AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವು ಓದಿದ ಸರ್ಕಾರಿ ಶಾಲೆಗೆ 18 ಲಕ್ಷ ರೂ. ದೇಣಿಗೆ ನೀಡಿದ ‘ಪುಷ್ಪ’ ನಿರ್ದೇಶಕ ಸುಕುಮಾರ್​

ತಾವು ಓದಿದ ಸರ್ಕಾರಿ ಶಾಲೆಯ ಬಗ್ಗೆ ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಇಂದಿಗೂ ಗೌರವ ಭಾವನೆ ಹೊಂದಿದ್ದಾರೆ. ಈಗ ಅವರು ನೀಡಿರುವ 18 ಲಕ್ಷ ರೂ. ದೇಣಿಗೆ ಹಣದಿಂದ ಶಾಲೆಯಲ್ಲಿ ಎರಡು ಹೊಸ ಕ್ಲಾಸ್​ ರೂಮ್​ಗಳನ್ನು ಕಟ್ಟಲಾಗಿದೆ.

ತಾವು ಓದಿದ ಸರ್ಕಾರಿ ಶಾಲೆಗೆ 18 ಲಕ್ಷ ರೂ. ದೇಣಿಗೆ ನೀಡಿದ ‘ಪುಷ್ಪ’ ನಿರ್ದೇಶಕ ಸುಕುಮಾರ್​
ನಿರ್ದೇಶಕ ಸುಕುಮಾರ್​
TV9 Web
| Edited By: |

Updated on: Aug 04, 2021 | 1:18 PM

Share

ಟಾಲಿವುಡ್​ನ ಸ್ಟಾರ್​ ನಿರ್ದೇಶಕ ಸುಕುಮಾರ್​ (Sukumar) ಅವರು ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಸಿನಿಮಾಗಳಲ್ಲಿ ಬಡವರ ಪರವಾಗಿ ಧ್ವನಿ ಎತ್ತಿರುವ ಅವರು ರಿಯಲ್​ ಲೈಫ್​ನಲ್ಲಿಯೂ ವಿಶಾಲ ಹೃದಯ ಹೊಂದಿದ್ದಾರೆ. ಅದಕ್ಕೆ ಈಗೊಂದು ಲೇಟೆಸ್ಟ್​ ಉದಾಹರಣೆ ಸಿಕ್ಕಿದೆ. ದಶಕಗಳ ಹಿಂದೆ ತಾವು ಓದಿದ್ದ ಸರ್ಕಾರಿ ಶಾಲೆಗೆ (Government School) ಬರೋಬ್ಬರಿ 18 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಸುಕುಮಾರ್​​ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದ್ಯ ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ’ (Pushpa The Rise) ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವ ಅವರು ಈ ಸಮಾಜಸೇವೆಯ ಕಾರಣದಿಂದ ಸುದ್ದಿ ಆಗಿದ್ದಾರೆ.

ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮತ್ತಪರು ಗ್ರಾಮದಲ್ಲಿ ಸುಕುಮಾರ್​ ಅವರು ಶಿಕ್ಷಣ ಪಡೆದಿದ್ದರು. ತಾವು ಓದಿದ ಆ ಸರ್ಕಾರಿ ಶಾಲೆಯ ಬಗ್ಗೆ ಅವರು ಇಂದಿಗೂ ಗೌರವ ಭಾವನೆ ಹೊಂದಿದ್ದಾರೆ. ಈಗ ಅವರು ನೀಡಿರುವ 18 ಲಕ್ಷ ರೂ. ದೇಣಿಗೆ ಹಣದಿಂದ ಶಾಲೆಯಲ್ಲಿ ಎರಡು ಹೊಸ ಕ್ಲಾಸ್​ ರೂಮ್​ಗಳನ್ನು ಕಟ್ಟಲಾಗಿದೆ. ಅದರಲ್ಲಿ ಒಂದು ಡಿಜಿಟಲ್​ ಕ್ಲಾಸ್​ ರೂಮ್​ ಒಳಗೊಂಡಿದೆ. ಇತ್ತೀಚೆಗೆ ಇವುಗಳನ್ನು ಉದ್ಘಾಟಿಸಲಾಯಿತು. ಆ ಕಾರ್ಯಕ್ರಮದಲ್ಲಿ ಸುಕುಮಾರ್​, ಜನಸೇನಾ ಶಾಸಕ ರಾಪಕ ವರಪ್ರಸಾದ್​ ಮುಂತಾದ ಗಣ್ಯರು ಭಾಗವಹಿಸಿದ್ದರು.

ಸುಕುಮಾರ್​ ಅವರ ಕಾರ್ಯಕ್ಕೆ ಶಾಸಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ‘ಜೀವನದಲ್ಲಿ ಹಣ ಗಳಿಸಿದ ಜನರು ತಾವು ಬೆಳೆದು ಬಂದ ಊರನ್ನು ಮರೆತುಬಿಡುತ್ತಾರೆ. ​ಕುಟುಂಬದವರನ್ನೂ ಮರೆತು ಹೈದರಾಬಾದ್​ ಮುಂತಾದ ಸಿಟಿಯಲ್ಲಿ ನೆಲೆಸುತ್ತಾರೆ. ಬಡತನದ ಕುಟುಂಬದಲ್ಲಿ ಬೆಳೆದ ಸುಕುಮಾರ್​ ಈಗ ಅವರ ಸಹೋದರ-ಸಹೋದರಿಯರಿಗೆ ನೆರವಾಗಿದ್ದಾರೆ. ಇತ್ತೀಚೆಗೆ ಅವರು ಕೊರೊನಾ ಎರಡನೇ ಅಲೆ ಜೋರಾದಾಗ 45 ಲಕ್ಷ ರೂ. ಖರ್ಚು ಮಾಡಿ ಆಕ್ಸಿಜನ್​ ಪ್ಲಾಂಟ್​ ಸ್ಥಾಪಿಸಿದ್ದರು’ ಎಂದು ಸುಕುಮಾರ್​ ಅವರ ಸಮಾಜಸೇವೆಯನ್ನು ಶಾಸಕ ವರಪ್ರಸಾದ್​ ಶ್ಲಾಘಿಸಿದ್ದಾರೆ.

ಸಕುಮಾರ್​ ನಿರ್ದೇಶನದ ‘ಪುಷ್ಪ’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಈ ಸಿನಿಮಾ 2021ರ ಕ್ರಿಸ್​ಮಸ್​ಗೆ ಬಿಡುಗಡೆ ಆಗಲಿದೆ. ಎರಡು ಪಾರ್ಟ್​ಗಳಲ್ಲಿ ಸಿನಿಮಾ ಮೂಡಿಬರಲಿದ್ದು, ಮೊದಲ ಭಾಗಕ್ಕೆ ‘Pushpa- The Rise’ ಎಂದು ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ:

Pushpa: ‘ಪುಷ್ಪ’ ರಿಲೀಸ್​ ಡೇಟ್​ ಜೊತೆಗೆ ಮತ್ತೊಂದು ಮುಖ್ಯ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅಲ್ಲು ಅರ್ಜುನ್​

ಕನ್ನಡ ಶಾಲೆಗಾಗಿ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡ ಕಿಚ್ಚ ಸುದೀಪ್​ ಚಾರಿಟೇಬಲ್​ ಟ್ರಸ್ಟ್​

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು