AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ರಾಧೆ ಶ್ಯಾಮ್ ಚಿತ್ರ ತಂಡ; ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್

ಪ್ರಭಾಸ್ ಅಭಿನಯದ ರಾಧೆ ಶ್ಯಾಮ್ ಈ ವರ್ಷದ ಅತ್ಯಂತ ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ಒಂದು.

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ರಾಧೆ ಶ್ಯಾಮ್ ಚಿತ್ರ ತಂಡ; ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್
ರಾಧೆ ಶ್ಯಾಮ್ ಚಿತ್ರ ಬಿಡುಗಡೆಯ ಹೊಸ ದಿನಾಂಕ ಘೋಷಣೆ
TV9 Web
| Edited By: |

Updated on: Feb 02, 2022 | 12:08 PM

Share

ಪ್ರಭಾಸ್ ಅಭಿನಯದ ರಾಧೆ ಶ್ಯಾಮ್ ಈ ವರ್ಷದ ಅತ್ಯಂತ ನಿರೀಕ್ಷಿತ ಪ್ಯಾನ್ ಇಂಡಿಯಾ (pan india movie) ಚಿತ್ರಗಳಲ್ಲಿ ಒಂದು. ಈ ಮೊದಲು  ಜನವರಿ 14ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಕರೋನ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲಾಯಿತು. ಪ್ರಭಾಸ್ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತರದಿಂದ ಕಾಯುತ್ತಿರುವ ಸಂದರ್ಭದಲ್ಲಿ ಚಿತ್ರ ತಯಾರಕರಿಂದ ಸಿಹಿ ಸುದ್ಧಿಯೊಂದು ಬಂದಿದೆ. ಹೌದು, ಚಿತ್ರ ತಯಾರಕರು ಈಗ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಅವರ ಮಧುರವಾದ ಪ್ರೇಮಕಥೆಯು ಮಾರ್ಚ್ 11, 2022 ರಂದು ಥಿಯೇಟರ್‌ಗಳಿಗೆ ಬರಲಿದೆ. ಪ್ರಭಾಸ್ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು,  11.03.22. ರಂದು ನಾನು ನಿಮ್ಮನ್ನು ನೋಡುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

View this post on Instagram

A post shared by Prabhas (@actorprabhas)

ಹೊಸ ಪೋಸ್ಟರ್‌ನೊಂದಿಗೆ ಹೊಸ ಬಿಡುಗಡೆಯ ದಿನಾಂಕವನ್ನು ಚಿತ್ರ ತಯಾರಕರು ಘೋಷಿಸಿದ್ದಾರೆ. ಅದು ತೀವ್ರವಾಗಿ ಕಾಣುವುದರೊಂದಿಗೆ, ಉತ್ಸಾಹದ ಮಟ್ಟವನ್ನು ಹೆಚ್ಚಿಸುತ್ತದೆ. ಕೆಟ್ಟ ಹವಾಮಾನದ ನಡುವೆ ಸಮುದ್ರದ ಮಧ್ಯದಲ್ಲಿ ಸಿಲುಕಿರುವ ದೋಣಿಯನ್ನು ಪೋಸ್ಟರ್ ಪ್ರಸ್ತುತಪಡಿಸುತ್ತದೆ. ರಾಧೆ ಶ್ಯಾಮ್ ಚಿತ್ರಮಂದಿರಕ್ಕೆ ಬರುತ್ತದೆ ಎಂದು ಅಭಿಮಾನಿಗಳು ಮತ್ತು ಪ್ರೇಕ್ಷಕರು ಉಸಿರು ಬಿಗಿಹಿಡಿದುಕೊಂಡು ಕಾಯುತ್ತಿದ್ದಾರೆ.

ಈಗಾಗಲೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಕುತೂಹಲ ಸೃಷ್ಟಿಸಿದೆ. ನಿಗೂಢ ಮತ್ತು ಎಲ್ಲವನ್ನೂ ತಿಳಿದಿರುವ ಆದರೆ ಏನನ್ನೂ ಬಹಿರಂಗಪಡಿಸದ ವ್ಯಕ್ತಿ ಎಂದು ಹೇಳಿಕೊಳ್ಳುವ ಲವರ್ ಬಾಯ್ ‘ಹಸ್ತಸಾಮುದ್ರಿಕ ಶಾಸ್ತ್ರದ ಐನ್‌ಸ್ಟೈನ್’ ‘ವಿಕ್ರಮ್ ಆದಿತ್ಯ’ ಪಾತ್ರದಲ್ಲಿ ಪ್ರಭಾಸ್‌ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಮತ್ತು ಪೂಜಾ ಅವರ ಪ್ರೇಮಕಥೆಯ ಜೊತೆಗೆ, ವಿನಾಶದ ಒಂದು ನೋಟವನ್ನು ಸಹ ಹಂಚಿಕೊಳ್ಳುತ್ತದೆ. ಗುಲ್ಶನ್ ಕುಮಾರ್ ಮತ್ತು ಟಿ-ಸೀರೀಸ್ ಪ್ರಸ್ತುತಪಡಿಸುವ ‘ರಾಧೆ ಶ್ಯಾಮ್’ ಯುವಿ ಕ್ರಿಯೇಷನ್ಸ್ ನಿರ್ಮಾಣವಾಗಿದೆ. ರಾಧಾ ಕೃಷ್ಣ ಕುಮಾರ್ ಅವರ ನಿರ್ದೇಶನ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಅವರ ಸಂಕಲನವಿದೆ. ಚಿತ್ರವನ್ನು ಭೂಷಣ್ ಕುಮಾರ್, ವಂಶಿ ಮತ್ತು ಪ್ರಮೋದ್ ನಿರ್ಮಿಸಿದ್ದಾರೆ.

ಇದನ್ನೂ ಓದಿ;

‘ಲವ್​ ಮಾಕ್ಟೇಲ್​ 3’ ಮಾಡ್ತೀರಾ ಎಂಬ ಪ್ರಶ್ನೆಗೆ ಮಿಲನಾ ನಾಗರಾಜ್​ ಏನ್​ ಅಂದ್ರು?

‘ಪುಷ್ಪ 2’ ರಿಲೀಸ್​ ಡೇಟ್​ ಬಗ್ಗೆ ಬಿಗ್​ ಅಪ್​ಡೇಟ್​; ಮತ್ತೆ ಆ ಯಶಸ್ವಿ ದಿನಾಂಕದ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​?

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ