AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ಶುಭಾ ಪೂಂಜಾ ಇಲ್ಲದಿರುವ ಜೀವನ ನನಗೂ ಬೇಡ; ರಘು ಗೌಡ ಹೀಗ್ಯಾಕಾದ್ರು?

Bigg Boss Kannada: ಮನೆಯವರಿಗೆ ನೀಡಿರುವ ಸೌಲಭ್ಯಗಳನ್ನು ಬಿಗ್​ ಬಾಸ್​ ಹಿಂಪಡೆದಿದ್ದಾರೆ. ಹೀಗಾಗಿ ಕೆಲವರು ಹಣ್ಣು-ಹಂಪಲು ತಿಂದುಕೊಂಡು ದಿನ ಕಳೆಯುತ್ತಿದ್ದಾರೆ.  

Shubha Poonja: ಶುಭಾ ಪೂಂಜಾ ಇಲ್ಲದಿರುವ ಜೀವನ ನನಗೂ ಬೇಡ; ರಘು ಗೌಡ ಹೀಗ್ಯಾಕಾದ್ರು?
ರಘು ಗೌಡ - ಬಿಗ್​ ಬಾಸ್​ ಕನ್ನಡ ಸೀಸನ್​ 8
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Apr 23, 2021 | 6:58 PM

ಬಿಗ್​ ಬಾಸ್​ ಮನೆಗೆ 17 ಸ್ಪರ್ಧಿಗಳು ಎಂಟ್ರಿ ತೆಗೆದುಕೊಂಡಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಸೇರಿದಾಗ ಒಬ್ಬರಿಗೊಬ್ಬರಿಗೆ ಪರಿಚಯವಿರಲಿಲ್ಲ. ಈಗ ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಸೇರಿ 50 ದಿನಗಳು ಕಳೆದಿವೆ. ಈಗ ಒಬ್ಬರಿಗೊಬ್ಬರು ತುಂಬಾನೇ ಆಪ್ತರಾಗಿದ್ದಾರೆ. ಯಾರೊಬ್ಬರು ಬಿಗ್​ ಬಾಸ್​ ಮನೆಯಿಂದ ಹೊರ ಹೋದರೂ ಸ್ಪರ್ಧಿಗಳಿಗೆ ತುಂಬಾನೇ ಬೇಸರ ಆಗೋದು ಗ್ಯಾರಂಟಿ. ಈಗ ಶುಭಾ ಪೂಂಜಾ ಇಲ್ಲದಿರುವ ಜೀವನ ನನಗೂ ಬೇಡ ಎಂದು ರಘು ಹೇಳಿರುವ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಶುಭಾ ಪೂಂಜಾ ಸಖತ್​ ಜಾಲಿಯಾಗಿರುತ್ತಾರೆ. ಅವರು ಎಲ್ಲರ ಜತೆಗೂ ಉತ್ತಮವಾಗಿ ಬೆರೆಯುತ್ತಾರೆ. ಕೆಲವರ ಜತೆಗೆ ಶುಭಾ ಹೆಚ್ಚು ಸಲುಗೆ ಹೊಂದಿದ್ದಾರೆ. ರಘು ಗೌಡ, ಮಂಜು ಪಾವಗಡ ಹಾಗೂ ರಾಜೀವ್​ ಜತೆ ಶುಭಾ ಹೆಚ್ಚು ಆಪ್ತರಾಗಿರುತ್ತಾರೆ. ಈಗ ಅಡುಗೆ ಮನೆಯಲ್ಲಿ ನಡೆದ ಘಟನೆ ಒಂದು ಎಲ್ಲರ ಗಮನ ಸೆಳೆದಿದೆ.

ಮನೆಯವರಿಗೆ ನೀಡಿರುವ ಸೌಲಭ್ಯಗಳನ್ನು ಬಿಗ್​ ಬಾಸ್​ ಹಿಂಪಡೆದಿದ್ದಾರೆ. ಇದನ್ನು ಮರಳಿ ಪಡೆಯೋಕೆ ಬಿಗ್​ ಬಾಸ್​ ಟಾಸ್ಕ್​ ಒಂದನ್ನು ನೀಡುತ್ತಿದ್ದಾರೆ. ಈ ಟಾಸ್ಕ್​ನಲ್ಲಿ ಕೆಲವರಿಗೆ ಗ್ಯಾಸ್​ ಸಿಕ್ಕಿಲ್ಲ. ಹೀಗಾಗಿ ಅವರು ಹಣ್ಣು-ಹಂಪಲು ತಿಂದುಕೊಂಡು ದಿನ ಕಳೆಯುತ್ತಿದ್ದಾರೆ.

ಅದೇ ರೀತಿ ಶುಭಾ ಸೇಬು ಹಣ್ಣು ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಒಮ್ಮೆ ಸೇಬುಹಣ್ಣು ಕತ್ತರಿಸುವಾಗ ಕೊಳೆತ ಸೇಬು ಹಣ್ಣು ಸಿಕ್ಕಿದೆ. ಬೇರೆಯವರಿಗೋಸ್ಕರ ನಾನು ತ್ಯಾಗ ಮಾಡುತ್ತೇನೆ. ಈ ಕೊಳೆತ ಸೇಬು ಹಣ್ಣನ್ನು ನಾನು ತಿನ್ನುತ್ತೇನೆ ಎಂದು ಶುಭಾ ಅದನ್ನು ತಿನ್ನಲು ಮುಂದಾಗಿದ್ದಾರೆ.

ಇದನ್ನು ನೋಡಿದ ರಘು ಗೌಡ ಕೊಳೆತ ಹಣ್ಣನ್ನು ತಿನ್ನುವುದನ್ನು ತಡೆಯೋಕೆ ಮುಂದಾಗಿದ್ದಾರೆ. ಆದಾಗ್ಯೂ ಶುಭಾ ಹಣ್ಣು ತಿನ್ನುವುದನ್ನು ನಿಲ್ಲಿಸಲಿಲ್ಲ. ಆಗ ರಘು, ಶುಭಾ ಪೂಂಜಾ ಇಲ್ಲದಿರುವ ಜೀವನ ನನಗೂ ಬೇಡ. ನಾನು ಕೊಳೆತ ಹಣ್ಣನ್ನು ತಿಂದು ಸಾಯುತ್ತೇನೆ ಎಂದು ನಾಟಕ ಮಾಡಿದ್ದಾರೆ. ಈ ವಿಡಿಯೋವನ್ನು ಕಲರ್ಸ್​ ಕನ್ನಡ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ: Kichcha Sudeep: ಆರೋಗ್ಯದ ಬಗ್ಗೆ ಅಪ್​ಡೇಟ್​ ನೀಡಿದ ಸುದೀಪ್​; ಈ ವಾರವೂ ಬಿಗ್​ ಬಾಸ್​ಗೆ ಕಿಚ್ಚ ಗೈರು

Published On - 4:47 pm, Fri, 23 April 21

ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್