AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಪೂಜಾ ಹೆಗ್ಡೆಗೆ ಕಳೆಯಿತು ಕೊರೊನಾ ಕಂಟಕ; ನಿಟ್ಟುಸಿರು ಬಿಟ್ಟ ಅಭಿಮಾನಿಗಳು

Coronavirus: ನಿಮ್ಮೆಲ್ಲರ ಹಾರೈಕೆಯಿಂದ ಚಮತ್ಕಾರ ಆಗಿದೆ ಎನಿಸುತ್ತದೆ. ಅದಕ್ಕಾಗಿ ಸದಾ ಋಣಿ ಆಗಿರುತ್ತೇನೆ. ಎಲ್ಲರೂ ಸೇಫ್​ ಆಗಿರಿ ಎಂದು ನಟಿ ಪೂಜಾ ಹೆಗ್ಡೆ ಹೇಳಿದ್ದಾರೆ.

Pooja Hegde: ಪೂಜಾ ಹೆಗ್ಡೆಗೆ ಕಳೆಯಿತು ಕೊರೊನಾ ಕಂಟಕ; ನಿಟ್ಟುಸಿರು ಬಿಟ್ಟ ಅಭಿಮಾನಿಗಳು
ಕೊರೊನಾದಿಂದ ಚೇತರಿಸಿಕೊಂಡ ಪೂಜಾ ಹೆಗ್ಡೆ
ಮದನ್​ ಕುಮಾರ್​
| Edited By: |

Updated on: May 06, 2021 | 3:21 PM

Share

ಸದಾ ಕಾಲ ಸಿನಿಮಾ ಚಟುವಟಿಕೆಗಳ ಸಲುವಾಗಿ ಹೊರಗಡೆ ಸುತ್ತಾಡುವ ಸೆಲೆಬ್ರಿಟಿಗಳಿಗೆ ಕೊರೊನಾ ವೈರಸ್​ ಹೆಚ್ಚು ಕಾಟ ಕೊಡುತ್ತಿದೆ. ಟಾಲಿವುಡ್​ನ ಅನೇಕ ಕಲಾವಿದರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಒಂದು ವಾರದ ಹಿಂದೆ ನಟಿ ಪೂಜಾ ಹೆಗ್ಡೆ ಕೂಡ ಕೊರೊನಾ ಸೋಂಕು ತಗುಲಿಸಿಕೊಂಡಿದ್ದರು. ಆದರೆ ಈಗ ಅವರಿಗೆ ನೆಗೆಟಿವ್​ ವರದಿ ಬಂದಿದೆ. ಆ ಸಿಹಿ ಸುದ್ದಿಯನ್ನು ಅವರು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

‘ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಚೆನ್ನಾಗಿ ಚೇತರಿಸಿಕೊಂಡಿದ್ದೇನೆ. ಕೊನೆಗೂ ನೆಗೆಟಿವ್​ ರಿಪೋರ್ಟ್​ ಬಂದಿದೆ. ಕೊರೊನಾದ ಹಿಂಬದಿಗೆ ಒದ್ದು ಕಳಿಸಿದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಚಮತ್ಕಾರ ಆಗಿದೆ ಎನಿಸುತ್ತದೆ. ಅದಕ್ಕಾಗಿ ಸದಾ ಋಣಿ ಆಗಿರುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಪೂಜಾ ಹೆಗ್ಡೆ ಹೇಳಿದ್ದಾರೆ.

ಕರ್ನಾಟಕ ಮೂಲದವರಾದ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಟಾಲಿವುಡ್​ ಮತ್ತು ಬಾಲಿವುಡ್​ನಲ್ಲಿ ಅವರು ಮಿಂಚುತ್ತಿದ್ದಾರೆ. ಪ್ರಭಾಸ್​ ನಟನೆಯ ರಾಧೆ ಶ್ಯಾಮ್​ ಚಿತ್ರಕ್ಕೆ ಪೂಜಾ ನಾಯಕಿ. ಆಚಾರ್ಯ, ಸರ್ಕಸ್​, ಮೋಸ್ಟ್​ ಎಲಿಜಬಲ್​ ಬ್ಯಾಚುಲರ್​ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ಸದ್ಯ ಕೊರೊನಾ ಕಾರಣದಿಂದ ಅವರು ಗ್ಯಾಪ್​ ತೆಗೆದುಕೊಂಡಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಕೊರೊನಾದಿಂದ ಮೃತರಾಗುತ್ತಿದ್ದಾರೆ. ಎಷ್ಟೇ ಹಣ, ಪ್ರಭಾವ ಇದ್ದರೂ ಕೊವಿಡ್​ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚಿಕಿತ್ಸೆಗಾಗಿ ಎಲ್ಲರೂ ಹರಸಾಹಸ ಪಡಬೇಕಾಗಿದೆ. ಆದ್ದರಿಂದ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್​ ಆಗಿದೆ ಎಂದು ಗೊತ್ತಾದ ತಕ್ಷಣ ಅವರ ಅಭಿಮಾನಿಗಳು ತುಂಬ ಆತಂಕಗೊಂಡಿದ್ದರು. ಪ್ರತಿ ದಿನ ಪೂಜಾ ಅವರ ಹೆಲ್ತ್​ ಅಪ್​ಡೇಟ್​ ತಿಳಿದುಕೊಳ್ಳಲು ಫ್ಯಾನ್ಸ್​ ಕಾಯುತ್ತಿದ್ದರು. ಅಂತಿಮವಾಗಿ ಎಲ್ಲರಿಗೂ ಪೂಜಾ ಗುಡ್​ ನ್ಯೂಸ್​ ನೀಡಿದ್ದಾರೆ.

ಕೆ.ವಿ. ಆನಂದ್​, ಕೋಟಿ ರಾಮು, ರೇಣುಕಾ ಶರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕೊರೊನಾದಿಂದ ಮೃತರಾಗಿದ್ದಾರೆ. ಪ್ರತಿದಿನ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್​ ಮತ್ತು ವೆಂಟಿಲೇಟರ್​ಗಳ ಕೊರತೆ ಕೂಡ ಇದೆ. ಹಾಗಾಗಿ ಆದಷ್ಟು ಮನೆಯಲ್ಲೇ ಇದ್ದುಕೊಂಡು ಸೇಫ್​ ಆಗಿರಿ ಎಂದು ಬಹುತೇಕ ಸೆಲೆಬ್ರಿಟಿಗಳು ತಮ್ಮ ಅಭಿಮಾನಿಗಳಿಗೆ ಕಿವಿಮಾತು ಹೇಳುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ