AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಂದ್ರಮುಖಿ 2’ ಫಸ್ಟ್​ ಲುಕ್ ಬಿಡುಗಡೆ ಮಾಡಿದ ರಜನಿಕಾಂತ್​; ಗಣೇಶ ಚತುರ್ಥಿಗೆ ಬರಲಿದೆ ಬಹುನಿರೀಕ್ಷಿತ ಸಿನಿಮಾ

Chandramukhi 2: ರಾಘವ ಲಾರೆನ್ಸ್​ ಅಭಿನಯದ ‘ಚಂದ್ರಮುಖಿ 2’ ಚಿತ್ರಕ್ಕೆ ಪಿ. ವಾಸು ನಿರ್ದೇಶನ ಮಾಡಿದ್ದಾರೆ. ಚಂದ್ರಮುಖಿಯ ಪಾತ್ರಕ್ಕೆ ಕಂಗನಾ ರಣಾವತ್​ ಬಣ್ಣ ಹಚ್ಚಿದ್ದಾರೆ.

‘ಚಂದ್ರಮುಖಿ 2’ ಫಸ್ಟ್​ ಲುಕ್ ಬಿಡುಗಡೆ ಮಾಡಿದ ರಜನಿಕಾಂತ್​; ಗಣೇಶ ಚತುರ್ಥಿಗೆ ಬರಲಿದೆ ಬಹುನಿರೀಕ್ಷಿತ ಸಿನಿಮಾ
ರಾಘವ ಲಾರೆನ್ಸ್​
ಮದನ್​ ಕುಮಾರ್​
|

Updated on:Jul 31, 2023 | 6:31 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ‘ಚಂದ್ರಮುಖಿ 2’ (Chandramukhi 2) ಚಿತ್ರ ಕೂಡ ಇದೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಅನೇಕ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ರಾಘವ ಲಾರೆನ್ಸ್​ (Raghava Lawrence) ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಅವರ ಗೆಟಪ್​ ಹೇಗಿರಲಿದೆ ಎಂಬುದು ಈಗ ರಿವೀಲ್​​ ಆಗಿದೆ. ‘ಚಂದ್ರಮುಖಿ 2’ ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಅವರು ಬಿಡುಗಡೆ ಮಾಡಿದ್ದಾರೆ. ಆ ಮೂಲಕ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಕಂಗನಾ ರಣಾವತ್​ ಕೂಡ ಈ ಸಿನಿಮಾದಲ್ಲಿ ನಟಿಸಿದ್ದು, ಬಿಡುಗಡೆ ದಿನಾಂಕದ ಬಗ್ಗೆ ಸುಳಿವು ಬಿಟ್ಟುಕೊಡಲಾಗಿದೆ.

ರಾಘವ್ ಲಾರೆನ್ಸ್ ಮತ್ತು ಕಂಗನಾ ರಣಾವತ್ ಅವರು ತೆರೆ ಹಂಚಿಕೊಂಡಿರುವುದರಿಂದ ‘ಚಂದ್ರಮುಖಿ 2’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಕ್ರೇಜ್​ ಸೃಷ್ಟಿ ಆಗಿದೆ. ಈಗ ಈ ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿದೆ. ಗಣೇಶ ಚತುರ್ಥಿ ಪ್ರಯುಕ್ತ ಈ ಸಿನಿಮಾ ರಿಲೀಸ್​ ಆಗಲಿದೆ ಎಂಬುದನ್ನು ಹೊಸ ಪೋಸ್ಟರ್​ ಮೂಲಕ ತಿಳಿಸಲಾಗಿದೆ. ರಜನಿಕಾಂತ್ ಅವರು ಫಸ್ಟ್ ಲುಕ್ ಪೋಸ್ಟರ್​ ಬಿಡುಗಡೆ ಮಾಡಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದೆ. ರಜನಿಕಾಂತ್​ಗೆ ಚಿತ್ರತಂಡದವರು ಧನ್ಯವಾದ ತಿಳಿಸಿದ್ದಾರೆ.

ಈ ಸಿನಿಮಾದಲ್ಲಿ ರಾಘವ್ ಲಾರೆನ್ಸ್ ಅವರು ವೆಟ್ಟೈಯನ್ ರಾಜ ಎಂಬ ಪಾತ್ರ ಮಾಡುತ್ತಿದ್ದಾರೆ. ಆ ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿರುವ ಪೋಸ್ಟರ್​ ವೈರಲ್​ ಆಗಿದೆ. ಅಂದಹಾಗೆ, ಇದು ಪ್ಯಾನ್​ ಇಂಡಿಯಾ ಸಿನಿಮಾ. ಗಣಪತಿ ಹಬ್ಬದ ಸಂದರ್ಭದಲ್ಲಿ ತಮಿಳು, ಕನ್ನಡ, ಹಿಂದಿ, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ‘ಚಂದ್ರಮುಖಿ 2’ ಬಿಡುಗಡೆ ಆಗಲಿದೆ. ಅನುಭವಿ ನಿರ್ದೇಶಕ ಪಿ. ವಾಸು ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದಾರೆ. ಚಂದ್ರಮುಖಿಯ ಪಾತ್ರಕ್ಕೆ ಕಂಗನಾ ರಣಾವತ್​ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ: ‘ಆ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುವಾಗ ನಿದ್ದೆ ಬಂದಿಲ್ಲ’; ದೆವ್ವದ ಚಿತ್ರಕ್ಕೆ ಹೆದರಿದ್ರಾ ಕೀರವಾಣಿ?

ಪ್ರತಿಷ್ಠಿತ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆಯ ಮೂಲಕ ಸುಭಾಷ್ ಕರಣ್ ಅವರು ತುಂಬಾ ಅದ್ದೂರಿಯಾಗಿ ‘ಚಂದ್ರಮುಖಿ 2’ ಸಿನಿಮಾವನ್ನು ನಿರ್ಮಿಸಿದ್ದಾರೆ. ಆಸ್ಕರ್ ಪ್ರಶಸ್ತಿ ಪುರಸ್ಕೃತ ಎಂ.ಎಂ. ಕೀರವಾಣಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಆರ್.ಡಿ. ರಾಜಶೇಖರ್ ಅವರ ಛಾಯಾಗ್ರಹಣ, ಅಂಥೋನಿ ಅವರ ಸಂಕಲನ ಈ ಸಿನಿಮಾಗೆ ಇದೆ. ಲಕ್ಷ್ಮೀ ಮೆನನ್, ವಡಿವೇಲು, ರಾಧಿಕಾ ಶರತ್ ಕುಮಾರ್, ಮಹಿಮಾ ನಂಬಿಯಾರ್, ಸುರೇಶ್ ಮೆನನ್ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಚಂದ್ರುಮುಖಿ-2 ಸಿನಿಮಾ ಬಿಡುಗಡೆ ದಿನಾಂಕ ನಿಗದಿ: ಇದು ಆಪ್ತಮಿತ್ರ 2 ರೀಮೇಕಾ?

ರಜನಿಕಾಂತ್​ ನಟಿಸಿದ್ದ ‘ಚಂದ್ರಮುಖಿ’ ಸಿನಿಮಾ 2005ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಅದಾಗಿ 18 ವರ್ಷಗಳ ನಂತರ ‘ಚಂದ್ರಮುಖಿ’ ಚಿತ್ರಕ್ಕೆ ಸೀಕ್ವೆಲ್ ಬರುತ್ತಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:26 pm, Mon, 31 July 23

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!