AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟ ಮಾಧವನ್ ಮಗ; ಹಿರಿಹಿರಿ ಹಿಗ್ಗಿದ ನಟ

ವೇದಾಂತ್ ಮಾಧವನ್​ ಅವರು ಚಿಕ್ಕ ವಯಸ್ಸಿನಿಂದ ಸ್ವಿಮ್ಮಿಂಗ್​ ಟ್ರೇನಿಂಗ್ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಹಲವು ಕಡೆಗಳಲ್ಲಿ ಭಾರತವನ್ನು ಅವರು ಪ್ರತಿನಿಧಿಸುತ್ತಿದ್ದಾರೆ.

ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟ ಮಾಧವನ್ ಮಗ; ಹಿರಿಹಿರಿ ಹಿಗ್ಗಿದ ನಟ
ಮಾಧವನ್
ರಾಜೇಶ್ ದುಗ್ಗುಮನೆ
|

Updated on: Apr 17, 2023 | 2:30 PM

Share

ಹೀರೋನ ಮಕ್ಕಳು ಯಾವಾಗಲೂ ಹೀರೋ ಆಗೋಕೆ ಬಯಸುತ್ತಾರೆ. ಅದೇ ನಿಟ್ಟಿನಲ್ಲಿ ಸ್ಟಾರ್ಸ್​ ಕೂಡ ಮಕ್ಕಳಿಗೆ ತರಬೇತಿ ನೀಡುತ್ತಾರೆ. ಹೋದಲ್ಲಿ ಬಂದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ. ಅವಾರ್ಡ್​ ಪಂಕ್ಷನ್​ಗಳಲ್ಲಿ ಮಕ್ಕಳನ್ನು ಕರೆತರುತ್ತಾರೆ. ಈ ಮೂಲಕ ತಮ್ಮ ಮಕ್ಕಳಿಗೆ ಹೆಚ್ಚು ಎಕ್ಸ್​ಪೋಸ್ ಸಿಗುವಂತೆ ನೋಡಿಕೊಳ್ಳುತ್ತಾರೆ. ಆದರೆ, ನಟ ಆರ್. ಮಾಧವನ್​ (R Madhavan) ಅವರು ಭಿನ್ನವಾಗಿ ನಿಲ್ಲುತ್ತಾರೆ. ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುವ ಬದಲು ಕ್ರೀಡೆಯಲ್ಲಿ ತೊಡಗಿಸಿದ್ದಾರೆ. ಮಾಧವನ್ ಮಗ ವೇದಾಂತ್ (Vedant) ಅವರು ಈಜು ಸ್ಪರ್ಧೆಯಲ್ಲಿ ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಇದರಿಂದ ಇಡೀ ಭಾರತ ಹೆಮ್ಮೆ ಪಡುವಂತಾಗಿದೆ.

ವೇದಾಂತ್ ಮಾಧವನ್​ ಅವರು ಚಿಕ್ಕ ವಯಸ್ಸಿನಿಂದ ಸ್ವಿಮ್ಮಿಂಗ್​ ಟ್ರೇನಿಂಗ್ ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ ಹಲವು ಕಡೆಗಳಲ್ಲಿ ಭಾರತವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಈಗ ಅವರು ಮಲೇಷಿಯನ್ ಇನ್ವಿಟೇಷನಲ್ ಏಜ್ ಗ್ರೂಪ್ ಚಾಂಪಿಯನ್​ಶಿಪ್​ನಲ್ಲಿ ಭಾಗಿ ಆಗಿದ್ದಾರೆ. ಇಲ್ಲಿ ಭಾರತವನ್ನು ಪ್ರತಿನಿಧಿಸಿ ಐದು ಚಿನ್ನದ ಪದಕ ಗೆದ್ದಿದ್ದಾರೆ.

ಇದನ್ನೂ ಓದಿ: ನಾನು ಸಿಂಗಲ್​’; ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವಿಚಾರದಲ್ಲಿ ಸ್ಪಷ್ಟನೆ ನೀಡಿದ ಪೂಜಾ ಹೆಗ್ಡೆ

ಈ ವಿಚಾರದಿಂದ ಮಾಧವನ್ ಅವರು ಹಿರಿಹಿರಿ ಹಿಗ್ಗಿದ್ದಾರೆ. ಈ ಖುಷಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ದೇವರ ಅನುಗ್ರಹ ಹಾಗೂ ನಿಮ್ಮ ಶುಭ ಹಾರೈಕೆಯಿಂದ ವೇದಾಂತ್ ಅವರು ಭಾರತಕ್ಕೆ ಐದು ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಮಲೇಷಿಯಾದಲ್ಲಿ ನಡೆದ ಚಾಂಪಿಯನ್​ಶಿಪ್​ನಲ್ಲಿ 50 ಮೀಟರ್, 100 ಮೀಟರ್​, 200 ಮೀಟರ್​, 400 ಮೀಟರ್ ಹಾಗೂ 1500 ಮೀಟರ್​ ಸ್ವಿಮಿಂಗ್ ರೇಸ್ ಗೆದ್ದಿದ್ದಾರೆ. ಈ ಚಾಂಪಿಯನ್​ಶಿಪ್​ ಕೌಲಾ ಲಾಂಪುರ್​ನಲ್ಲಿ ನಡೆದಿದೆ. ನನಗೆ ಹೆಮ್ಮೆ ಆಗುತ್ತಿದೆ’ ಎಂದಿದ್ದಾರೆ ಮಾಧವನ್.

View this post on Instagram

A post shared by R. Madhavan (@actormaddy)

ಮಾಧವನ್ ಅವರು ಈ ಫೋಟೋ ಪೋಸ್ಟ್ ಮಾಡುತ್ತಿದ್ದಂತೆ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬಂದಿದೆ. ಮಗನನ್ನು ಒಳ್ಳೆಯ ರೀತಿಯಲ್ಲಿ ಬೆಳೆಸುತ್ತಿರುವುದಕ್ಕೆ ಅನೇಕರು ಖುಷಿ ವ್ಯಕ್ತಪಡಿಸಿದ್ದಾರೆ. ಅನೇಕರು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೆ ವೇದಾಂತ್ ಈಜು ಸ್ಪರ್ಧೆಯಲ್ಲಿ ಚಿನ್ನ ಗೆದ್ದಿದ್ದು ಇದೇ ಮೊದಲೇನು ಅಲ್ಲ. ಈ ಮೊದಲು ಅನೇಕ ಚಾಂಪಿಯನ್​ಶಿಪ್​ನಲ್ಲಿ ಭಾಗಿಯಾಗಿ ಪದಕ ಗೆದ್ದಿದ್ದರು. 2023ರ ಖೇಲೋ ಇಂಡಿಯಾ ಟೂರ್ನಮೆಂಟ್​ನಲ್ಲಿ ವೇದಾಂತ್ ಮಹಾರಾಷ್ಟ್ರವನ್ನು ಪ್ರತಿನಿಧಿಸಿದ್ದರು. ಈ ವೇಳೆ ಅವರಿಗೆ ಐದು ಚಿನ್ನ ಹಾಗೂ ಎರಡು ಬೆಳ್ಳಿ ಪದಕ ಸಿಕ್ಕಿತ್ತು.  ಕಳೆದ ವರ್ಷ ರಿಲೀಸ್ ಆದ ಮಾಧವನ್ ನಟನೆಯ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಸಿನಿಮಾ ವಿಮರ್ಶೆಯಲ್ಲಿ ಗೆದ್ದಿತು. ಸದ್ಯ ಅವರ ಕೈಯಲ್ಲಿ ನಾಲ್ಕೈದು ಸಿನಿಮಾಗಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ