AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಪೂಜಾ ಹೆಗ್ಡೆಗೆ ಕಳೆಯಿತು ಕೊರೊನಾ ಕಂಟಕ; ನಿಟ್ಟುಸಿರು ಬಿಟ್ಟ ಅಭಿಮಾನಿಗಳು

Coronavirus: ನಿಮ್ಮೆಲ್ಲರ ಹಾರೈಕೆಯಿಂದ ಚಮತ್ಕಾರ ಆಗಿದೆ ಎನಿಸುತ್ತದೆ. ಅದಕ್ಕಾಗಿ ಸದಾ ಋಣಿ ಆಗಿರುತ್ತೇನೆ. ಎಲ್ಲರೂ ಸೇಫ್​ ಆಗಿರಿ ಎಂದು ನಟಿ ಪೂಜಾ ಹೆಗ್ಡೆ ಹೇಳಿದ್ದಾರೆ.

Pooja Hegde: ಪೂಜಾ ಹೆಗ್ಡೆಗೆ ಕಳೆಯಿತು ಕೊರೊನಾ ಕಂಟಕ; ನಿಟ್ಟುಸಿರು ಬಿಟ್ಟ ಅಭಿಮಾನಿಗಳು
ಕೊರೊನಾದಿಂದ ಚೇತರಿಸಿಕೊಂಡ ಪೂಜಾ ಹೆಗ್ಡೆ
ಮದನ್​ ಕುಮಾರ್​
| Edited By: |

Updated on: May 06, 2021 | 3:21 PM

Share

ಸದಾ ಕಾಲ ಸಿನಿಮಾ ಚಟುವಟಿಕೆಗಳ ಸಲುವಾಗಿ ಹೊರಗಡೆ ಸುತ್ತಾಡುವ ಸೆಲೆಬ್ರಿಟಿಗಳಿಗೆ ಕೊರೊನಾ ವೈರಸ್​ ಹೆಚ್ಚು ಕಾಟ ಕೊಡುತ್ತಿದೆ. ಟಾಲಿವುಡ್​ನ ಅನೇಕ ಕಲಾವಿದರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಒಂದು ವಾರದ ಹಿಂದೆ ನಟಿ ಪೂಜಾ ಹೆಗ್ಡೆ ಕೂಡ ಕೊರೊನಾ ಸೋಂಕು ತಗುಲಿಸಿಕೊಂಡಿದ್ದರು. ಆದರೆ ಈಗ ಅವರಿಗೆ ನೆಗೆಟಿವ್​ ವರದಿ ಬಂದಿದೆ. ಆ ಸಿಹಿ ಸುದ್ದಿಯನ್ನು ಅವರು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

‘ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಚೆನ್ನಾಗಿ ಚೇತರಿಸಿಕೊಂಡಿದ್ದೇನೆ. ಕೊನೆಗೂ ನೆಗೆಟಿವ್​ ರಿಪೋರ್ಟ್​ ಬಂದಿದೆ. ಕೊರೊನಾದ ಹಿಂಬದಿಗೆ ಒದ್ದು ಕಳಿಸಿದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಚಮತ್ಕಾರ ಆಗಿದೆ ಎನಿಸುತ್ತದೆ. ಅದಕ್ಕಾಗಿ ಸದಾ ಋಣಿ ಆಗಿರುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಪೂಜಾ ಹೆಗ್ಡೆ ಹೇಳಿದ್ದಾರೆ.

ಕರ್ನಾಟಕ ಮೂಲದವರಾದ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಟಾಲಿವುಡ್​ ಮತ್ತು ಬಾಲಿವುಡ್​ನಲ್ಲಿ ಅವರು ಮಿಂಚುತ್ತಿದ್ದಾರೆ. ಪ್ರಭಾಸ್​ ನಟನೆಯ ರಾಧೆ ಶ್ಯಾಮ್​ ಚಿತ್ರಕ್ಕೆ ಪೂಜಾ ನಾಯಕಿ. ಆಚಾರ್ಯ, ಸರ್ಕಸ್​, ಮೋಸ್ಟ್​ ಎಲಿಜಬಲ್​ ಬ್ಯಾಚುಲರ್​ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ಸದ್ಯ ಕೊರೊನಾ ಕಾರಣದಿಂದ ಅವರು ಗ್ಯಾಪ್​ ತೆಗೆದುಕೊಂಡಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಕೊರೊನಾದಿಂದ ಮೃತರಾಗುತ್ತಿದ್ದಾರೆ. ಎಷ್ಟೇ ಹಣ, ಪ್ರಭಾವ ಇದ್ದರೂ ಕೊವಿಡ್​ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚಿಕಿತ್ಸೆಗಾಗಿ ಎಲ್ಲರೂ ಹರಸಾಹಸ ಪಡಬೇಕಾಗಿದೆ. ಆದ್ದರಿಂದ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್​ ಆಗಿದೆ ಎಂದು ಗೊತ್ತಾದ ತಕ್ಷಣ ಅವರ ಅಭಿಮಾನಿಗಳು ತುಂಬ ಆತಂಕಗೊಂಡಿದ್ದರು. ಪ್ರತಿ ದಿನ ಪೂಜಾ ಅವರ ಹೆಲ್ತ್​ ಅಪ್​ಡೇಟ್​ ತಿಳಿದುಕೊಳ್ಳಲು ಫ್ಯಾನ್ಸ್​ ಕಾಯುತ್ತಿದ್ದರು. ಅಂತಿಮವಾಗಿ ಎಲ್ಲರಿಗೂ ಪೂಜಾ ಗುಡ್​ ನ್ಯೂಸ್​ ನೀಡಿದ್ದಾರೆ.

ಕೆ.ವಿ. ಆನಂದ್​, ಕೋಟಿ ರಾಮು, ರೇಣುಕಾ ಶರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕೊರೊನಾದಿಂದ ಮೃತರಾಗಿದ್ದಾರೆ. ಪ್ರತಿದಿನ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್​ ಮತ್ತು ವೆಂಟಿಲೇಟರ್​ಗಳ ಕೊರತೆ ಕೂಡ ಇದೆ. ಹಾಗಾಗಿ ಆದಷ್ಟು ಮನೆಯಲ್ಲೇ ಇದ್ದುಕೊಂಡು ಸೇಫ್​ ಆಗಿರಿ ಎಂದು ಬಹುತೇಕ ಸೆಲೆಬ್ರಿಟಿಗಳು ತಮ್ಮ ಅಭಿಮಾನಿಗಳಿಗೆ ಕಿವಿಮಾತು ಹೇಳುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ