AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಮತ್ತೆ ಪುಟ್ಟಕ್ಕನೇ ನಂಬರ್ ಒನ್; ಯಾವ ಧಾರಾವಾಹಿ​ಗೆ ಎಷ್ಟನೇ ಸ್ಥಾನ?

ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಾ ಬಂದಿದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ.

ಟಿಆರ್​ಪಿಯಲ್ಲಿ ಮತ್ತೆ ಪುಟ್ಟಕ್ಕನೇ ನಂಬರ್ ಒನ್; ಯಾವ ಧಾರಾವಾಹಿ​ಗೆ ಎಷ್ಟನೇ ಸ್ಥಾನ?
ಪುಟ್ಟಕ್ಕನ ಮಕ್ಕಳು
ರಾಜೇಶ್ ದುಗ್ಗುಮನೆ
|

Updated on: May 31, 2024 | 10:45 AM

Share

21ನೇ ವಾರದ ಧಾರಾವಾಹಿ ಟಿಆರ್​ಪಿ ಹೊರಬಿದ್ದಿದೆ. ಈ ಪೈಕಿ ಟಾಪ್ ಐದರಲ್ಲಿ ಇರುವ ಎಲ್ಲಾ ಧಾರಾವಾಹಿಗಳು ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಧಾರಾವಾಹಿಗಳೇ ಅನ್ನೋದು ವಿಶೇಷ. ಈ ಪೈಕಿ ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಈ ಧಾರಾವಾಹಿ ಹಳೆಯ ಚಾರ್ಮ್​ಗೆ ಮರಳಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ 21ನೇ ವಾರದ ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಾ ಬಂದಿದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ.

ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಕೂಡು ಕುಟುಂಬದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಆರಂಭದಲ್ಲಿ ಎಷ್ಟು ಟಿಆರ್​ಪಿ ಬರುತ್ತಿತ್ತೋ ಅಷ್ಟು ಟಿಆರ್​ಪಿ ಈಗ ಸಿಗುತ್ತಿಲ್ಲ. ಈ ಕಾರಣಕ್ಕೆ ಧಾರಾವಾಹಿ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಕುಸಿದಿದೆ.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಇತ್ತೀಚೆಗೆ ಜೀ ಕನ್ನಡದಲ್ಲಿ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಗೆ ಉತ್ತಮ ಟಿಆರ್​ಪಿ ಸಿಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ.

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಒಳ್ಳೆಯ ಟಿಆರ್​ಪಿ ಪಡೆದು ನಾಲ್ಕನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿಯ ಕಥೆ ಹಲವು ತಿರುವುಗಳನ್ನು ಪಡೆದು ಸಾಗುತ್ತಿದೆ.

ಇದನ್ನೂ ಓದಿ: ‘ಸೀತಾ ರಾಮ’ ಧಾರಾವಾಹಿ ನಟಿ ವೈಷ್ಣವಿ ಗೌಡಗೆ ಬಿತ್ತು ದಂಡ; ಮಾಡಿದ ತಪ್ಪೇನು?

ಐದನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಈಗ ರಾಮ ಹಾಗೂ ಸೀತೆಯ ಮದುವೆ ನಿಶ್ಚಯ ಆಗಿದೆ. ಮುಂದಿನ ದಿನಗಳಲ್ಲಿ ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಕೆ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK