AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವು ಓದಿದ ಸರ್ಕಾರಿ ಶಾಲೆಗೆ 18 ಲಕ್ಷ ರೂ. ದೇಣಿಗೆ ನೀಡಿದ ‘ಪುಷ್ಪ’ ನಿರ್ದೇಶಕ ಸುಕುಮಾರ್​

ತಾವು ಓದಿದ ಸರ್ಕಾರಿ ಶಾಲೆಯ ಬಗ್ಗೆ ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಇಂದಿಗೂ ಗೌರವ ಭಾವನೆ ಹೊಂದಿದ್ದಾರೆ. ಈಗ ಅವರು ನೀಡಿರುವ 18 ಲಕ್ಷ ರೂ. ದೇಣಿಗೆ ಹಣದಿಂದ ಶಾಲೆಯಲ್ಲಿ ಎರಡು ಹೊಸ ಕ್ಲಾಸ್​ ರೂಮ್​ಗಳನ್ನು ಕಟ್ಟಲಾಗಿದೆ.

ತಾವು ಓದಿದ ಸರ್ಕಾರಿ ಶಾಲೆಗೆ 18 ಲಕ್ಷ ರೂ. ದೇಣಿಗೆ ನೀಡಿದ ‘ಪುಷ್ಪ’ ನಿರ್ದೇಶಕ ಸುಕುಮಾರ್​
ನಿರ್ದೇಶಕ ಸುಕುಮಾರ್​
TV9 Web
| Edited By: |

Updated on: Aug 04, 2021 | 1:18 PM

Share

ಟಾಲಿವುಡ್​ನ ಸ್ಟಾರ್​ ನಿರ್ದೇಶಕ ಸುಕುಮಾರ್​ (Sukumar) ಅವರು ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಸಿನಿಮಾಗಳಲ್ಲಿ ಬಡವರ ಪರವಾಗಿ ಧ್ವನಿ ಎತ್ತಿರುವ ಅವರು ರಿಯಲ್​ ಲೈಫ್​ನಲ್ಲಿಯೂ ವಿಶಾಲ ಹೃದಯ ಹೊಂದಿದ್ದಾರೆ. ಅದಕ್ಕೆ ಈಗೊಂದು ಲೇಟೆಸ್ಟ್​ ಉದಾಹರಣೆ ಸಿಕ್ಕಿದೆ. ದಶಕಗಳ ಹಿಂದೆ ತಾವು ಓದಿದ್ದ ಸರ್ಕಾರಿ ಶಾಲೆಗೆ (Government School) ಬರೋಬ್ಬರಿ 18 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಸುಕುಮಾರ್​​ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದ್ಯ ಅಲ್ಲು ಅರ್ಜುನ್​ (Allu Arjun) ನಟನೆಯ ‘ಪುಷ್ಪ’ (Pushpa The Rise) ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವ ಅವರು ಈ ಸಮಾಜಸೇವೆಯ ಕಾರಣದಿಂದ ಸುದ್ದಿ ಆಗಿದ್ದಾರೆ.

ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮತ್ತಪರು ಗ್ರಾಮದಲ್ಲಿ ಸುಕುಮಾರ್​ ಅವರು ಶಿಕ್ಷಣ ಪಡೆದಿದ್ದರು. ತಾವು ಓದಿದ ಆ ಸರ್ಕಾರಿ ಶಾಲೆಯ ಬಗ್ಗೆ ಅವರು ಇಂದಿಗೂ ಗೌರವ ಭಾವನೆ ಹೊಂದಿದ್ದಾರೆ. ಈಗ ಅವರು ನೀಡಿರುವ 18 ಲಕ್ಷ ರೂ. ದೇಣಿಗೆ ಹಣದಿಂದ ಶಾಲೆಯಲ್ಲಿ ಎರಡು ಹೊಸ ಕ್ಲಾಸ್​ ರೂಮ್​ಗಳನ್ನು ಕಟ್ಟಲಾಗಿದೆ. ಅದರಲ್ಲಿ ಒಂದು ಡಿಜಿಟಲ್​ ಕ್ಲಾಸ್​ ರೂಮ್​ ಒಳಗೊಂಡಿದೆ. ಇತ್ತೀಚೆಗೆ ಇವುಗಳನ್ನು ಉದ್ಘಾಟಿಸಲಾಯಿತು. ಆ ಕಾರ್ಯಕ್ರಮದಲ್ಲಿ ಸುಕುಮಾರ್​, ಜನಸೇನಾ ಶಾಸಕ ರಾಪಕ ವರಪ್ರಸಾದ್​ ಮುಂತಾದ ಗಣ್ಯರು ಭಾಗವಹಿಸಿದ್ದರು.

ಸುಕುಮಾರ್​ ಅವರ ಕಾರ್ಯಕ್ಕೆ ಶಾಸಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ‘ಜೀವನದಲ್ಲಿ ಹಣ ಗಳಿಸಿದ ಜನರು ತಾವು ಬೆಳೆದು ಬಂದ ಊರನ್ನು ಮರೆತುಬಿಡುತ್ತಾರೆ. ​ಕುಟುಂಬದವರನ್ನೂ ಮರೆತು ಹೈದರಾಬಾದ್​ ಮುಂತಾದ ಸಿಟಿಯಲ್ಲಿ ನೆಲೆಸುತ್ತಾರೆ. ಬಡತನದ ಕುಟುಂಬದಲ್ಲಿ ಬೆಳೆದ ಸುಕುಮಾರ್​ ಈಗ ಅವರ ಸಹೋದರ-ಸಹೋದರಿಯರಿಗೆ ನೆರವಾಗಿದ್ದಾರೆ. ಇತ್ತೀಚೆಗೆ ಅವರು ಕೊರೊನಾ ಎರಡನೇ ಅಲೆ ಜೋರಾದಾಗ 45 ಲಕ್ಷ ರೂ. ಖರ್ಚು ಮಾಡಿ ಆಕ್ಸಿಜನ್​ ಪ್ಲಾಂಟ್​ ಸ್ಥಾಪಿಸಿದ್ದರು’ ಎಂದು ಸುಕುಮಾರ್​ ಅವರ ಸಮಾಜಸೇವೆಯನ್ನು ಶಾಸಕ ವರಪ್ರಸಾದ್​ ಶ್ಲಾಘಿಸಿದ್ದಾರೆ.

ಸಕುಮಾರ್​ ನಿರ್ದೇಶನದ ‘ಪುಷ್ಪ’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಈ ಸಿನಿಮಾ 2021ರ ಕ್ರಿಸ್​ಮಸ್​ಗೆ ಬಿಡುಗಡೆ ಆಗಲಿದೆ. ಎರಡು ಪಾರ್ಟ್​ಗಳಲ್ಲಿ ಸಿನಿಮಾ ಮೂಡಿಬರಲಿದ್ದು, ಮೊದಲ ಭಾಗಕ್ಕೆ ‘Pushpa- The Rise’ ಎಂದು ಶೀರ್ಷಿಕೆ ಇಡಲಾಗಿದೆ.

ಇದನ್ನೂ ಓದಿ:

Pushpa: ‘ಪುಷ್ಪ’ ರಿಲೀಸ್​ ಡೇಟ್​ ಜೊತೆಗೆ ಮತ್ತೊಂದು ಮುಖ್ಯ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅಲ್ಲು ಅರ್ಜುನ್​

ಕನ್ನಡ ಶಾಲೆಗಾಗಿ ಮತ್ತೊಂದು ಮಹತ್ವದ ಕಾರ್ಯ ಕೈಗೊಂಡ ಕಿಚ್ಚ ಸುದೀಪ್​ ಚಾರಿಟೇಬಲ್​ ಟ್ರಸ್ಟ್​

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ