AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ಪೂಜಾ ಹೆಗ್ಡೆಗೆ ಕಳೆಯಿತು ಕೊರೊನಾ ಕಂಟಕ; ನಿಟ್ಟುಸಿರು ಬಿಟ್ಟ ಅಭಿಮಾನಿಗಳು

Coronavirus: ನಿಮ್ಮೆಲ್ಲರ ಹಾರೈಕೆಯಿಂದ ಚಮತ್ಕಾರ ಆಗಿದೆ ಎನಿಸುತ್ತದೆ. ಅದಕ್ಕಾಗಿ ಸದಾ ಋಣಿ ಆಗಿರುತ್ತೇನೆ. ಎಲ್ಲರೂ ಸೇಫ್​ ಆಗಿರಿ ಎಂದು ನಟಿ ಪೂಜಾ ಹೆಗ್ಡೆ ಹೇಳಿದ್ದಾರೆ.

Pooja Hegde: ಪೂಜಾ ಹೆಗ್ಡೆಗೆ ಕಳೆಯಿತು ಕೊರೊನಾ ಕಂಟಕ; ನಿಟ್ಟುಸಿರು ಬಿಟ್ಟ ಅಭಿಮಾನಿಗಳು
ಕೊರೊನಾದಿಂದ ಚೇತರಿಸಿಕೊಂಡ ಪೂಜಾ ಹೆಗ್ಡೆ
ಮದನ್​ ಕುಮಾರ್​
| Edited By: |

Updated on: May 06, 2021 | 3:21 PM

Share

ಸದಾ ಕಾಲ ಸಿನಿಮಾ ಚಟುವಟಿಕೆಗಳ ಸಲುವಾಗಿ ಹೊರಗಡೆ ಸುತ್ತಾಡುವ ಸೆಲೆಬ್ರಿಟಿಗಳಿಗೆ ಕೊರೊನಾ ವೈರಸ್​ ಹೆಚ್ಚು ಕಾಟ ಕೊಡುತ್ತಿದೆ. ಟಾಲಿವುಡ್​ನ ಅನೇಕ ಕಲಾವಿದರಿಗೆ ಕೊವಿಡ್​ ಪಾಸಿಟಿವ್​ ಆಗಿದೆ. ಒಂದು ವಾರದ ಹಿಂದೆ ನಟಿ ಪೂಜಾ ಹೆಗ್ಡೆ ಕೂಡ ಕೊರೊನಾ ಸೋಂಕು ತಗುಲಿಸಿಕೊಂಡಿದ್ದರು. ಆದರೆ ಈಗ ಅವರಿಗೆ ನೆಗೆಟಿವ್​ ವರದಿ ಬಂದಿದೆ. ಆ ಸಿಹಿ ಸುದ್ದಿಯನ್ನು ಅವರು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

‘ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಚೆನ್ನಾಗಿ ಚೇತರಿಸಿಕೊಂಡಿದ್ದೇನೆ. ಕೊನೆಗೂ ನೆಗೆಟಿವ್​ ರಿಪೋರ್ಟ್​ ಬಂದಿದೆ. ಕೊರೊನಾದ ಹಿಂಬದಿಗೆ ಒದ್ದು ಕಳಿಸಿದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಚಮತ್ಕಾರ ಆಗಿದೆ ಎನಿಸುತ್ತದೆ. ಅದಕ್ಕಾಗಿ ಸದಾ ಋಣಿ ಆಗಿರುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಪೂಜಾ ಹೆಗ್ಡೆ ಹೇಳಿದ್ದಾರೆ.

ಕರ್ನಾಟಕ ಮೂಲದವರಾದ ಪೂಜಾ ಹೆಗ್ಡೆ ಬಹುಭಾಷೆಯಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಟಾಲಿವುಡ್​ ಮತ್ತು ಬಾಲಿವುಡ್​ನಲ್ಲಿ ಅವರು ಮಿಂಚುತ್ತಿದ್ದಾರೆ. ಪ್ರಭಾಸ್​ ನಟನೆಯ ರಾಧೆ ಶ್ಯಾಮ್​ ಚಿತ್ರಕ್ಕೆ ಪೂಜಾ ನಾಯಕಿ. ಆಚಾರ್ಯ, ಸರ್ಕಸ್​, ಮೋಸ್ಟ್​ ಎಲಿಜಬಲ್​ ಬ್ಯಾಚುಲರ್​ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ಸದ್ಯ ಕೊರೊನಾ ಕಾರಣದಿಂದ ಅವರು ಗ್ಯಾಪ್​ ತೆಗೆದುಕೊಂಡಿದ್ದಾರೆ.

ಅನೇಕ ಸೆಲೆಬ್ರಿಟಿಗಳು ಕೊರೊನಾದಿಂದ ಮೃತರಾಗುತ್ತಿದ್ದಾರೆ. ಎಷ್ಟೇ ಹಣ, ಪ್ರಭಾವ ಇದ್ದರೂ ಕೊವಿಡ್​ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಚಿಕಿತ್ಸೆಗಾಗಿ ಎಲ್ಲರೂ ಹರಸಾಹಸ ಪಡಬೇಕಾಗಿದೆ. ಆದ್ದರಿಂದ ಪೂಜಾ ಹೆಗ್ಡೆಗೆ ಕೊರೊನಾ ಪಾಸಿಟಿವ್​ ಆಗಿದೆ ಎಂದು ಗೊತ್ತಾದ ತಕ್ಷಣ ಅವರ ಅಭಿಮಾನಿಗಳು ತುಂಬ ಆತಂಕಗೊಂಡಿದ್ದರು. ಪ್ರತಿ ದಿನ ಪೂಜಾ ಅವರ ಹೆಲ್ತ್​ ಅಪ್​ಡೇಟ್​ ತಿಳಿದುಕೊಳ್ಳಲು ಫ್ಯಾನ್ಸ್​ ಕಾಯುತ್ತಿದ್ದರು. ಅಂತಿಮವಾಗಿ ಎಲ್ಲರಿಗೂ ಪೂಜಾ ಗುಡ್​ ನ್ಯೂಸ್​ ನೀಡಿದ್ದಾರೆ.

ಕೆ.ವಿ. ಆನಂದ್​, ಕೋಟಿ ರಾಮು, ರೇಣುಕಾ ಶರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಕೊರೊನಾದಿಂದ ಮೃತರಾಗಿದ್ದಾರೆ. ಪ್ರತಿದಿನ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್​ ಮತ್ತು ವೆಂಟಿಲೇಟರ್​ಗಳ ಕೊರತೆ ಕೂಡ ಇದೆ. ಹಾಗಾಗಿ ಆದಷ್ಟು ಮನೆಯಲ್ಲೇ ಇದ್ದುಕೊಂಡು ಸೇಫ್​ ಆಗಿರಿ ಎಂದು ಬಹುತೇಕ ಸೆಲೆಬ್ರಿಟಿಗಳು ತಮ್ಮ ಅಭಿಮಾನಿಗಳಿಗೆ ಕಿವಿಮಾತು ಹೇಳುತ್ತಿದ್ದಾರೆ.

ಇದನ್ನೂ ಓದಿ:

ಕೊರೊನಾ ವೈರಸ್​ನಿಂದ ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಪಾಂಡು ನಿಧನ

ಸಹಾಯಕ್ಕಾಗಿ ಅಂಗಲಾಚಿದ ಕೆಲವೇ ಗಂಟೆಗಳಲ್ಲಿ ಸ್ಟಾರ್​ ನಟಿ ಪಿಯಾ ಸಹೋದರ ಕೊರೊನಾದಿಂದ ನಿಧನ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ