AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಹಣ ಉಳಿಸಲು ಇಂಥ ಕೆಲಸ ಮಾಡಿದ್ರಾ​ ನಾಗ ಚೈತನ್ಯ-ರಾಶಿ ಖನ್ನಾ? ಇದು ಟಾಲಿವುಡ್​ ಗಾಸಿಪ್​

ರಷ್ಯಾದ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಲವು ಆಫರ್​ ನೀಡಲಾಗಿದೆ. ಅದರ ಲಾಭ ಪಡೆಯಲು ‘ಥ್ಯಾಂಕ್​ ಯೂ’ ಚಿತ್ರತಂಡ ಕೊರೆಯುವ ಚಳಿಯಲ್ಲಿ ಶೂಟಿಂಗ್​ ಮಾಡಿದೆ ಎಂಬ ಗಾಸಿಪ್​ ಹಬ್ಬಿದೆ.

ವಿದೇಶದಲ್ಲಿ ಹಣ ಉಳಿಸಲು ಇಂಥ ಕೆಲಸ ಮಾಡಿದ್ರಾ​ ನಾಗ ಚೈತನ್ಯ-ರಾಶಿ ಖನ್ನಾ? ಇದು ಟಾಲಿವುಡ್​ ಗಾಸಿಪ್​
ರಾಶಿ ಖನ್ನಾ, ನಾಗ ಚೈತನ್ಯ
TV9 Web
| Edited By: |

Updated on:Feb 06, 2022 | 9:15 AM

Share

ಸಮಂತಾ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಬಳಿಕ ನಟ ನಾಗ ಚೈತನ್ಯ (Naga Chaitanya) ಅವರು ತಮ್ಮ ವೃತ್ತಿಬದುಕಿನ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. ಅವರು ಅಭಿನಯಿಸಿದ ‘ಬಂಗಾರ‍್ರಾಜು’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಯಶಸ್ವಿ ಆಯಿತು. ಅದರ ಖುಷಿಯಲ್ಲೇ ಅವರು ಬೇರೆ ಸಿನಿಮಾಗಳ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ರಾಶಿ ಖನ್ನಾ (Raashi Khanna) ಜೊತೆ ನಾಗ ಚೈತನ್ಯ ಅಭಿನಯಿಸಿರುವ ‘ಥ್ಯಾಂಕ್​ ಯೂ’ (Thank You Movie) ಸಿನಿಮಾದ ಶೂಟಿಂಗ್​ ರಷ್ಯಾದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ಟಾಲಿವುಡ್​ ಅಂಗಳದಲ್ಲಿ ಒಂದು ಗಾಸಿಪ್​ ಹರಿದಾಡುತ್ತಿದೆ. ದುಡ್ಡು ಉಳಿಸುವ ಸಲುವಾಗಿ ನಾಗ ಚೈತನ್ಯ ಮತ್ತು ರಾಶಿ ಖನ್ನಾ ಅವರು ಬಹಳ ರಿಸ್ಕ್​ ತೆಗೆದುಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ರಷ್ಯಾದಲ್ಲಿ ಹಿಮದ ವಾತಾವರಣ ಇದೆ. ಮೈನಸ್​ 12-18 ಡಿಗ್ರಿ ಚಳಿಯಲ್ಲಿ ಕಲಾವಿದರು ಅಭಿನಯಿಸಿದ್ದಾರೆ. ನಿರ್ಮಾಪಕರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಈ ರೀತಿ ರಿಸ್ಕ್​ ತೆಗೆದುಕೊಳ್ಳಲಾಗಿದೆ ಎಂಬ ಗಾಸಿಪ್​ ಹಬ್ಬಿದೆ. ಆದರೆ ಈ ಬಗ್ಗೆ ಚಿತ್ರತಂಡದವರು ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.

ಮೂಲಗಳ ಪ್ರಕಾರ, ರಷ್ಯಾದಲ್ಲಿ ಭಾಗಶಃ ದೃಶ್ಯಗಳ ಶೂಟಿಂಗ್​ ಮಾಡಿದರೆ ಚಿತ್ರೀಕರಣಕ್ಕೆ ಖರ್ಚಾದ ಮೊತ್ತದಲ್ಲಿ ಶೇ.90ರಷ್ಟು ಹಣವನ್ನು ಭರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ರಷ್ಯಾದ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ಆಫರ್​ ನೀಡಲಾಗಿದೆ. ಸಿನಿಮಾ ಸಿದ್ಧವಾದ ಬಳಿಕ ಅದನ್ನು ಅಲ್ಲಿನ ಅಧಿಕಾರಿಗಳಿಗೆ ತೋರಿಸಬೇಕು. ಬಳಿಕ ಅವರು ರೀಫಂಡ್​ ಮಾಡುತ್ತಾರೆ. ಸಿನಿಮಾದಲ್ಲಿ ರಷ್ಯಾದ ಪ್ರೇಕ್ಷಣೀಯ ಸ್ಥಳಗಳನ್ನು ನೋಡಿದ ಜನರು ಅಲ್ಲಿಗೆ ಪ್ರವಾಸಕ್ಕೆ ಬರುತ್ತಾರೆ ಎಂಬುದು ಈ ಯೋಜನೆಯ ಉದ್ದೇಶ. ಅದರ ಲಾಭ ಪಡೆಯಲು ‘ಥ್ಯಾಂಕ್​ ಯೂ’ ಚಿತ್ರತಂಡ ಕೊರೆಯುವ ಚಳಿಯಲ್ಲಿ ಶೂಟಿಂಗ್​ ಮಾಡಿದೆ ಎಂದು ಹೇಳಲಾಗುತ್ತಿದೆ. ಇದರ ಸತ್ಯಾಸತ್ಯತೆ ಬಗ್ಗೆ ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ.

‘ಬಂಗಾರ‍್ರಾಜು’ ಚಿತ್ರಕ್ಕೆ ಗೆಲುವು:

ನಾಗಾರ್ಜುನ ಹಾಗೂ ನಾಗ ಚೈತನ್ಯ ನಟಿಸಿರುವ ‘ಬಂಗಾರ‍್ರಾಜು’ ಚಿತ್ರ ಜನವರಿ 14ರಂದು ತೆರೆಕಂಡಿತ್ತು. ಈ ವರ್ಷದ ಸೂಪರ್​ ಹಿಟ್​ ಸಿನಿಮಾಗಳಲ್ಲಿ ಈ ಚಿತ್ರ ಕೂಡ ಸ್ಥಾನ ಪಡೆದುಕೊಂಡಿದೆ. ಈ ಚಿತ್ರ ರಿಲೀಸ್​ಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಆದರೆ ನಾಯಕ ನಟ ನಾಗಾರ್ಜುನ ಅವರು ಈ ಚಿತ್ರವನ್ನು ಕೊರೊನಾ ನಡುವೆಯೂ ಸಂಕ್ರಾಂತಿಯ ಸಂಭ್ರಮದಲ್ಲಿ ರಿಲೀಸ್ ಮಾಡುವುದಾಗಿ ತಿಳಿಸಿದ್ದರು. ಬಿಗ್ ಬಜೆಟ್ ಹಾಗೂ ಸ್ಟಾರ್ ನಟರ ಚಿತ್ರಗಳೆಲ್ಲವೂ ರಿಲೀಸ್​​ನಿಂದ ಹಿಂದೆ ಸರಿಯುತ್ತಿದ್ದ ವೇಳೆ ಅವರ ನಿರ್ಧಾರ ಹಲವರಿಗೆ ಅಚ್ಚರಿ ಮೂಡಿಸಿತ್ತು. ಆದರೆ ಬಾಕ್ಸ್​​ ಆಫೀಸ್​ನಲ್ಲೂ ಭರಪೂರ ಬೆಳೆ ತೆಗೆಯುವ ಮೂಲಕ ಎಲ್ಲಾ ಅಡ್ಡಿ ಆತಂಕಗಳನ್ನು ಮೀರಿ ಚಿತ್ರ ಯಶಸ್ವಿ ಆಯಿತು. ತೆರೆಕಂಡ ಮೂರು ವಾರಗಳ ಒಳಗೆ ‘ಬಂಗಾರ‍್ರಾಜು’ ಬರೋಬ್ಬರಿ 76 ಕೋಟಿ ರೂಪಾಯಿಮ ಬಾಚಿಕೊಂಡಿದೆ.

ಇದನ್ನೂ ಓದಿ:

ವಿಚ್ಛೇದನದ ನಂತರವೂ ಸಮಂತಾ ಮೇಲೆ ಕಡಿಮೆಯಾಗಿಲ್ಲ ಗೌರವ; ಸ್ಯಾಮ್ ಬಗ್ಗೆ ನಾಗ ಚೈತನ್ಯ ಹಂಚಿಕೊಂಡ್ರು ಅಚ್ಚರಿಯ ಮಾಹಿತಿ

ಮತ್ತೆ ನಾಗ ಚೈತನ್ಯ ಜೊತೆ ಸಂಸಾರ ಮಾಡ್ತಾರಾ ಸಮಂತಾ? ವಿಚ್ಛೇದನದ ಪೋಸ್ಟ್​ ಏಕಾಏಕಿ ಡಿಲೀಟ್​

Published On - 9:07 am, Sun, 6 February 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ