AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ರಾಧೆ ಶ್ಯಾಮ್ ಚಿತ್ರ ತಂಡ; ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್

ಪ್ರಭಾಸ್ ಅಭಿನಯದ ರಾಧೆ ಶ್ಯಾಮ್ ಈ ವರ್ಷದ ಅತ್ಯಂತ ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ಒಂದು.

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ರಾಧೆ ಶ್ಯಾಮ್ ಚಿತ್ರ ತಂಡ; ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್
ರಾಧೆ ಶ್ಯಾಮ್ ಚಿತ್ರ ಬಿಡುಗಡೆಯ ಹೊಸ ದಿನಾಂಕ ಘೋಷಣೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 02, 2022 | 12:08 PM

ಪ್ರಭಾಸ್ ಅಭಿನಯದ ರಾಧೆ ಶ್ಯಾಮ್ ಈ ವರ್ಷದ ಅತ್ಯಂತ ನಿರೀಕ್ಷಿತ ಪ್ಯಾನ್ ಇಂಡಿಯಾ (pan india movie) ಚಿತ್ರಗಳಲ್ಲಿ ಒಂದು. ಈ ಮೊದಲು  ಜನವರಿ 14ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕರೋನ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಯಿತು. ಪ್ರಭಾಸ್ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿರುವ ಸಂದರ್ಭದಲ್ಲಿ ಚಿತ್ರ ತಯಾರಕರಿಂದ ಸಿಹಿ ಸುದ್ಧಿಯೊಂದು ಬಂದಿದೆ. ಹೌದು, ಚಿತ್ರ ತಯಾರಕರು ಈಗ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅವರ ಮಧುರವಾದ ಪ್ರೇಮಕಥೆಯು ಮಾರ್ಚ್ 11, 2022 ರಂದು ಥಿಯೇಟರ್‌ಗಳಿಗೆ ಬರಲಿದೆ. ಪ್ರಭಾಸ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು,  11.03.22. ರಂದು ನಾನು ನಿಮ್ಮನ್ನು ನೋಡುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

View this post on Instagram

A post shared by Prabhas (@actorprabhas)

ಹೊಸ ಪೋಸ್ಟರ್‌ನೊಂದಿಗೆ ಹೊಸ ಬಿಡುಗಡೆಯ ದಿನಾಂಕವನ್ನು ಚಿತ್ರ ತಯಾರಕರು ಘೋಷಿಸಿದ್ದಾರೆ. ಅದು ತೀವ್ರವಾಗಿ ಕಾಣುವುದರೊಂದಿಗೆ, ಉತ್ಸಾಹದ ಮಟ್ಟವನ್ನು ಹೆಚ್ಚಿಸುತ್ತದೆ. ಕೆಟ್ಟ ಹವಾಮಾನದ ನಡುವೆ ಸಮುದ್ರದ ಮಧ್ಯದಲ್ಲಿ ಸಿಲುಕಿರುವ ದೋಣಿಯನ್ನು ಪೋಸ್ಟರ್ ಪ್ರಸ್ತುತಪಡಿಸುತ್ತದೆ. ರಾಧೆ ಶ್ಯಾಮ್ ಚಿತ್ರಮಂದಿರಕ್ಕೆ ಬರುತ್ತದೆ ಎಂದು ಅಭಿಮಾನಿಗಳು ಮತ್ತು ಪ್ರೇಕ್ಷಕರು ಉಸಿರು ಬಿಗಿಹಿಡಿದುಕೊಂಡು ಕಾಯುತ್ತಿದ್ದಾರೆ.

ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಕುತೂಹಲ ಸೃಷ್ಟಿಸಿದೆ. ನಿಗೂಢ ಮತ್ತು ಎಲ್ಲವನ್ನೂ ತಿಳಿದಿರುವ ಆದರೆ ಏನನ್ನೂ ಬಹಿರಂಗಪಡಿಸದ ವ್ಯಕ್ತಿ ಎಂದು ಹೇಳಿಕೊಳ್ಳುವ ಲವರ್ ಬಾಯ್ ‘ಹಸ್ತಸಾಮುದ್ರಿಕ ಶಾಸ್ತ್ರದ ಐನ್‌ಸ್ಟೈನ್’ ‘ವಿಕ್ರಮ್ ಆದಿತ್ಯ’ ಪಾತ್ರದಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಮತ್ತು ಪೂಜಾ ಅವರ ಪ್ರೇಮಕಥೆಯ ಜೊತೆಗೆ, ವಿನಾಶದ ಒಂದು ನೋಟವನ್ನು ಸಹ ಹಂಚಿಕೊಳ್ಳುತ್ತದೆ. ಗುಲ್ಶನ್ ಕುಮಾರ್ ಮತ್ತು ಟಿ-ಸೀರೀಸ್ ಪ್ರಸ್ತುತಪಡಿಸುವ ‘ರಾಧೆ ಶ್ಯಾಮ್’ ಯುವಿ ಕ್ರಿಯೇಷನ್ಸ್ ನಿರ್ಮಾಣವಾಗಿದೆ. ರಾಧಾ ಕೃಷ್ಣ ಕುಮಾರ್ ಅವರ ನಿರ್ದೇಶನ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಅವರ ಸಂಕಲನವಿದೆ. ಚಿತ್ರವನ್ನು ಭೂಷಣ್ ಕುಮಾರ್, ವಂಶಿ ಮತ್ತು ಪ್ರಮೋದ್ ನಿರ್ಮಿಸಿದ್ದಾರೆ.

ಇದನ್ನೂ ಓದಿ;

‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

‘ಪುಷ್ಪ 2’ ರಿಲೀಸ್​ ಡೇಟ್​ ಬಗ್ಗೆ ಬಿಗ್​ ಅಪ್​ಡೇಟ್​; ಮತ್ತೆ ಆ ಯಶಸ್ವಿ ದಿನಾಂಕದ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​?

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್