AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ರಚಿತಾ ರಾಮ್?

Rachita Ram: ಕನ್ನಡದ ಜನಪ್ರಿಯ ನಟಿ ರಚಿತಾ ರಾಮ್ ಇತ್ತೀಚೆಗಷ್ಟೆ ತಮಿಳು ಸಿನಿಮಾ ಒಂದರಲ್ಲಿ ಸಖತ್ ಆಗಿ ಮಿಂಚಿದ್ದಾರೆ. ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾನಲ್ಲಿ ರಚಿತಾ ರಾಮ್ ಅವರ ಪಾತ್ರ ಸಖತ್ ಹಿಟ್ ಆಗಿದೆ. ಇದೀಗ ಆ ಸಿನಿಮಾದ ನಿರ್ದೇಶಕ ಲೋಕೇಶ್ ಕನಗರಾಜ್ ಅವರೊಟ್ಟಿಗೆ ಸಿನಿಮಾನಲ್ಲಿ ನಟಿಸಲಿದ್ದಾರೆ ರಚಿತಾ ರಾಮ್.

ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ರಚಿತಾ ರಾಮ್?
Lokesh Rachita
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 30, 2025 | 10:44 PM

Share

ಕನ್ನಡದ ನಟಿ ರಚಿತಾ ರಾಮ್ ಅವರು ‘ಕೂಲಿ’ ಸಿನಿಮಾದಲ್ಲಿ ಒಂದು ಪವರ್​ಫುಲ್ ಪಾತ್ರ ಮಾಡಿದ್ದು ಗೊತ್ತೇ ಇದೆ. ಈ ಚಿತ್ರದಲ್ಲಿ ಅವರು ಕಲ್ಯಾಣಿ ಹೆಸರಿನ ಪಾತ್ರ ಮಾಡಿದ್ದರು. ಈ ಚಿತ್ರದಲ್ಲಿ ಅವರದ್ದು ವಿಲನ್ ನೆಗೆಟಿವ್ ಶೇಡ್​ನ ಪಾತ್ರ ಎಂಬುದು ವಿಶೇಷ. ಈಗ ಅವರು ದೊಡ್ಡ ಪರದೆಮೇಲೆ ಲೋಕೇಶ್ ಕನಗರಾಜ್ ಜೊತೆ ರೊಮ್ಯಾನ್ಸ್ ಮಾಡಲು ಸಜ್ಜಾಗಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಲೋಕೇಶ್ ಕನಗರಾಜ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರು ತಮಿಳಿನ ಖ್ಯಾತ ನಿರ್ದೇಶಕರು ಕೂಡ ಹೌದು. ವಿಶೇಷ ಎಂದರೆ ಅವರು ಈಗ ಹೀರೋ ಆಗುತ್ತಿದ್ದಾರೆ. ಅರುಣ್ ಮಾತೇಶ್ವರನ್ ನಿರ್ದೇಶನದ ಸಿನಿಮಾದಲ್ಲಿ ಲೋಕೇಶ್ ನಟಿಸುತ್ತಿದ್ದಾರೆ. ಇದಕ್ಕೆ ರಚಿತಾ ನಾಯಕಿ ಎಂಬ ವರದಿಗಳು ಬಂದಿವೆ.

ಲೋಕೇಶ್ ಅವರು ಹೀರೋ ಆಗಲು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವರದಿಗಳು ಹೇಳುವಂತೆ ಅವರು  ಥೈಲ್ಯಾಂಡ್​ಗೆ ತೆರಳಿದ್ದಾರೆ. ಅಲ್ಲಿ, ಅವರು ನಟನೆಗೆ ತರಬೇತಿ ಪಡೆಯುತ್ತಿದ್ದಾರೆ. ಹೀಗಿರುವಾಗಲೇ ರಚಿತಾ ರಾಮ್ ಅವರು ಈ ಚಿತ್ರಕ್ಕೆ ನಾಯಕಿ ಎನ್ನುವ ವಿಚಾರ ಹರಿದಾಡಿದೆ.

ಲೋಕೇಶ್ ಕನಗರಾಜ್ ಅವರೇ ‘ಕೂಲಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅವರು ರಚಿತಾಗೆ ಪವರ್​ಫುಲ್ ಪಾತ್ರವನ್ನೇ ನೀಡಿದ್ದಾರೆ. ಈ ಪಾತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಈಗ ಅವರು ಕಾಲಿವುಡ್​​ನಲ್ಲಿ ನಾಯಕಿ ಆಗಿ ಮಿಂಚಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ:ಕೂಲಿ ಸಿನಿಮಾದಲ್ಲಿ ಮಿಂಚಿದ ರಚಿತಾ ರಾಮ್: ಸಿಕ್ತು ಮೆಚ್ಚುಗೆ

ದಕ್ಷಿಣ ಭಾರತದಲ್ಲಿ ಈ ಹೊಸ ಸಿನಿಮಾದ ಶೂಟ್ ನಡೆಯಲಿದೆ. ಒಂದೇ ಶೆಡ್ಯೂಲ್​ನಲ್ಲಿ ಶೂಟ್ ಮುಗಿಸೋ ಪ್ಲ್ಯಾನ್ ಇದೆ. ಲೋಲೇಶ್ ಅವರು ಇದಾದ ಬಳಿಕ ಬಾಲಿವುಡ್ ನಟ ಆಮಿರ್ ಖಾನ್ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎಂಬ ಬಗ್ಗೆ  ವರದಿ ಇದೆ. ರಚಿತಾ ಅವರು ಲೋಕೇಶ್ ಸಿನಿಮಾದ ಭಾಗ ಆಗುತ್ತಿರುವ ವಿಚಾರ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ರಚಿತಾ ರಾಮ್ ಅವರು ಇತ್ತೀಚೆಗೆ ಅನುಶ್ರೀ ಅವರ ವಿವಾಹದಲ್ಲಿ ಕಾಣಿಸಿಕೊಂಡಿದ್ದರು. ಆ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆದಿದ್ದನ್ನು ಕಾಣಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ