AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ

‘ನಾವು ಹೊಸ ಪರಿಸರಕ್ಕೆ ಅಥವಾ ಹೊಸ ಮನೆಗೆ ಹೋದಾಗ ಸುತ್ತಮುತ್ತಲಿನ ವಾತಾವರಣ, ಅಲ್ಲಿನ ನಾಯಿಗಳ ಸ್ವಭಾವ, ಅವುಗಳ ಅಭ್ಯಾಸಗಳನ್ನು ಅರ್ಥ ಮಾಡಿಕೊಳ್ಳಲು ಸಮಯ ಹಿಡಿಯುತ್ತದೆ ಅಂತ ನಾನು ಹೇಳಿದ್ದೆ. ಜನರನ್ನು ನಾಯಿಗಳೆಂದು ಕರೆಯುಂತಹ ವ್ಯಕ್ತಿ ನಾನಲ್ಲ. ದಯವಿಟ್ಟು ಪೂರ್ತಿ ವಿಡಿಯೋ ನೋಡಿ’ ಎಂದು ರಾಘವ ಲಾರೆನ್ಸ್ ಮನವಿ ಮಾಡಿದ್ದಾರೆ.

ಜನರನ್ನು ಬೀದಿ ನಾಯಿಗೆ ಹೋಲಿಸಿದ ರಾಘವ ಲಾರೆನ್ಸ್? ಆಕ್ರೋಶದ ಬಳಿಕ ಸ್ಪಷ್ಟನೆ ನೀಡಿದ ನಟ
Raghava Lawrence
ಮದನ್​ ಕುಮಾರ್​
|

Updated on: Jun 15, 2026 | 6:44 PM

Share

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶದ ಸುಳಿವು ನೀಡಿ ಸುದ್ದಿಯಾಗಿದ್ದ ಖ್ಯಾತ ನಟ, ನೃತ್ಯ ನಿರ್ದೇಶಕ ರಾಘವ ಲಾರೆನ್ಸ್ (Raghava Lawrence) ಈಗ ಹೊಸದೊಂದು ವಿವಾದಕ್ಕೆ ಸಿಲುಕಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಆಡಳಿತದ ಕುರಿತು ಮಾತನಾಡುವಾಗ ಅವರು ಬಳಸಿದ ಉದಾಹರಣೆಯೊಂದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ರಾಘವ ಲಾರೆನ್ಸ್ ಅವರು ಜನರನ್ನು ಬೀದಿ ನಾಯಿಗಳಿಗೆ (Stray Dog) ಹೋಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

ತಮ್ಮ ರಾಜಕೀಯ ಎಂಟ್ರಿ ಮತ್ತು ವಿಜಯ್ ನೇತೃತ್ವದ ನೂತನ ತಮಿಳುನಾಡು ಸರ್ಕಾರದ ಒಂದು ತಿಂಗಳ ಆಡಳಿತದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಘವ ಲಾರೆನ್ಸ್, ಹೊಸ ಸರ್ಕಾರಕ್ಕೆ ಸ್ವಲ್ಪ ಸಮಯ ನೀಡಬೇಕು ಎಂದು ವಾದಿಸಿದ್ದರು. ‘ಈ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಹೇಗೆ ಕೆಲಸ ಮಾಡಿದೆ ಎಂದು ಕೇಳಿದರೆ, ತುಂಬಾ ಚೆನ್ನಾಗಿ ಮಾಡಿದೆ ಎಂದೇ ಹೇಳುತ್ತೇನೆ. ನಾವು ಹೊಸ ಮನೆಗೆ ಹೋಗುವ ಮುನ್ನ ಒಂದೆರಡು ಬಾರಿ ಭೇಟಿ ನೀಡುತ್ತೇವೆ. ಆದರೆ ಅಲ್ಲಿ ವಾಸಿಸಲು ಆರಂಭಿಸಿದಾಗಷ್ಟೇ ಅಲ್ಲಿನ ಪೈಪ್‌ಗಳು ಅಥವಾ ಫ್ಯಾನ್‌ಗಳಲ್ಲಿರುವ ಸಮಸ್ಯೆಗಳು ನಮಗೆ ನಿಧಾನವಾಗಿ ತಿಳಿಯುತ್ತವೆ’ ಎಂದು ಉದಾಹರಣೆ ನೀಡಿದ್ದರು.

ಮುಂದುವರಿದು ಮಾತನಾಡಿದ್ದ ಅವರು, ‘ಹೊಸ ಮನೆಗೆ ಹೋದಾಗ ಆ ಪ್ರದೇಶದ ಬೀದಿ ನಾಯಿಗಳು ಸಹ ನಮ್ಮನ್ನು ನೋಡಿ ಬೊಗಳುತ್ತವೆ. ಅದು ನಮ್ಮೊಂದಿಗೆ ಹೊಂದಿಕೊಳ್ಳಲು ನಾವು ಅದಕ್ಕೆ ಬಿಸ್ಕೆಟ್ ಅಥವಾ ಬಿರಿಯಾನಿ ನೀಡಬೇಕಾಗುತ್ತದೆ. ಒಂದು ಮನೆ ಮತ್ತು ನಾಯಿಯ ಪರಿಸ್ಥಿತಿಯೇ ಹೀಗಿರುವಾಗ, ಇಡೀ ರಾಜ್ಯವನ್ನು ಆಳುವ ಜವಾಬ್ದಾರಿ ಸಿಕ್ಕಾಗ ಸಮಯ ಬೇಡವೇ? ಅವರಿಗೆ ಸ್ವಲ್ಪ ಸಮಯ ಕೊಡಿ. ಸಕಾರಾತ್ಮಕವಾಗಿ ಯೋಚಿಸಿ. ನೀವು ಬದಲಾವಣೆ ಬಯಸಿದ್ದೀರಿ, ಈಗ ಬದಲಾವಣೆ ಬಂದಿದೆ. ಸಮಯ ನೀಡಿದರೆ ಎಲ್ಲವೂ ಸರಿಹೋಗುತ್ತದೆ’ ಎಂದಿದ್ದರು.

ಲಾರೆನ್ಸ್ ಅವರ ಈ ಸುದ್ದಿಗೋಷ್ಠಿಯ ಸಣ್ಣ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕರು ಕೆರಳಿದ್ದಾರೆ. ತಮಿಳುನಾಡಿನ ಜನರನ್ನು ಲಾರೆನ್ಸ್ ಅವರು ಬೀದಿ ನಾಯಿಗಳಿಗೆ ಹೋಲಿಸಿದ್ದಾರೆ ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಸರ್ಕಾರವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಹಕ್ಕು, ಅದನ್ನು ಬೊಗಳುವುದು ಎನ್ನುತ್ತೀರಾ? ಅಧಿಕಾರದ ಅಹಂಕಾರವನ್ನು ಲಾರೆನ್ಸ್ ಬೇಗನೇ ಕಲಿತಿದ್ದಾರೆ’ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ತಾವೇ ಪೂರ್ತಿ ವಿಡಿಯೋ ಹಂಚಿಕೊಳ್ಳುವ ಮೂಲಕ ಸ್ಪಷ್ಟನೆ ನೀಡಿರುವ ರಾಘವ ಲಾರೆನ್ಸ್, ‘ನನ್ನ ಅಭಿಮಾನಿಗಳು ಮತ್ತು ಜನಸಾಮಾನ್ಯರು ನನಗೆ ತಾಯಿಗೆ ಸಮಾನ. ನಾನು ಜನರನ್ನು ನಾಯಿಗಳಿಗೆ ಹೋಲಿಸಿದ್ದೇನೆ ಎಂದು ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಇದು ಸಂಪೂರ್ಣ ತಪ್ಪು ಮತ್ತು ದಿಕ್ಕು ತಪ್ಪಿಸುವಂತದ್ದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ನಾನು ಹೇಳಿದ್ದು ಇಷ್ಟೇ – ನಾವು ಹೊಸ ಪರಿಸರಕ್ಕೆ ಅಥವಾ ಹೊಸ ಮನೆಗೆ ಹೋದಾಗ ಸುತ್ತಮುತ್ತಲಿನ ವಾತಾವರಣ, ಅಲ್ಲಿನ ನಾಯಿಗಳ ಸ್ವಭಾವ, ಅವುಗಳ ಅಭ್ಯಾಸಗಳನ್ನು ಅರ್ಥ ಮಾಡಿಕೊಳ್ಳಲು ಸಮಯ ಹಿಡಿಯುತ್ತದೆ ಅಷ್ಟೇ. ಜನರನ್ನು ನಾಯಿಗಳೆಂದು ಕರೆಯುವಷ್ಟು ನಾನು ನಿರ್ದಯಿ ಅಲ್ಲ. ನಾನು ಕೇವಲ ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಎಲ್ಲೂ ಜನರನ್ನು ಪ್ರಸ್ತಾಪಿಸಿಲ್ಲ. ದಯವಿಟ್ಟು ಪೂರ್ತಿ ವಿಡಿಯೋ ನೋಡಿ ಸತ್ಯ ತಿಳಿದುಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?