AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಂತು 99 ರೂಪಾಯಿ ಟಿಕೆಟ್ ಬೆಲೆ; ಆದರೆ, ಸಿನಿಮಾಗಳೇ ಇಲ್ಲ

ಪಿವಿಆರ್ ಹಾಗೂ ಐನಾಕ್ಸ್ ‘ಸಿನಿಮಾ ಲವರ್ಸ್ ಡೇ’ ಆಚರಣೆ ಮಾಡುತ್ತಿದೆ. ಇದರ ಅಡಿಯಲ್ಲಿ ಸಿನಿಮಾ ಪ್ರಿಯರು 3 ದಿನ ಸಿನಿಮಾನ ಎಂಜಾಯ್ ಮಾಡಬಹುದಾಗಿದೆ. ಶುಕ್ರವಾರ ಹಾಗೂ ಶನಿವಾರ-ಭಾನುವಾರ ಒಂದೊಂದು ಟಿಕೆಟ್ ಬೆಲೆ ನಿಗದಿ ಮಾಡಲಾಗಿದೆ.

ಮತ್ತೆ ಬಂತು 99 ರೂಪಾಯಿ ಟಿಕೆಟ್ ಬೆಲೆ; ಆದರೆ, ಸಿನಿಮಾಗಳೇ ಇಲ್ಲ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Aug 09, 2024 | 7:07 AM

Share

ಭಾರತದ ಮಲ್ಟಿಪ್ಲೆಕ್ಸ್ ಚೈನ್​ಗಳು ಆಗಾಗ ಸಿನಿಮಾ ಟಿಕೆಟ್​ಗಳ ಮೇಲೆ ಆಫರ್​ಗಳನ್ನು ನೀಡುತ್ತಾರೆ. ಈಗ ‘ಸಿನಿಮಾ ಲವರ್ಸ್ ವೀಕೆಂಡ್’ ಆಫರ್ ಬಂದಿದೆ. ಆಗಸ್ಟ್ 9ರಿಂದ ಆಗಸ್ಟ್​ 11ರವರೆಗೆ ಈ ಆಫರ್ ಇರಲಿದೆ. 9ನೇ ತಾರೀಕು ಟಿಕೆಟ್ ಬೆಲೆ 99 ರೂಪಾಯಿ ಇದೆ. 10 ಹಾಗೂ 11ರಂದು 199 ರೂಪಾಯಿ ಇರಲಿದೆ. ಆದರೆ, ನೋಡಲು ಯಾವುದೇ ಸಿನಿಮಾಗಳು ಇಲ್ಲ ಎಂದು ಸಿನಿಪ್ರಿಯರು ಬೇಸರ ಮಾಡಿಕೊಳ್ಳುತ್ತಿದ್ದಾರೆ.

ಪಿವಿಆರ್ ಹಾಗೂ ಐನಾಕ್ಸ್ ‘ಸಿನಿಮಾ ಲವರ್ಸ್ ಡೇ’ ಆಚರಣೆ ಮಾಡುತ್ತಿದೆ. ಇದರ ಅಡಿಯಲ್ಲಿ ಸಿನಿಮಾ ಪ್ರಿಯರು ಮೂರು ದಿನ ಸಿನಿಮಾನ ಎಂಜಾಯ್ ಮಾಡಬಹುದಾಗಿದೆ. ಇನ್ನು, ಐಮ್ಯಾಕ್ಸ್, 4ಡಿಎಕ್ಸ್, ಎಂ​ಎಕ್ಸ್​4ಡಿ ಸ್ಕ್ರೀನ್​ಗಳಲ್ಲಿ ಆಗಸ್ಟ್ 9ರಂದು 199 ರೂಪಾಯಿ ಹಾಗೂ 10-11ರಂದು 299 ರೂಪಾಯಿ ಟಿಕೆಟ್ ಬೆಲೆ ಇರಲಿದೆ. ಇನ್ನು ಗೋಲ್ಡ್​, ಲಕ್ಸ್​, ಡೈರೆಕ್ಟರ್ಸ್ ಕಟ್, ಇನ್​ಸಿಗ್ನಿಯಾ ಥಿಯೇಟರ್​ಗಳಲ್ಲಿ 9ರಂದು 299 ರೂಪಾಯಿ ಹಾಗೂ 10-11ರಂದು 499 ರೂಪಾಯಿ ಟಿಕೆಟ್ ಬೆಲೆ ಇರಲಿದೆ.

ಕೆಲವರಿಗೆ ಗೋಲ್ಡ್, ಲಕ್ಸ್, ಡೈರೆಕ್ಟರ್ಸ್ ಕಟ್ ಥಿಯೇಟರ್​ಗಳನ್ನು ಎಕ್ಸ್​ಪೀರಿಯನ್ಸ್ ಮಾಡಬೇಕು ಎಂದಿರುತ್ತದೆ. ಆದರೆ, ದುಬಾರಿ ಟಿಕೆಟ್ ದರದಿಂದ ಅದು ಸಾಧ್ಯವಾಗಿರುವುದಿಲ್ಲ. ಆದರೆ, ಈಗ ಆಫರ್ ಇರುವುದರಿಂದ ಕಡಿಮೆ ಬೆಲೆಯಲ್ಲಿಯೇ ಇಲ್ಲಿ ಸಿನಿಮಾ ನೋಡಬಹುದು.

ಇದನ್ನೂ ಓದಿ: ‘ಕಲ್ಕಿ 2898 ಎಡಿ’ ಶೋ ವೇಳೆ ಪಿವಿಆರ್ ಒಳಗೆ ಸುರಿಯಿತು ಮಳೆ ನೀರು; ವಿಡಿಯೋ ವೈರಲ್​

‘ಉಲಜ್’, ‘ಕಲ್ಕಿ 2898 ಎಡಿ’, ‘ಬ್ಯಾಡ್ ನ್ಯೂಸ್’, ‘ಕಿಲ್’ ಮೊದಲಾದ ಹಿಂದಿ ಸಿನಿಮಾಗಳು ವೀಕ್ಷಣೆಗೆ ಲಭ್ಯವಿದೆ. ಇಂದು (ಆಗಸ್ಟ್ 9) ‘ಭೀಮ’ ಸಿನಿಮಾ ರಿಲೀಸ್ ಆಗುತ್ತಿದೆ. ಇದಕ್ಕೆ ಟಿಕೆಟ್ ಆಫರ್ ಇರುತ್ತದೆಯೋ ಅಥವಾ ಇಲ್ಲವೋ ಅನ್ನೋದು ಸ್ಪಷ್ಟವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Fri, 9 August 24

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ