AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಬಿಡುಗಡೆಗೂ ಮುನ್ನ ಮತ್ತೊಮ್ಮೆ ರಿಲೀಸ್ ಆಗಲಿದೆ ‘ಪುಷ್ಪ’ ಸಿನಿಮಾ

ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆಯಲು ‘ಪುಷ್ಪ 2’ ಸಿನಿಮಾ ಬರುತ್ತಿದೆ. ಅದಕ್ಕೂ ಮೊದಲು ‘ಪುಷ್ಪ’ ಸಿನಿಮಾವನ್ನು ಮತ್ತೊಮ್ಮೆ ಚಿತ್ರಮಂದಿರದಲ್ಲಿ ರಿಲೀಸ್ ಮಾಡಲು ಸಿದ್ಧತೆ ನಡೆದಿದೆ. ಶೀಘ್ರದಲ್ಲೇ ‘ಪುಷ್ಪ’ ಸಿನಿಮಾ ಮರು ಬಿಡುಗಡೆ ಆಗಲಿದೆ. ಈ ಸಿನಿಮಾವನ್ನು ದೊಡ್ಡ ಪರದೆಯ ಮೇಲೆ ಮತ್ತೊಮ್ಮೆ ನೋಡಲು ಅಲ್ಲು ಅರ್ಜುನ್ ಅಭಿಮಾನಿಗಳು ಕಾದಿದ್ದಾರೆ.

‘ಪುಷ್ಪ 2’ ಬಿಡುಗಡೆಗೂ ಮುನ್ನ ಮತ್ತೊಮ್ಮೆ ರಿಲೀಸ್ ಆಗಲಿದೆ ‘ಪುಷ್ಪ’ ಸಿನಿಮಾ
ಅಲ್ಲು ಅರ್ಜುನ್
ಮದನ್​ ಕುಮಾರ್​
|

Updated on: Nov 20, 2024 | 5:10 PM

Share

ಭಾರಿ ಬಜೆಟ್​ನಲ್ಲಿ ಸಿದ್ಧವಾಗಿದ್ದ ‘ಪುಷ್ಪ’ ಸಿನಿಮಾ 2021ರಲ್ಲಿ ಬಿಡುಗಡೆ ಆಗಿತ್ತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಆ ಸಿನಿಮಾ ಧೂಳೆಬ್ಬಿಸಿತ್ತು. ತೆಲುಗಿನ ಆ ಚಿತ್ರ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ತೆರೆಕಂಡಿತ್ತು. ವಿಶೇಷವಾಗಿ, ಹಿಂದಿ ಪ್ರೇಕ್ಷಕರು ‘ಪುಷ್ಪ’ ಸಿನಿಮಾವನ್ನು ಸಖತ್ ಮೆಚ್ಚಿಕೊಂಡಿದ್ದರು. ಬಳಿಕ ಒಟಿಟಿ ಮತ್ತು ಟಿವಿಯಲ್ಲಿ ಪ್ರಸಾರ ಆದಾಗಲೂ ಜನರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಆ ಸಿನಿಮಾ ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಆಗಲಿದೆ. ‘ಪುಷ್ಪ 2’ ಬಿಡುಗಡೆ ಹೊಸ್ತಿಲಿನಲ್ಲಿ ‘ಪುಷ್ಪ’ ಚಿತ್ರವನ್ನು ರೀ-ರಿಲೀಸ್ ಮಾಡಲು ನಿರ್ಧರಿಸಲಾಗಿದೆ.

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದ ‘ಪುಷ್ಪ’ ಸಿನಿಮಾದ ಸೀಕ್ವೆಲ್ ಆಗಿ ‘ಪುಷ್ಪ 2’ ಸಿನಿಮಾ ಸಿದ್ಧವಾಗಿದೆ. ಡಿಸೆಂಬರ್​ 5ರಂದು ‘ಪುಷ್ಪ 2’ ಬಿಡುಗಡೆ ಆಗಲಿದೆ. ಪ್ರೇಕ್ಷಕರಿಗೆ ಈ ಕಥೆ ಮತ್ತೊಮ್ಮೆ ನೆನಪಿಸಬೇಕು ಎಂಬ ಕಾರಣಕ್ಕೆ ‘ಪುಷ್ಪ’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲಾಗುತ್ತಿದೆ. ಮರು ಬಿಡುಗಡೆಯಿಂದ ಚಿತ್ರಕ್ಕೆ ಎಷ್ಟು ಕಲೆಕ್ಷನ್ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಸೀಕ್ವೆಲ್​ಗಳು ಬಿಡುಗಡೆ ಆಗುವಾಗ ಪ್ರೀಕ್ವೆಲ್​ ಮರು ಬಿಡುಗಡೆ ಮಾಡುವ ಟ್ರೆಂಡ್ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ‘ಪುಷ್ಪ 2’ ಸಿನಿಮಾ ತಂಡ ಕೂಡ ಆ ಟ್ರೆಂಡ್ ಫಾಲೋ ಮಾಡುತ್ತಿದೆ. ಈ ಸಿನಿಮಾಗೆ ಸುಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಡಾಲಿ ಧನಂಜಯ್, ಫಹಾದ್ ಫಾಸಿಲ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಪ್ರೈವೇಟ್ ಜೆಟ್​ನಲ್ಲಿ ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ಪ್ರಯಾಣ

ಕೆಲವೇ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಆಯಿತು. ಅದರಲ್ಲಿ ಚಿತ್ರದ ಶ್ರೀಮಂತಿಕೆ ಕಾಣಿಸಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ನೂರಾರು ಕೋಟಿ ರೂಪಾಯಿ ಸುರಿದು ಈ ಸಿನಿಮಾವನ್ನು ನಿರ್ಮಿಸಿದೆ. ಈಗಾಗಲೇ ನಿರ್ಮಾಪಕರಿಗೆ ಭರ್ಜರಿ ಲಾಭ ಆಗಿದೆ. ಚಿತ್ರಮಂದಿರಗಳಿಂದಲೂ ದಾಖಲೆಯ ಕಲೆಕ್ಷನ್ ಆಗುವ ನಿರೀಕ್ಷೆ ಇದೆ. ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅವರ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ಭಾರಿ ಹೈಪ್ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ