AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಂತು 99 ರೂಪಾಯಿ ಟಿಕೆಟ್ ಬೆಲೆ; ಆದರೆ, ಸಿನಿಮಾಗಳೇ ಇಲ್ಲ

ಪಿವಿಆರ್ ಹಾಗೂ ಐನಾಕ್ಸ್ ‘ಸಿನಿಮಾ ಲವರ್ಸ್ ಡೇ’ ಆಚರಣೆ ಮಾಡುತ್ತಿದೆ. ಇದರ ಅಡಿಯಲ್ಲಿ ಸಿನಿಮಾ ಪ್ರಿಯರು 3 ದಿನ ಸಿನಿಮಾನ ಎಂಜಾಯ್ ಮಾಡಬಹುದಾಗಿದೆ. ಶುಕ್ರವಾರ ಹಾಗೂ ಶನಿವಾರ-ಭಾನುವಾರ ಒಂದೊಂದು ಟಿಕೆಟ್ ಬೆಲೆ ನಿಗದಿ ಮಾಡಲಾಗಿದೆ.

ಮತ್ತೆ ಬಂತು 99 ರೂಪಾಯಿ ಟಿಕೆಟ್ ಬೆಲೆ; ಆದರೆ, ಸಿನಿಮಾಗಳೇ ಇಲ್ಲ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Aug 09, 2024 | 7:07 AM

Share

ಭಾರತದ ಮಲ್ಟಿಪ್ಲೆಕ್ಸ್ ಚೈನ್​ಗಳು ಆಗಾಗ ಸಿನಿಮಾ ಟಿಕೆಟ್​ಗಳ ಮೇಲೆ ಆಫರ್​ಗಳನ್ನು ನೀಡುತ್ತಾರೆ. ಈಗ ‘ಸಿನಿಮಾ ಲವರ್ಸ್ ವೀಕೆಂಡ್’ ಆಫರ್ ಬಂದಿದೆ. ಆಗಸ್ಟ್ 9ರಿಂದ ಆಗಸ್ಟ್​ 11ರವರೆಗೆ ಈ ಆಫರ್ ಇರಲಿದೆ. 9ನೇ ತಾರೀಕು ಟಿಕೆಟ್ ಬೆಲೆ 99 ರೂಪಾಯಿ ಇದೆ. 10 ಹಾಗೂ 11ರಂದು 199 ರೂಪಾಯಿ ಇರಲಿದೆ. ಆದರೆ, ನೋಡಲು ಯಾವುದೇ ಸಿನಿಮಾಗಳು ಇಲ್ಲ ಎಂದು ಸಿನಿಪ್ರಿಯರು ಬೇಸರ ಮಾಡಿಕೊಳ್ಳುತ್ತಿದ್ದಾರೆ.

ಪಿವಿಆರ್ ಹಾಗೂ ಐನಾಕ್ಸ್ ‘ಸಿನಿಮಾ ಲವರ್ಸ್ ಡೇ’ ಆಚರಣೆ ಮಾಡುತ್ತಿದೆ. ಇದರ ಅಡಿಯಲ್ಲಿ ಸಿನಿಮಾ ಪ್ರಿಯರು ಮೂರು ದಿನ ಸಿನಿಮಾನ ಎಂಜಾಯ್ ಮಾಡಬಹುದಾಗಿದೆ. ಇನ್ನು, ಐಮ್ಯಾಕ್ಸ್, 4ಡಿಎಕ್ಸ್, ಎಂ​ಎಕ್ಸ್​4ಡಿ ಸ್ಕ್ರೀನ್​ಗಳಲ್ಲಿ ಆಗಸ್ಟ್ 9ರಂದು 199 ರೂಪಾಯಿ ಹಾಗೂ 10-11ರಂದು 299 ರೂಪಾಯಿ ಟಿಕೆಟ್ ಬೆಲೆ ಇರಲಿದೆ. ಇನ್ನು ಗೋಲ್ಡ್​, ಲಕ್ಸ್​, ಡೈರೆಕ್ಟರ್ಸ್ ಕಟ್, ಇನ್​ಸಿಗ್ನಿಯಾ ಥಿಯೇಟರ್​ಗಳಲ್ಲಿ 9ರಂದು 299 ರೂಪಾಯಿ ಹಾಗೂ 10-11ರಂದು 499 ರೂಪಾಯಿ ಟಿಕೆಟ್ ಬೆಲೆ ಇರಲಿದೆ.

ಕೆಲವರಿಗೆ ಗೋಲ್ಡ್, ಲಕ್ಸ್, ಡೈರೆಕ್ಟರ್ಸ್ ಕಟ್ ಥಿಯೇಟರ್​ಗಳನ್ನು ಎಕ್ಸ್​ಪೀರಿಯನ್ಸ್ ಮಾಡಬೇಕು ಎಂದಿರುತ್ತದೆ. ಆದರೆ, ದುಬಾರಿ ಟಿಕೆಟ್ ದರದಿಂದ ಅದು ಸಾಧ್ಯವಾಗಿರುವುದಿಲ್ಲ. ಆದರೆ, ಈಗ ಆಫರ್ ಇರುವುದರಿಂದ ಕಡಿಮೆ ಬೆಲೆಯಲ್ಲಿಯೇ ಇಲ್ಲಿ ಸಿನಿಮಾ ನೋಡಬಹುದು.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಶೋ ವೇಳೆ ಪಿವಿಆರ್ ಒಳಗೆ ಸುರಿಯಿತು ಮಳೆ ನೀರು; ವಿಡಿಯೋ ವೈರಲ್​

‘ಉಲಜ್’, ‘ಕಲ್ಕಿ 2898 ಎಡಿ’, ‘ಬ್ಯಾಡ್ ನ್ಯೂಸ್’, ‘ಕಿಲ್’ ಮೊದಲಾದ ಹಿಂದಿ ಸಿನಿಮಾಗಳು ವೀಕ್ಷಣೆಗೆ ಲಭ್ಯವಿದೆ. ಇಂದು (ಆಗಸ್ಟ್ 9) ‘ಭೀಮ’ ಸಿನಿಮಾ ರಿಲೀಸ್ ಆಗುತ್ತಿದೆ. ಇದಕ್ಕೆ ಟಿಕೆಟ್ ಆಫರ್ ಇರುತ್ತದೆಯೋ ಅಥವಾ ಇಲ್ಲವೋ ಅನ್ನೋದು ಸ್ಪಷ್ಟವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Fri, 9 August 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!