AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ ಚಿತ್ರದಿಂದ ಪ್ರಭಾಸ್​ಗೆ ಆದ ದೊಡ್ಡ ನಷ್ಟ ಏನು? ಅಂತೂ ಬಾಯ್ಬಿಟ್ಟ ಪ್ಯಾನ್​ ಇಂಡಿಯಾ ಸ್ಟಾರ್​

ಪ್ರಭಾಸ್​ ನಟಿಸುವ ಬೇರೆ ಎಲ್ಲ ಸಿನಿಮಾಗಳನ್ನು ‘ಬಾಹುಬಲಿ’ಗೆ ಜನರು ಹೋಲಿಸಲು ಆರಂಭಿಸಿದ್ದಾರೆ. ಆ ಒತ್ತಡದ ಕಾರಣಕ್ಕೆ ಪ್ರಭಾಸ್​ ಅವರಿಗೆ ಒಂದು ರೀತಿಯಲ್ಲಿ ಹಿನ್ನಡೆ ಆಗುತ್ತಿದೆ.

‘ಬಾಹುಬಲಿ’ ಚಿತ್ರದಿಂದ ಪ್ರಭಾಸ್​ಗೆ ಆದ ದೊಡ್ಡ ನಷ್ಟ ಏನು? ಅಂತೂ ಬಾಯ್ಬಿಟ್ಟ ಪ್ಯಾನ್​ ಇಂಡಿಯಾ ಸ್ಟಾರ್​
ಪ್ರಭಾಸ್
TV9 Web
| Edited By: |

Updated on: Mar 09, 2022 | 12:05 PM

Share

ಇಡೀ ವಿಶ್ವವೇ ತೆಲುಗು ಚಿತ್ರರಂಗದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಎಂದರೆ ಅದು ‘ಬಾಹುಬಲಿ’. ಆ ಚಿತ್ರದ ಯಶಸ್ಸಿನ ಬಳಿಕ ನಟ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಬೆಳೆದರು. ನಿರ್ದೇಶಕ ರಾಜಮೌಳಿ ಅವರು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡರು. ಸಾವಿರಾರು ಕೋಟಿ ರೂಪಾಯಿ ಆದಾಯ ಗಳಿಸುವಲ್ಲಿ ಆ ಸಿನಿಮಾ ಯಶಸ್ವಿ ಆಯಿತು. ಇಷ್ಟೆಲ್ಲ ಲಾಭ ಮಾಡಿಕೊಟ್ಟ ‘ಬಾಹುಬಲಿ’ (Baahubali Movie) ಚಿತ್ರದಿಂದ ಪ್ರಭಾಸ್​ಗೆ ಒಂದು ನಷ್ಟ ಕೂಡ ಆಗಿದೆ. ಅದೇನು ಎಂಬುದನ್ನು ಈಗ ಅವರ ಬಾಯಿ ಬಿಟ್ಟಿದ್ದಾರೆ. ಸದ್ಯ ಪ್ರಭಾಸ್​ ಅಭಿನಯದ ‘ರಾಧೆ ಶ್ಯಾಮ್​’ (Radhe Shyam) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್​ 11ರಂದು ವಿಶ್ವಾದ್ಯಂತ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಪ್ರಭಾಸ್​ (Prabhas) ಅವರು ಅನೇಕ ಕಡೆಗಳಲ್ಲಿ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ‘ಬಾಹುಬಲಿ’ ಸಿನಿಮಾದಿಂದ ಆದ ಪ್ಲಸ್​ ಮತ್ತು ಮೈನಸ್​ಗಳ ಬಗ್ಗೆ ಅವರು ಬಾಯಿ ಬಿಟ್ಟಿದ್ದಾರೆ.

‘ಬಾಹುಬಲಿ’ ಸಿನಿಮಾದಿಂದ ಪ್ರಭಾಸ್​ಗೆ ಕೀರ್ತಿ ಸಿಕ್ಕಿತು. ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳೆಲ್ಲ ಕಾಲ್​ಶೀಟ್​ ಪಡೆಯಲು ಅವರ ಮನೆ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದ್ದು ಕೂಡ ನಿಜ. ಆದರೆ ಅದೇ ‘ಬಾಹುಬಲಿ’ಯಿಂದ ಪ್ರಭಾಸ್​ ಅವರ ಜೀವನದಲ್ಲಿ ಒತ್ತಡ ಹೆಚ್ಚಿತು. ಅದು ಅವರಿಗೆ ಆದ ದೊಡ್ಡ ನಷ್ಟ!

ಹೌದು, ‘ಬಾಹುಬಲಿ’ ಬಳಿಕ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುವುದು ಅನಿವಾರ್ಯ ಆಯಿತು. ಎಲ್ಲ ಸಿನಿಮಾಗಳು ಕೂಡ ‘ಬಾಹುಬಲಿ’ ರೀತಿಯೇ ಅದ್ಭುತವಾಗಿ ಕಲೆಕ್ಷನ್​ ಮಾಡಬೇಕು ಎಂದು ಜನರು ನಿರೀಕ್ಷಿಸಲು ಆರಂಭಿಸಿದರು. ಆ ಒತ್ತಡವನ್ನು ಎದುರಿಸುವುದು ಸುಲಭವಲ್ಲ ಎಂಬ ಅಭಿಪ್ರಾಯನ್ನು ಪ್ರಭಾಸ್​ ವ್ಯಕ್ತಪಡಿಸಿದ್ದಾರೆ. ಬೇರೆ ಎಲ್ಲ ಸಿನಿಮಾಗಳನ್ನು ‘ಬಾಹುಬಲಿ’ಗೆ ಜನರು ಹೋಲಿಸಲು ಆರಂಭಿಸಿದ್ದಾರೆ. ಆ ಒತ್ತಡದ ಕಾರಣಕ್ಕೆ ಪ್ರಭಾಸ್​ ಅವರಿಗೆ ಬೇರೆ ಸಿನಿಮಾದಲ್ಲಿ ಹಿನ್ನಡೆ ಆಗುತ್ತಿದೆ.

‘ಬಾಹುಬಲಿ’ ಚಿತ್ರದಿಂದ ಪ್ರಭಾಸ್​ಗೆ ಹೊಸ ಐಡೆಂಟಿಟಿ ಸಿಕ್ಕಿತು. ಎಲ್ಲೇ ಹೋದರೂ ಅವರನ್ನು ಬಾಹುಬಲಿ ಎಂದೇ ಜನರು ಗುರುತಿಸುತ್ತಾರೆ. ಆ ಬಗ್ಗೆ ಅವರಿಗೆ ಖುಷಿ ಇದೆ. ಆದರೆ ಮತ್ತೆ ಮತ್ತೆ ಪ್ರಭಾಸ್​ ಅವರು ಆ ರೀತಿಯ ಆ್ಯಕ್ಷನ್​ ಸಿನಿಮಾಗಳನ್ನೇ ಮಾಡಬೇಕು ಅಂತ ಜನರು ಬಯಸುತ್ತಾರೆ. ‘ಅಂಥ ಕಮರ್ಷಿಯಲ್​ ಸಿನಿಮಾಗಳನ್ನು ಮಾಡುವುದು ಸುಲಭ. ಆದರೆ ನಾನು ಪ್ರಯೋಗ ಮಾಡಲು ಬಯಸುತ್ತೇನೆ’ ಎಂದು ಪ್ರಭಾಸ್​ ಹೇಳಿದ್ದಾರೆ.

‘ಸಾಹೋ’ ಮತ್ತು ‘ಬಾಹುಬಲಿ’ ಸಿನಿಮಾದಲ್ಲಿ ಪ್ರಭಾಸ್​ ಅವರು ಆ್ಯಕ್ಷನ್​ ಹೀರೋ ಆಗಿ ಕಾಣಿಸಿಕೊಂಡಿದ್ದರು. ಈಗ ‘ರಾಧೆ ಶ್ಯಾಮ್​’ ಚಿತ್ರದಲ್ಲಿ ಅವರು ಸಖತ್​ ಡಿಫರೆಂಟ್​ ಆಗಿ ಜನರ ಮುಂದೆ ಬರುತ್ತಿದ್ದಾರೆ. ಪೂಜಾ ಹೆಗ್ಡೆ ಜೊತೆ ನಟಿಸಿರುವ ಅವರು ಲವರ್​ ಬಾಯ್​ ಗೆಟಪ್​ ಧರಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ನೋಡಿದರೆ ಇದು ಯಾವ ರೀತಿಯ ಸಿನಿಮಾ ಎಂಬುದರ ಸುಳಿವು ಸಿಗುತ್ತದೆ.

ಸಿನಿಮಾ ಕ್ಷೇತ್ರದಲ್ಲಿ ತಮ್ಮ ಮುಂದಿನ ಯೋಜನೆಗಳ ಬಗ್ಗೆಯೂ ಪ್ರಭಾಸ್​ ಬಾಯಿ ಬಿಟ್ಟಿದ್ದಾರೆ. ‘ಇಂಡಿಯನ್​ ಎಕ್ಸ್​ಪ್ರೆಸ್​’ಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರಗಳನ್ನು ಅವರು ಹಂಚಿಕೊಂಡಿದ್ದಾರೆ. ‘ಎಲ್ಲ ಸಿನಿಮಾಗಳನ್ನೂ ದೊಡ್ಡ ಬಜೆಟ್​ನಲ್ಲೇ ಮಾಡಬೇಕು ಅಂತೇನಿಲ್ಲ. ಮುಂದೆ ನಾನೊಂದು ಕಾಮಿಡಿ ಸಿನಿಮಾ ಮಾಡಬೇಕು ಎಂದುಕೊಂಡಿದ್ದೇನೆ. ಎರಡು-ಮೂರು ದೊಡ್ಡ ಚಿತ್ರಗಳ ಬಳಿಕ ಏನಾದರೂ ಭಿನ್ನವಾಗಿ ಮಾಡಬೇಕು. ಈಗ ಅಲ್ಲದೇ ಇದ್ದರೂ ಮುಂದೊಂದು ದಿನ ನಾನು ಆರ್ಟ್​ ಸಿನಿಮಾ ಮಾಡಬಹುದು. ತುಂಬ ಚಿಕ್ಕದಾದ ಒಂದು ರಿಯಲಿಸ್ಟಿಕ್​ ಸಿನಿಮಾ ಮಾಡಬೇಕು’ ಎಂದು ಪ್ರಭಾಸ್​ ಹೇಳಿದ್ದಾರೆ.

ಇದನ್ನೂ ಓದಿ:

ಪ್ಯಾನ್​ ಇಂಡಿಯಾ ಸ್ಟಾರ್​ ಆದ್ರೂ ಪ್ರಭಾಸ್​ಗೆ ಇದೆ ಭಾಷೆ ಸಮಸ್ಯೆ; ಹೌದೆಂದು ಒಪ್ಪಿಕೊಂಡ ನಟ

ಕಿಸ್​ ಮತ್ತು ಶರ್ಟ್​ ಲೆಸ್​ ದೃಶ್ಯದಲ್ಲಿ ಪ್ರಭಾಸ್​ಗೆ ಕಿರಿಕಿರಿ; ಈ ವಿಚಾರದಲ್ಲಿ ಅವರದ್ದು ಒಂದೇ ಒಂದು ಕಂಡೀಷನ್​

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ