರಂಗಪಡಿಸಬೇಕಿದೆ.

ಒಟ್ನಲ್ಲಿ ಪುಷ್ಪ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್‌ ಹಾಗೂ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡು ವಿಭಿನ್ನ ಶೇಡ್‌ನಲ್ಲಿ ಕಮಾಲ್‌ ಮಾಡೋಕೆ ರೆಡಿಯಾಗಿದ್ದಾರೆ. ಆದ್ರೆ ಪದೇಪದೆ ಒಂದಲ್ಲಾ ಒಂದು ಕಾರಣದಿಂದ ಶೂಟಿಂಗ್‌ಗೆ ಬ್ರೇಕ್‌ ಬಿದ್ರೆ ಅಂದುಕೊಂಡಿದ್ದಕ್ಕಿಂತ ಇನ್ನೂ ಕೆಲ ದಿನ ಅಲ್ಲು ಅಭಿಮಾನಿಗಳು ಕಾಯಲೇಬೇಕು. ಸದ್ಯ ಕೊರೊನಾ ಲಕ್ಷಣ ಕೇವಲ ಪುಷ್ಪ ಚಿತ್ರತಂಡದ ಬೇರೆ ಬೇರೆ ಕಾರ್ಮಿಕರಿಗೆ ಕಾಣಿಸಿದ್ಯಾ, ಅಥವಾ ಕಲಾವಿದರಿಗೇನಾದ್ರೂ ವೈರಸ್ ಹಬ್ಬಿದ್ಯಾ ಅನ್ನೋದನ್ನ ಕಾದುನೋಡ್ಬೇಕಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು