AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಘವ್ ಲಾರೆನ್ಸ್ ರಾಜಕೀಯ ಪ್ರವೇಶ, ನಿರ್ಧಾರ ಅಭಿಮಾನಿಗಳ ಕೈಯಲ್ಲಿ

Raghava Lawrence politics: ನಟ ರಾಘವ್ ಲಾರೆನ್ಸ್ ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯದಿಂದಲೂ ಬಲು ಜನಪ್ರಿಯರು. ಹಲವಾರು ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದಾರೆ. ಅಂಗವಿಕಲರಿಗೆ ಬದುಕಲು ಆಸರೆ ಒದಗಿಸಿದ್ದಾರೆ. ಹಲವು ಮಹಿಳೆಯರಿಗೆ ಆಟೊ ರಿಕ್ಷಾ ಕೊಡಿಸಿ ಜೀವನ ಸಾಗಿಸಲು ನೆರವಾಗಿದ್ದಾರೆ. ಇನ್ನೂ ಅನೇಕ ಸಾಮಾಜಿಕ ಸೇವೆಗಳನ್ನು ಅವರು ಮಾಡುತ್ತಾ ಬಂದಿದ್ದಾರೆ. ಇದೀಗ ರಾಘವ್ ಲಾರೆನ್ಸ್ ರಾಜಕೀಯಕ್ಕೆ ಕಾಲಿರಿಸಲು ಮುಂದಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಜನವಾಬ್ದಾರಿಯನ್ನು ಅಭಿಮಾನಿಗಳಿಗೆ ವಹಿಸಿದ್ದಾರೆ.

ರಾಘವ್ ಲಾರೆನ್ಸ್ ರಾಜಕೀಯ ಪ್ರವೇಶ, ನಿರ್ಧಾರ ಅಭಿಮಾನಿಗಳ ಕೈಯಲ್ಲಿ
Raghav Lawrence
ಮಂಜುನಾಥ ಸಿ.
|

Updated on: Jun 12, 2026 | 12:52 PM

Share

ಸಿನಿಮಾ ನಟ, ನಿರ್ದೇಶಕ ಮತ್ತು ಜನಪ್ರಿಯ ಕೋರಿಯೋಗ್ರಾಫರ್ ರಾಘವ್ ಲಾರೆನ್ಸ್ (Raghav Lawrence) ಸಿನಿಮಾಗಳ ಜೊತೆಗೆ ತಮ್ಮ ಸಾಮಾಜಿಕ ಕಾರ್ಯದಿಂದಲೂ ಬಲು ಜನಪ್ರಿಯರು. ದಶಕಕ್ಕೂ ಹೆಚ್ಚು ಸಮಯದಿಂದಲೂ ರಾಘವ್ ಲಾರೆನ್ಸ್ ತಮ್ಮನ್ನು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಮಕ್ಕಳಿಗೆ ಶಿಕ್ಷಣ ಕೊಡಿಸಿದ್ದಾರೆ. ಅಂಗವಿಕಲರಿಗೆ ಬದುಕಲು ಆಸರೆ ಒದಗಿಸಿದ್ದಾರೆ. ಹಲವು ಮಹಿಳೆಯರಿಗೆ ಆಟೊ ರಿಕ್ಷಾ ಕೊಡಿಸಿ ಜೀವನ ಸಾಗಿಸಲು ನೆರವಾಗಿದ್ದಾರೆ. ಇನ್ನೂ ಅನೇಕ ಸಾಮಾಜಿಕ ಸೇವೆಗಳನ್ನು ಅವರು ಮಾಡುತ್ತಾ ಬಂದಿದ್ದಾರೆ. ಇದೀಗ ರಾಘವ್ ಲಾರೆನ್ಸ್ ರಾಜಕೀಯಕ್ಕೆ ಕಾಲಿರಿಸಲು ಮುಂದಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಜನವಾಬ್ದಾರಿಯನ್ನು ಅಭಿಮಾನಿಗಳಿಗೆ ವಹಿಸಿದ್ದಾರೆ.

ರಾಘವ್ ಲಾರೆನ್ಸ್ ಅವರು ರಾಜಕೀಯ ಪ್ರವೇಶದ ಬಗ್ಗೆ ಕಳೆದ ಕೆಲ ದಿನಗಳಿಂದಲೂ ಸುದ್ದಿಗಳು ಹರಿದಾಡುತ್ತಿದ್ದು, ತಮಿಳುನಾಡು ಸಿಎಂ ವಿಜಯ್ ಅವರು, ಎರಡು ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆದ್ದು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಕ್ಷೇತ್ರದಿಂದ (ತಿರುಚ್ಚೀರ್ ಈಸ್ಟ್) ರಾಘವ್ ಲಾರೆನ್ಸ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ವಿಜಯ್ ಅವರ ಪಕ್ಷದಿಂದಲೇ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಇದರ ನಡುವೆ ಖುದ್ದು ರಾಘವ್ ಲಾರೆನ್ಸ್ ಅವರೇ ರಾಜಕೀಯ ಎಂಟ್ರಿಯ ಸುಳಿವು ನೀಡಿದ್ದಾರೆ.

ರಾಘವ್ ಲಾರೆನ್ಸ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ತಾವು ರಜನೀಕಾಂತ್ ಅವರು ರಾಜಕೀಯ ಪ್ರವೇಶಿಸುವಾಗಲೇ ಅವರೊಟ್ಟಿಗೆ ರಾಜಕೀಯ ಪ್ರವೇಶಕ್ಕೆ ಉತ್ಸುಕರಾಗಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ತಮ್ಮ ತಾಯಿ ಬೇಡ ಎಂದಿದ್ದ ಕಾರಣಕ್ಕಾಗಿ ಆಗಲೂ ಮತ್ತು ವಿಜಯ್ ಅವರು ಮೊದಲ ಬಾರಿ ಸಿಎಂ ಆದಾಗಲೂ ರಾಜಕೀಯದಿಂದ ದೂರ ಇದ್ದಿದ್ದಾಗಿ ಹೇಳಿದ್ದಾರೆ. ಆದರೆ ವಿಜಯ್ ಅವರ ಗೆಲುವು ಅವರ ತಾಯಿಯವರ ಮನಸ್ಥಿತಿಯನ್ನು ಬದಲಾಯಿಸಿದ್ದು, ಈಗ ತಾಯಿಯ ಅನುಮತಿ ಪಡೆದು ರಾಜಕೀಯಕ್ಕೆ ಬರುವ ಮನಸ್ಸು ಮಾಡಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ದೊಡ್ಡ ಸಿನಿಮಾ ಅವಕಾಶ ನಿರಾಕರಿಸಿದ ರಾಘವ್ ಲಾರೆನ್ಸ್, ಆದರೆ ಒಳ್ಳೆಯ ಕಾರಣಕ್ಕೆ

ವಿಜಯ್ ಅವರ ಟಿವಿಕೆ ಪಕ್ಷದಿಂದ, ವಿಜಯ್ ಅವರ ಕ್ಷೇತ್ರವೇ ಆಗಿರುವ ತಿರುಚ್ಚಿ ಈಸ್ಟ್​​ನಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ರಾಘವ್ ಲಾರೆನ್ಸ್ ಹೇಳಿದ್ದಾರೆ. ಆದರೆ ತಾವು ರಾಜಕೀಯ ಪ್ರವೇಶಿಸಬೇಕೊ ಬೇಡವೊ ಎಂಬ ನಿರ್ಧಾರವನ್ನು ಅಭಿಮಾನಿಗಳ ಮೇಲೆ ಬಿಟ್ಟಿರುವುದಾಗಿ ಹೇಳಿರುವ ರಾಘವ್ ಲಾರೆನ್ಸ್, ತಾವು ರಾಜಕೀಯಕ್ಕೆ ಬರುವುದು ಇಷ್ಟವಾದರೆ ಎಸ್ ಎಂದೂ, ಇಷ್ಟವಿಲ್ಲವಾದರೆ ನೋ ಎಂದೂ ಕಮೆಂಟ್ ಮಾಡಿರೆಂದು ಹೇಳಿದ್ದಾರೆ. ಈಗಾಗಲೇ ಸಾಕಷ್ಟು ಮಂದಿ ಲಾರೆನ್ಸ್ ವಿಡಿಯೋಕ್ಕೆ ‘ಎಸ್’ ಎಂದು ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ನೋ ಎಂದು ಸಹ ಕಮೆಂಟ್ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!