AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿವಿಆರ್​ನಲ್ಲಿ ಇನ್ಮುಂದೆ ಇರಲ್ಲ ಜಾಹೀರಾತು? ಹೊಸ ತಂತ್ರಕ್ಕೆ ಮುಂದಾದ ಸಂಸ್ಥೆ

ಪಿವಿಆರ್​-ಐನಾಕ್ಸ್​ಗಳಲ್ಲಿ ಕನಿಷ್ಠ 5-10 ನಿಮಿಷಗಳ ಕಾಲ ಕೆಲವೊಮ್ಮೆ ಅದಕ್ಕೂ ಹೆಚ್ಚಿನ ಸಮಯದಲ್ಲಿ ಜಾಹೀರಾತು ಪ್ರದರ್ಶನ ಮಾಡಲಾಗುತ್ತಿದೆ. ಇದು ಅನೇಕರಿಗೆ ಕಿರಿಕಿರಿ ಉಂಟು ಮಾಡಿದ್ದಿದೆ. ಈಗ ಇದನ್ನು ಬಂದ್ ಮಾಡಲು ಸಂಸ್ಥೆ ಮುಂದಾಗಿದೆ ಎಂದು ಮನಿ ಕಂಟ್ರೋಲ್ ವೆಬ್​ಸೈಟ್ ವರದಿ ಮಾಡಿದೆ.

ಪಿವಿಆರ್​ನಲ್ಲಿ ಇನ್ಮುಂದೆ ಇರಲ್ಲ ಜಾಹೀರಾತು? ಹೊಸ ತಂತ್ರಕ್ಕೆ ಮುಂದಾದ ಸಂಸ್ಥೆ
ಪಿವಿಆರ್​
ರಾಜೇಶ್ ದುಗ್ಗುಮನೆ
|

Updated on: Apr 25, 2024 | 7:20 AM

Share

ಪಿವಿಆರ್ ಐನಾಕ್ಸ್​ನಲ್ಲಿ (PVR Inox) ಸಿನಿಮಾ ನೋಡಲು ಹೋಗುವವರಿಗೆ ಒಂದು ಸಿಹಿ ಸುದ್ದಿ. ಇನ್ನು ಕೆಲವೇ ದಿನಗಳಲ್ಲಿ ಇಲ್ಲಿ ಜಾಹೀರು ಪ್ರಸಾರ ಸಂಪೂರ್ಣವಾಗಿ ನಿಲ್ಲಲಿದೆ. ಯಾವುದೇ ಜಾಹೀರಾತಿನ ಕಿರಿಕಿರಿ ಇಲ್ಲದೆ ನೀವು ಸಿನಿಮಾ ನೋಡಬಹುದು. ಹೀಗೊಂದು ಯೋಜನೆಯನ್ನು ಸಂಸ್ಥೆ ರೂಪಿಸುತ್ತಿದೆ. ದಿನದ ಒಟ್ಟಾರೆ ಜಾಹೀರಾತು ಪ್ರದರ್ಶನದ ಅವಧಿಯಲ್ಲಿ ಒಂದು ಶೋನ ಹೆಚ್ಚುವಾರಿಯಾಗಿ ಪ್ರದರ್ಶಿಸಬಹುದು ಅನ್ನೋದು ಸಂಸ್ಥೆಯ ಆಲೋಚನೆ ಎಂದು ವರದಿ ಆಗಿದೆ. ಇದು ನಿಜವೇ ಆದಲ್ಲಿ ಸಿನಿಪ್ರಿಯರಿಗೆ ಖುಷಿ ಪಡಲಿದ್ದಾರೆ.

ಪಿವಿಆರ್​-ಐನಾಕ್ಸ್​ಗಳಲ್ಲಿ ಕನಿಷ್ಠ 5-10 ನಿಮಿಷಗಳ ಕಾಲ ಕೆಲವೊಮ್ಮೆ ಅದಕ್ಕೂ ಹೆಚ್ಚಿನ ಸಮಯದಲ್ಲಿ ಜಾಹೀರಾತು ಪ್ರದರ್ಶನ ಮಾಡಲಾಗುತ್ತಿದೆ. ಇದು ಅನೇಕರಿಗೆ ಕಿರಿಕಿರಿ ಉಂಟು ಮಾಡಿದ್ದಿದೆ. ಟಿವಿಗಳಲ್ಲಿ ಜಾಹೀರಾತು ನೋಡಿದಂತೆ ಇಲ್ಲಿಯೂ ನೋಡಬೇಕಲ್ಲ ಎಂದು ಬೈದುಕೊಂಡವರು ಅನೇಕರಿದ್ದಾರೆ. ಈಗ ಇದನ್ನು ಬಂದ್ ಮಾಡಲು ಸಂಸ್ಥೆ ಮುಂದಾಗಿದೆ ಎಂದು ಮನಿ ಕಂಟ್ರೋಲ್ ವೆಬ್​ಸೈಟ್ ವರದಿ ಮಾಡಿದೆ.

ಬೇರೆ ಪ್ಲ್ಯಾನ್ ಏನು?

ಜಾಹೀರಾತು ಪ್ರದರ್ಶನಗಳಿಂದ ಪಿವಿಆರ್​ ಐನಾಕ್ಸ್​ಗೆ ದೊಡ್ಡ ಮಟ್ಟದ ಲಾಭ ಆಗುತ್ತಿದೆ. ಇದನ್ನು ನಿಲ್ಲಿಸಿದರೆ ಮುಂದೇನು ಎನ್ನುವ ಪ್ರಶ್ನೆ ಬರುತ್ತಿದೆ. ಜಾಹೀರಾತಿನ ಬದಲು ಒಂದು ಶೋನ ಹೆಚ್ಚುವರಿಯಾಗಿ ಪ್ರದರ್ಶಿಸಲು ಸಂಸ್ಥೆ ಮುಂದಾಗಿದೆ. ಇದರಿಂದ ಹೆಚ್ಚಿನ ಜನರು ಸಿನಿಮಾ ನೋಡಲು ಬರುತ್ತಾರೆ. ಇದರಿಂದ ಆಹಾರ ಹಾಗೂ ಪಾನೀಯಗಳ ಮಾರಾಟ ಕೂಡ ಹೆಚ್ಚುತ್ತದೆ ಅನ್ನೋದು ಸಂಸ್ಥೆಯ ಆಲೋಚನೆ.  ಇದನ್ನು ಪುಣೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲು ಪಿವಿಆರ್ ಐನಾಕ್ಸ್ ನಿರ್ಧರಿಸಿದೆಯಂತೆ. ನಂತರ ಇದನ್ನು ಇತರ ಕಡೆಗಳಿಗೂ ತರಲು ಸಂಸ್ಥೆ ಆಲೋಚಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಭರ್ಜರಿ ಆಫರ್: ಪಿವಿಆರ್-ಐನಾಕ್ಸ್​ನಲ್ಲಿ ಕೇವಲ 99 ರೂಪಾಯಿಗೆ ಸಿನಿಮಾ ವೀಕ್ಷಿಸಿ

ಇತ್ತೀಚೆಗೆ ಸಿನಿಮಾ ಲವರ್ಸ್ ಡೇ ಪ್ರಯುಕ್ತ 99 ರೂಪಾಯಿ ಟಿಕೆಟ್ ಆಫರ್ ನೀಡಲಾಗಿತ್ತು. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಥಿಯೇಟರ್​ಗೆ ಬಂದಿದ್ದರು. ಇದರಿಂದ ಸಂಸ್ಥೆಗೆ ಲಾಭ ಆಗಿದೆ. ಫುಡ್ ಹಾಗೂ ಪಾನೀಯಗಳ ಮಾರಾಟ ಕೂಡ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್