AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhe Movie: ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಲೀಕ್​ ಆಯ್ತು ರಾಧೆ ಸಿನಿಮಾ; ಸಲ್ಲು ಅಭಿಮಾನಿಗಳಿಗೆ ಬೇಸರ

ತಮಿಳ್​ ರಾಕರ್ಸ್​ ಸೇರಿ ಸಾಕಷ್ಟು ವೆಬ್​ಸೈಟ್​ಗಳಲ್ಲಿ ರಾಧೆ ಸಿನಿಮಾ ಲೀಕ್ ಆಗಿದೆ. ಇದರ ಬಗ್ಗೆ ಸಲ್ಲು ಅಭಿಮಾನಿಗಳು ಕಿಡಿಕಾರಿದ್ದಾರೆ. ಸಿನಿಮಾ ಲೀಕ್​ ಮಾಡಿದವರ ವಿರುದ್ಧ ಸೈಬರ್​ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Radhe Movie: ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಲೀಕ್​ ಆಯ್ತು ರಾಧೆ ಸಿನಿಮಾ; ಸಲ್ಲು ಅಭಿಮಾನಿಗಳಿಗೆ ಬೇಸರ
ಸಲ್ಮಾನ್​ ಖಾನ್​
ರಾಜೇಶ್ ದುಗ್ಗುಮನೆ
|

Updated on: May 13, 2021 | 7:11 PM

Share

ಸಲ್ಮಾನ್​ ಖಾನ್​ ನಟನೆಯ ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​ ಸಿನಿಮಾ ಈದ್​ ಹಬ್ಬದ ಪ್ರಯುಕ್ತ ಇಂದು (ಮೇ 13) ರಿಲೀಸ್​ ಆಗಿದೆ. ಸಲ್ಲು ಸಿನಿಮಾ ಎಂದಮೇಲೆ ದೊಡ್ಡ ನಿರೀಕ್ಷೆ ಇರೋದು ಸಾಮಾನ್ಯ. ಅಂತೆಯೇ ರಾಧೆ ಚಿತ್ರ ಕೂಡ ದೊಡ್ಡ ಹೈಪ್​ ತೆಗೆದುಕೊಂಡಿತ್ತು. ಆದರೆ, ಟ್ವಿಟರ್​ನಲ್ಲಿ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಿರುವಾಗಲೇ ರಾಧೆ ಸಿನಿಮಾ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಆನ್​ಲೈನ್​ನಲ್ಲಿ ಲೀಕ್​ ಆಗಿದೆ. ಅದೂ ಎಚ್​​ಡಿ ಪ್ರಿಂಟ್​ ಅನ್ನೋದು ಬೇಸರದ ವಿಚಾರ.

ಕೊರೊನಾ ವೈರಸ್​ ಎರಡನೆ ಅಲೆ ಮಿತಿಮೀರಿ ಹರಡುತ್ತಿರುವುದರಿಂದ ಸಾಕಷ್ಟು ಕಡೆಗಳಲ್ಲಿ ಲಾಕ್​ಡೌನ್​ ಆದೇಶ ಹೊರಡಿಸಲಾಗಿದೆ. ಹೀಗಾಗಿ ದೇಶದ ಬಹುತೇಕ ಚಿತ್ರಮಂದಿರಗಳನ್ನು ಮುಚ್ಚುವ ಆದೇಶ ಹೊರಡಿಸಲಾಗಿದೆ. ಇದರ ಮಧ್ಯೆಯೂ ಸಲ್ಮಾನ್​ ಖಾನ್​ ನಟನೆಯ ಬಹುನಿರೀಕ್ಷಿತ ರಾಧೆ ಸಿನಿಮಾ ಒಟಿಟಿ ಹಾಗೂ ಲಾಕ್​ಡೌನ್​ ಇಲ್ಲದೇ ಇರುವ ದೇಶ, ನಗರಗಳ ಚಿತ್ರಮಂದಿರದಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ. ಆದರೆ ಮೊದಲ ದಿನವೇ ಚಿತ್ರ ಲೀಕ್​ ಆಗಿದೆ.

ತಮಿಳ್​ ರಾಕರ್ಸ್​ ಸೇರಿ ಸಾಕಷ್ಟು ವೆಬ್​ಸೈಟ್​ಗಳಲ್ಲಿ ರಾಧೆ ಸಿನಿಮಾ ಲೀಕ್ ಆಗಿದೆ. ಇದರ ಬಗ್ಗೆ ಸಲ್ಲು ಅಭಿಮಾನಿಗಳು ಕಿಡಿಕಾರಿದ್ದಾರೆ. ಸಿನಿಮಾ ಲೀಕ್​ ಮಾಡಿದವರ ವಿರುದ್ಧ ಸೈಬರ್​ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​ ಸಿನಿಮಾಲ್ಲಿ ಒಂದು ಪ್ರಮುಖ ಪಾತ್ರದಲ್ಲಿ ಹಿರಿಯ ನಟ ಜಾಕಿ ಶ್ರಾಫ್​ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಅವರು ಪೊಲೀಸ್​ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರಭುದೇವ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೆ ಅವಕಾಶ ಇರುವ ಕಡೆಗಳಲ್ಲಿ ‘ರಾಧೆ’ ಚಿತ್ರಮಂದಿರಗಳಲ್ಲೇ ತೆರೆ ಕಾಣಲಿದೆ. ಉಳಿದಂತೆ ಡಿ2ಎಚ್​, ಓಟಿಟಿ ಪ್ಲಾಟ್​ಫಾರ್ಮ್​ ಮುಂತಾದ ವೇದಿಕೆಗಳಲ್ಲಿ ಹಣ ಪಾವತಿಸಿ ಸಿನಿಮಾ ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂಲಕ ಹೊಸ ಸಾಧ್ಯತೆಗಳಿಗೆ ಚಿತ್ರರಂಗ ತೆರೆದುಕೊಳ್ಳುತ್ತಿದೆ.

ಇದನ್ನೂ ಓದಿ: Salman Khan: ರಾಧೆ ಚಿತ್ರಕ್ಕೆ 21 ಕಡೆ ಕತ್ತರಿ; ಸಲ್ಮಾನ್​ ಖಾನ್​ ಸಿನಿಮಾದಲ್ಲಿ ಅಂಥದ್ದೇನಿದೆ?

Radhe Movie Review: ‘ರಾಧೆ’ ನೋಡಿ ಏನು ಹೇಳಿದ್ರು ಸಲ್ಮಾನ್​ ಖಾನ್​ ಫ್ಯಾನ್ಸ್​? ಇಲ್ಲಿದೆ ಟ್ವಿಟರ್​ ವಿಮರ್ಶೆ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ