AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟ ಮಾಧವನ್ ಮಗ; ಹಿರಿಹಿರಿ ಹಿಗ್ಗಿದ ನಟ

ವೇದಾಂತ್ ಮಾಧವನ್​ ಅವರು ಚಿಕ್ಕ ವಯಸ್ಸಿನಿಂದ ಸ್ವಿಮ್ಮಿಂಗ್​ ಟ್ರೇನಿಂಗ್ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಹಲವು ಕಡೆಗಳಲ್ಲಿ ಭಾರತವನ್ನು ಅವರು ಪ್ರತಿನಿಧಿಸುತ್ತಿದ್ದಾರೆ.

ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟ ಮಾಧವನ್ ಮಗ; ಹಿರಿಹಿರಿ ಹಿಗ್ಗಿದ ನಟ
ಮಾಧವನ್
ರಾಜೇಶ್ ದುಗ್ಗುಮನೆ
|

Updated on: Apr 17, 2023 | 2:30 PM

Share

ಹೀರೋನ ಮಕ್ಕಳು ಯಾವಾಗಲೂ ಹೀರೋ ಆಗೋಕೆ ಬಯಸುತ್ತಾರೆ. ಅದೇ ನಿಟ್ಟಿನಲ್ಲಿ ಸ್ಟಾರ್ಸ್​ ಕೂಡ ಮಕ್ಕಳಿಗೆ ತರಬೇತಿ ನೀಡುತ್ತಾರೆ. ಹೋದಲ್ಲಿ ಬಂದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ. ಅವಾರ್ಡ್​ ಪಂಕ್ಷನ್​ಗಳಲ್ಲಿ ಮಕ್ಕಳನ್ನು ಕರೆತರುತ್ತಾರೆ. ಈ ಮೂಲಕ ತಮ್ಮ ಮಕ್ಕಳಿಗೆ ಹೆಚ್ಚು ಎಕ್ಸ್​ಪೋಸ್ ಸಿಗುವಂತೆ ನೋಡಿಕೊಳ್ಳುತ್ತಾರೆ. ಆದರೆ, ನಟ ಆರ್. ಮಾಧವನ್​ (R Madhavan) ಅವರು ಭಿನ್ನವಾಗಿ ನಿಲ್ಲುತ್ತಾರೆ. ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುವ ಬದಲು ಕ್ರೀಡೆಯಲ್ಲಿ ತೊಡಗಿಸಿದ್ದಾರೆ. ಮಾಧವನ್ ಮಗ ವೇದಾಂತ್ (Vedant) ಅವರು ಈಜು ಸ್ಪರ್ಧೆಯಲ್ಲಿ ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇದರಿಂದ ಇಡೀ ಭಾರತ ಹೆಮ್ಮೆ ಪಡುವಂತಾಗಿದೆ.

ವೇದಾಂತ್ ಮಾಧವನ್​ ಅವರು ಚಿಕ್ಕ ವಯಸ್ಸಿನಿಂದ ಸ್ವಿಮ್ಮಿಂಗ್​ ಟ್ರೇನಿಂಗ್ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಹಲವು ಕಡೆಗಳಲ್ಲಿ ಭಾರತವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಈಗ ಅವರು ಮಲೇಷಿಯನ್ ಇನ್ವಿಟೇಷನಲ್ ಏಜ್ ಗ್ರೂಪ್ ಚಾಂಪಿಯನ್​ಶಿಪ್​ನಲ್ಲಿ ಭಾಗಿ ಆಗಿದ್ದಾರೆ. ಇಲ್ಲಿ ಭಾರತವನ್ನು ಪ್ರತಿನಿಧಿಸಿ ಐದು ಚಿನ್ನದ ಪದಕ ಗೆದ್ದಿದ್ದಾರೆ.

ಇದನ್ನೂ ಓದಿ: ನಾನು ಸಿಂಗಲ್​’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ

ಈ ವಿಚಾರದಿಂದ ಮಾಧವನ್ ಅವರು ಹಿರಿಹಿರಿ ಹಿಗ್ಗಿದ್ದಾರೆ. ಈ ಖುಷಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ದೇವರ ಅನುಗ್ರಹ ಹಾಗೂ ನಿಮ್ಮ ಶುಭ ಹಾರೈಕೆಯಿಂದ ವೇದಾಂತ್ ಅವರು ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಮಲೇಷಿಯಾದಲ್ಲಿ ನಡೆದ ಚಾಂಪಿಯನ್​ಶಿಪ್​ನಲ್ಲಿ 50 ಮೀಟರ್, 100 ಮೀಟರ್​, 200 ಮೀಟರ್​, 400 ಮೀಟರ್ ಹಾಗೂ 1500 ಮೀಟರ್​ ಸ್ವಿಮಿಂಗ್ ರೇಸ್ ಗೆದ್ದಿದ್ದಾರೆ. ಈ ಚಾಂಪಿಯನ್​ಶಿಪ್​ ಕೌಲಾ ಲಾಂಪುರ್​ನಲ್ಲಿ ನಡೆದಿದೆ. ನನಗೆ ಹೆಮ್ಮೆ ಆಗುತ್ತಿದೆ’ ಎಂದಿದ್ದಾರೆ ಮಾಧವನ್.

View this post on Instagram

A post shared by R. Madhavan (@actormaddy)

ಮಾಧವನ್ ಅವರು ಈ ಫೋಟೋ ಪೋಸ್ಟ್ ಮಾಡುತ್ತಿದ್ದಂತೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬಂದಿದೆ. ಮಗನನ್ನು ಒಳ್ಳೆಯ ರೀತಿಯಲ್ಲಿ ಬೆಳೆಸುತ್ತಿರುವುದಕ್ಕೆ ಅನೇಕರು ಖುಷಿ ವ್ಯಕ್ತಪಡಿಸಿದ್ದಾರೆ. ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೆ ವೇದಾಂತ್ ಈಜು ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದು ಇದೇ ಮೊದಲೇನು ಅಲ್ಲ. ಈ ಮೊದಲು ಅನೇಕ ಚಾಂಪಿಯನ್​ಶಿಪ್​ನಲ್ಲಿ ಭಾಗಿಯಾಗಿ ಪದಕ ಗೆದ್ದಿದ್ದರು. 2023ರ ಖೇಲೋ ಇಂಡಿಯಾ ಟೂರ್ನಮೆಂಟ್​ನಲ್ಲಿ ವೇದಾಂತ್ ಮಹಾರಾಷ್ಟ್ರವನ್ನು ಪ್ರತಿನಿಧಿಸಿದ್ದರು. ಈ ವೇಳೆ ಅವರಿಗೆ ಐದು ಚಿನ್ನ ಹಾಗೂ ಎರಡು ಬೆಳ್ಳಿ ಪದಕ ಸಿಕ್ಕಿತ್ತು.  ಕಳೆದ ವರ್ಷ ರಿಲೀಸ್ ಆದ ಮಾಧವನ್ ನಟನೆಯ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಸಿನಿಮಾ ವಿಮರ್ಶೆಯಲ್ಲಿ ಗೆದ್ದಿತು. ಸದ್ಯ ಅವರ ಕೈಯಲ್ಲಿ ನಾಲ್ಕೈದು ಸಿನಿಮಾಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?